ಎಸಿ ಬಸ್ಗಳ ಕಾರ್ಯಾಚರಣೆ
Team Udayavani, Jun 25, 2020, 11:32 AM IST
ಧಾರವಾಡ: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಸಾರಿಗೆ ಸಂಸ್ಥೆಯ ಎಸಿ ಬಸ್ಗಳ ಕಾರ್ಯಾಚರಣೆಯನ್ನು ಸರ್ಕಾರದ ಅನುಮತಿ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಆರಂಭಿಸಲಾಗುತ್ತಿದೆ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜೂ.25 ಜಾರಿಗೆ ಬರುವಂತೆ ಹಂತ ಹಂತವಾಗಿ ಎಸಿ ಬಸ್ಗಳ ಕಾರ್ಯಾಚರಣೆಯನ್ನು ಆರಂಭಿಸಲಿದೆ. ಪ್ರಸ್ತುತ ಹಂತದಲ್ಲಿ ಎಸಿ ಬಸ್ ಸೇವೆಗಳನ್ನು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಂದ ಬೆಂಗಳೂರು, ಮೈಸೂರು ಸ್ಥಳಗಳಿಗೆ ಮತ್ತು ಆ ಸ್ಥಳಗಳಿಂದ ಸಾರಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಬಸ್ಸಿನೊಳಗಿನ ತಾಪಮಾನವನ್ನು ಸರ್ಕಾರದ ಮಾರ್ಗಸೂಚಿಗಳನ್ವಯ 24-25 ಡಿಗ್ರಿ ಸೆಲ್ಸಿಯಸ್ನಲ್ಲಿ ನಿರ್ವಹಿಸಲಾಗುತ್ತದೆ. ಇದಲ್ಲದೆ, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ, ರಾತ್ರಿ ಸೇವಾ ಬಸ್ಗಳಲ್ಲಿ ಯಾವುದೇ ರೀತಿಯ ಹೊದಿಕೆ ನೀಡಲಾಗಲ್ಲ. ಪ್ರಯಾಣಿಕರು ತಮ್ಮ ಸ್ವಂತ ಹೊದಿಕೆ ಬಳಸಿಕೊಳ್ಳಲು ಕೋರಲಾಗಿದೆ. ಪ್ರಯಾಣಿಕರು ಆನ್ಲೈನ್ ನಲ್ಲಿ ಮುಂಚಿತವಾಗಿ www.ksrtc.in ನಲ್ಲಿ ಸೇವೆಗಳಿಗಾಗಿ ಸಂಸ್ಥೆಯ ಫ್ರಾಂಚೈಸೀ ಮತ್ತು ಮುಂಗಡ ಕಾಯ್ದಿರಿಸುವಿಕೆ ಕೌಂಟರ್ಗಳ ಮೂಲಕ ಟಿಕೇಟ್ ಕಾಯ್ದಿರಿಸಬಹುದು. ಪ್ರಯಾಣಿಕರು ಮೇಲಿನ ಸೌಲಭ್ಯ ಪಡೆಯಬಹುದಾಗಿದೆ ಎಂದು ಹುಬ್ಬಳ್ಳಿಯ ವಾಕರಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ