ಜೂನ್‌ ತಿಂಗಳಿನಲ್ಲಿ ಶೇ.8.5 ಕ್ಕೆ ಕುಸಿದ ನಿರುದ್ಯೋಗ ದರ


Team Udayavani, Jun 25, 2020, 3:31 PM IST

ಜೂನ್‌ ತಿಂಗಳಿನಲ್ಲಿ ಶೇ.8.5 ಕ್ಕೆ ಕುಸಿದ ನಿರುದ್ಯೋಗ ದರ

ಹೊಸದಿಲ್ಲಿ : ಕಳೆದ ಮೂರು ತಿಂಗಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದಾಗಿ ದೇಶದ ಸಾಕಷ್ಟು ಜನರ ಉದ್ಯೋಗಕ್ಕೆ ಕುತ್ತು ಬಿದ್ದಿದಲ್ಲದೇ ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತಿದೆ ಎಂದು ವರದಿಗಳು ಎಚ್ಚರಿಸುತ್ತಲೇ ಇದ್ದವೂ. ಆದರೆ ಆನ್‌ಲಾಕ್‌ ಆದ ಅನಂತರ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ದರ ಕಡಿತವಾಗಿದ್ದು, ಜೂನ್‌ 21 ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ನಿರುದ್ಯೋಗ ದರ ಶೇ.8.5 ಕ್ಕೆ ಕುಸಿದಿದೆ. ಆ ಮೂಲಕ ಲಾಕ್‌ಡೌನ್‌ ಮುನ್ನ ಇದ್ದ ನಿರುದ್ಯೋಗ ದರಕ್ಕೆ ಸಮನಾಗಿದೆ ಎಂದು ವರದಿ ತಿಳಿಸಿದೆ.

ಹೌದು ಜೂನ್‌ ತಿಂಗಳ ಮೊದಲ ಮೂರು ವಾರಗಳಲ್ಲಿ ನಿರುದ್ಯೋಗ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗಿದ್ದು, ಏಪ್ರಿಲ್‌-ಮೇ ತಿಂಗಳಲ್ಲಿ ದಾಖಲಾಗಿದ್ದ ಅತಿ ಹೆಚ್ಚು ನಿರುದ್ಯೋಗ ದರ ಶೇ.25.83 ಕ್ಕೆ ಹೋಲಿಸಿದರೆ ಜೂನ್‌ 12 ಕ್ಕೆ ಕೊನೆಗೊಂಡ ವಾರದಲ್ಲಿ ಶೇ11.2 ರಷ್ಟು ದಾಖಲಾಗುವ ಮೂಲಕ ನಿರುದ್ಯೋಗ ದರ ತೀರಾ ಕುಸಿದಿದೆ. ಆದರೆ ನಗರ ಪ್ರದೇಶಗಳಲ್ಲಿನ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ ಕಂಡೂ ಬಂದರೂ ಲಾಕ್‌ಡೌನ್‌ನ ಹಿಂದಿನ ಅವಧಿಗಿಂತ ಹೆಚ್ಚಾಗಿದೆ.

ಇನ್ನು ದೇಶದ ಹಲವಾರು ನಗರ, ಪಟ್ಟಣ ಹಾಗೂ ಮಹಾನಗರಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟುಗಳು ನಿಧಾನವಾಗಿ ತೆರೆದುಕೊಳ್ಳುತ್ತಿದ್ದು, ಮಹಾನಗರಗಳಲ್ಲಿನ ಮಾಲ್‌ಗ‌ಳಿಗೆ ಭೇಟಿ ನೀಡುವವರ ಪ್ರಮಾಣವೂ ಕ್ರಮೇಣ ಹೆಚ್ಚಾಗುತ್ತಿದೆ.
ಜತೆಗೆ ಚಿಕ್ಕ ಪುಟ್ಟ ವ್ಯಾಪಾರಗಳು ಸಹ ಲಾಭ ಕಾಣಲಾರಂಭಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವಕಾಶಗಳು ಹೆಚ್ಚಾಗಲಾರಂಭಿಸಿವೆ. ಬರುವ ಕೆಲ ತಿಂಗಳಲ್ಲಿ ಗ್ರಾಮೀಣ ಉದ್ಯೋಗವಕಾಶ ದರ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಜೂನ್‌ 21 ಕ್ಕೆ ಕೊನೆಗೊಂಡ ವಾರದಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗ ದರವು ಶೇ 7.26 ಕ್ಕೆ ಕುಸಿದಿದೆ. ಮಾರ್ಚ್‌ 22 ಕ್ಕೆ ಕೊನೆಗೊಂಡ ವಾರದಲ್ಲಿ ಈ ದರ ಶೇ 8.3 ರಷ್ಟಿತ್ತು.

ಗ್ರಾಮೀಣ ಭಾಗದಲ್ಲಿ ಮನರೇಗಾ ಕೂಲಿ ಕೆಲಸ ಹಾಗೂ ಮುಂಗಾರು ಹಂಗಾಮಿನ ಚಟುವಟಿಕೆಗಳಿಂದ ಉದ್ಯೋಗವಕಾಶಗಳು ಸೃಷ್ಟಿ ಆಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದ್ದು, ಸೂಕ್ತ ಸಮಯದಲ್ಲಿ ಮನರೇಗಾ ಕೂಲಿ ಕೆಲಸಗಳಿಗೆ ಸರಕಾರ ಹೆಚ್ಚು ಒತ್ತು ನೀಡಿದ್ದರಿಂದ ಹಾಗೂ ಸಕಾಲಕ್ಕೆ ಮಳೆಯಾಗಿ ಬಿತ್ತನೆ ಆರಂಭವಾಗಿದ್ದರಿಂದ ನಿರುದ್ಯೋಗ ಸಮಸ್ಯೆ ಕಡಿಮೆಯಾಗಲು ಪ್ರಮುಖ ಕಾರಣ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.