ಅರ್ಜಿಯಲ್ಲಿ “ಕೋವಿಡ್’ ಪ್ರಸ್ತಾವ ಇರಲಿಲ್ಲ!

ಪತಂಜಲಿಯ ಔಷಧಿ ಬಗ್ಗೆ ಕೇಂದ್ರಕ್ಕೆ ಉತ್ತರಾಖಂಡ ಸರಕಾರದ ಮಾಹಿತಿ

Team Udayavani, Jun 25, 2020, 9:16 AM IST

ಅರ್ಜಿಯಲ್ಲಿ “ಕೋವಿಡ್’ ಪ್ರಸ್ತಾವ ಇರಲಿಲ್ಲ!

ಹೊಸದಿಲ್ಲಿ: “ಯೋಗಗುರು ಬಾಬಾ ರಾಮ್‌ದೇವ್‌ ಒಡೆತನದ ಪತಂಜಲಿ ಸಂಸ್ಥೆಯು ಔಷಧಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ಎಲ್ಲೂ “ಕೋವಿಡ್’ ಅಥವಾ “ಕೋವಿಡ್ ಔಷಧ’ ಎಂಬ ಪ್ರಸ್ತಾವವೇ ಇರಲಿಲ್ಲ’ ಎಂದು ಉತ್ತರಾಖಂಡ ಸರಕಾರ ಕೇಂದ್ರಕ್ಕೆ ಮಾಹಿತಿ ನೀಡಿದೆ.

“ಕೊರೊನಿಲ್‌’ ಎಂಬ ಔಷಧವನ್ನು ಮಂಗಳವಾರ ಬಿಡುಗಡೆ ಮಾಡಿದ್ದ ಪತಂಜಲಿ, ಇದು ಕೋವಿಡ್ ಸೋಂಕಿತರನ್ನು ಕೇವಲ 7 ದಿನಗಳಲ್ಲಿ ಗುಣಮುಖ ರನ್ನಾಗಿ ಮಾಡುತ್ತದೆ ಎಂದು ಹೇಳಿಕೊಂಡಿತ್ತು. ಬಿಡುಗಡೆ ಬೆನ್ನಲ್ಲೇ ಈ ಕುರಿತು ಅಧಿಸೂಚನೆ ಹೊರಡಿಸಿದ್ದ ಆಯುಷ್‌ ಇಲಾಖೆ, ಇದು “ಕೋವಿಡ್ ಔಷಧ’ ಎಂದು ಪ್ರಚಾರ ನಡೆಸದಂತೆ ಸಂಸ್ಥೆಗೆ ಸೂಚನೆ ನೀಡಿತ್ತು. ಜೊತೆಗೆ ಪರವಾನಗಿ ವಿವರಗಳನ್ನು ಸಲ್ಲಿಸುವಂತೆ ಉತ್ತರಾಖಂಡ ಸರಕಾರಕ್ಕೆ ತಿಳಿಸಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಸರಕಾರ, ಪತಂಜಲಿ ಸಲ್ಲಿಸಿದ್ದ ಅರ್ಜಿಯಲ್ಲಿ “ಕೋವಿಡ್ ವೈರಸ್‌ ಸೋಂಕಿನ ಔಷಧ’ ಎಂಬ ಪ್ರಸ್ತಾಪ ಇರಲಿಲ್ಲ.
ರೋಗನಿರೋಧಕ ಶಕ್ತಿ ಹೆಚ್ಚಳ, ಕೆಮ್ಮು ಮತ್ತು ಜ್ವರ ಕಡಿಮೆ ಮಾಡುವ ಔಷಧಕ್ಕೆ ಮಾತ್ರ ನಾವು ಪರವಾನಗಿ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ. ಈ ಸಂಬಂಧ ಪತಂಜಲಿ ಆಯುರ್ವೇದ ಸಂಸ್ಥೆಗೆ ನೋಟಿಸ್‌ ನೀಡುವುದಾಗಿಯೂ ಸರಕಾರ ಹೇಳಿದೆ.

ಒಳ್ಳೆಯ ಕೆಲಸವೇ, ಆದರೆ…
“ಯೋಗಗುರು ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆ ಕೊರೊನಾದಿಂದ ಬಳಲುತ್ತಿರುವ ದೇಶಕ್ಕೆ ಒಂದು ಔಷಧವನ್ನು ನೀಡಿರುವುದು ಒಳ್ಳೆಯ ಕಾರ್ಯವೇ. ಆದರೆ, ಅದಕ್ಕೆ ಆಯುಷ್‌ ಇಲಾಖೆ ಯಿಂದ ಸೂಕ್ತ ಅನುಮತಿ ಪಡೆಯಬೇಕಾದ್ದು ಕೂಡ ಅಷ್ಟೇ ಮುಖ್ಯ’ ಎಂದು ಆಯುಷ್‌ ಸಚಿವ ಶ್ರೀಪಾದ್‌ ನಾಯ್ಕ ಹೇಳಿದ್ದಾರೆ. ಹಾಗೇ, ಔಷಧಿ ಮತ್ತು ಪರವಾನಗಿಗೆ ಸಂಬಂಧಿಸಿದ ದಾಖಲೆಗಳನ್ನು ಪತಂಜಲಿ ಸಂಸ್ಥೆಯು ಮಂಗಳವಾರ ಇಲಾಖೆಗೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ಸಂವಹನದ ಕೊರತೆಯಿಂದಾಗಿ ಇಷ್ಟೆಲ್ಲಾ ಗೊಂದಲ ಸೃಷ್ಟಿಯಾಗಿದೆ. ಔಷಧದ ಸಂಶೋಧನೆಯಿಂದ ಪ್ರಯೋಗದವರೆಗೆ ಎಲ್ಲ ಹಂತಗಳಲ್ಲೂ ನಾವು ಅನುಮತಿ ಪಡೆದಿದ್ದೇವೆ. ಸಂಸ್ಥೆಯು ಯಾವುದೇ ಕಾನೂನು ಉಲ್ಲಂಘಿಸಿಲ್ಲ.
ಬಾಬಾ ರಾಮ್‌ದೇವ್‌

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.