ಮುಂಬಯಿಯ ಶೇ. 13ರಷ್ಟು ವಿದ್ಯಾರ್ಥಿಗಳಲ್ಲಿ ಮೊಬೈಲ್‌ ಇಲ್ಲ: ಸಮೀಕ್ಷೆ


Team Udayavani, Jun 25, 2020, 5:12 PM IST

ಮುಂಬಯಿಯ ಶೇ. 13ರಷ್ಟು ವಿದ್ಯಾರ್ಥಿಗಳಲ್ಲಿ ಮೊಬೈಲ್‌ ಇಲ್ಲ: ಸಮೀಕ್ಷೆ

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 24: ಮುಂಬಯಿಯಲ್ಲಿ ಶೇ.12.51ರಷ್ಟು ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ ಹೊಂದಿಲ್ಲ. ಅದೇ ಶೇ. 3.58ರಷ್ಟು ವಿದ್ಯಾರ್ಥಿಗಳಿಗೆ ದೂರದರ್ಶನ (ಟಿವಿ), ರೇಡಿಯೋ ಲಭ್ಯತೆಯಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯೊಂದು ತಿಳಿಸಿದೆ.

ಆಯ್ದ ಕ್ಲಸ್ಟರ್‌ಗಳಿಂದ ಮಾಹಿತಿ ಸಂಗ್ರಹಿಸುವ ಸಲುವಾಗಿ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಮಹಾರಾಷ್ಟ್ರದ 35 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿತು. ಈ ಸಮೀಕ್ಷೆಯು ವಾಟ್ಸಾಪ್‌, ಎಸ್‌ಎಂಎಸ್‌, ಟಿವಿ, ಮೊಬೈಲ್‌ ಫೋನ್‌ಗಳು ಮತ್ತು ರೇಡಿಯೋಗಳ ಲಭ್ಯತೆ ಇರುವವರ ಜತೆಗೆ ಸೌಲಭ್ಯ ಲಭ್ಯವಿರದ ವಿದ್ಯಾರ್ಥಿಗಳ ಶೇಕಡಾವಾರು ಮುಂತಾದ ವಿವಿಧ ನಿಯತಾಂಕಗಳನ್ನು ಕೇಂದ್ರೀಕರಿಸಿದೆ. ಸಮೀಕ್ಷಾ ಮಾಹಿತಿಯ ಪ್ರಕಾರ, ಮುಂಬಯಿ ಜಿಲ್ಲೆಯ ಶೇ. 70.33ರಷ್ಟು ವಿದ್ಯಾರ್ಥಿಗಳನ್ನು ವಾಟ್ಸಾಪ್‌ ಮೂಲಕ ಸಂಪರ್ಕಿಸಬಹುದು ಮತ್ತು ಶೇ. 17.16ರಷ್ಟು ವಿದ್ಯಾರ್ಥಿಗಳನ್ನು ಎಸ್‌ಎಂಎಸ್‌ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೆ, ನಗರದ ಶೇ.79.74ರಷ್ಟು ವಿದ್ಯಾರ್ಥಿಗಳು ಟಿವಿ ಸಂಪರ್ಕ ಹೊಂದಿದ್ದು, ಶೇ. 13.97ರಷ್ಟು ವಿದ್ಯಾರ್ಥಿಗಳನ್ನು ರೇಡಿಯೋ ಮೂಲಕ ತಲುಪಬಹುದಾಗಿದೆ. ಆದರೆ ಶೇ. 12.51ರಷ್ಟು ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ ಹೊಂದಿಲ್ಲ. ಅದೇ ಶೇ. 3.58ರಷ್ಟು ವಿದ್ಯಾರ್ಥಿಗಳಿಗೆ ಟಿವಿ, ರೇಡಿಯೋ ಅಥವಾ ಮೊಬೈಲ್‌ ಫೋನ್‌ಗಳ ಲಭ್ಯತೆಯಿಲ್ಲ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಕೊರೊನಾ ಪರಿಸ್ಥಿತಿಯ ಮಧ್ಯೆ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣವನ್ನು ನೀಡುವ ಉದ್ದೇಶದಿಂದ ರಾಜ್ಯವು ಸಂಗ್ರಹಿಸಿದ ಈ ಮಾಹಿತಿಯು, ಮುಂಬ ಯಿಯಂತಹ ಅಭಿವೃದ್ಧಿ ಹೊಂದಿದ ಮಹಾನಗರದಲ್ಲೂ ಕೆಲವು ವಿದ್ಯಾರ್ಥಿಗಳು ಶಾಲೆಗಳನ್ನು ಅವಲಂಬಿಸಿರುವುದರಿಂದ ಆನ್‌ಲೈನ್‌ ತರಗತಿಗಳ ಎಲ್ಲರಿಗೂ ಲಭ್ಯವಿಲ್ಲ ಎಂಬುದನ್ನು ತಿಳಿಸುತ್ತದೆ.

ಅಭಿವೃದ್ಧಿ ಹೊಂದಿದ ನಗರದಲ್ಲೇ ಈ ಪರಿಸ್ಥಿತಿ ಇರುವಾಗ, ರಾಜ್ಯದ ಗ್ರಾಮೀಣ ಜಿಲ್ಲೆಗಳ ಪರಿಸ್ಥಿತಿ ಹೇಗಿರಬಹುದು? ಮುಂಬಯಿಯಲ್ಲಿ ಮೊಬೈಲ್‌ ಫೋನ್‌, ಟಿವಿ ಅಥವಾ ರೇಡಿಯೋ ಇಲ್ಲದ ವಿದ್ಯಾರ್ಥಿಗಳು ಇದ್ದಾರೆ ಎಂಬುದು ಆನ್‌ಲೈನ್‌ ಶಿಕ್ಷಣವು ಎಲ್ಲರಿಗೂ ತಲುಪಲು ಸಾಧ್ಯವಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಶಿಕ್ಷಣ ಸಂಶೋಧನಾ ವಿಶ್ಲೇಷಕ ಕಾಶಿನಾಥ್‌ ಕೇಡೇಕರ್‌ ನುಡಿದಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.