ದೇರೆಬೈಲ್‌ನಲ್ಲಿ ಸಿದ್ಧವಾಗಲಿದೆ “ಮಂಗಳೂರು ಐಟಿ ಪಾರ್ಕ್‌’


Team Udayavani, Jun 26, 2020, 5:24 AM IST

ದೇರೆಬೈಲ್‌ನಲ್ಲಿ ಸಿದ್ಧವಾಗಲಿದೆ “ಮಂಗಳೂರು ಐಟಿ ಪಾರ್ಕ್‌’

ವಿಶೇಷ ವರದಿ-ಮಹಾನಗರ: ಕರಾವಳಿಯಲ್ಲಿ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಬಂಧಿತ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಹುವರ್ಷದ ಬೇಡಿಕೆಯಾಗಿರುವ “ಮಂಗಳೂರು ಐಟಿ ಪಾರ್ಕ್‌’ ನಿರ್ಮಾಣಕ್ಕೆ ಇದೀಗ ಸಿದ್ಧತೆ ನಡೆಯುತ್ತಿದೆ.

ಮಂಗಳೂರಿನ ದೇರೆಬೈಲ್‌ನಲ್ಲಿ ಕಿಯೋನಿಕ್ಸ್‌ ಸಂಸ್ಥೆಗೆ ಸೇರಿದ 4 ಎಕರೆ ಜಮೀನಿನಲ್ಲಿ ಐಟಿ ಪಾರ್ಕ್‌ ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್‌) ಸಂಸ್ಥೆಯು ಮುಂದಾಗಿದೆ. ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಿಶೇಷ ಕಾಳಜಿಯೊಂದಿಗೆ ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಉದ್ದೇಶಿಸಲಾಗಿದೆ.

ದೇರೆಬೈಲ್‌ನ (ಎ.ಜೆ.ಮೆಡಿಕಲ್‌ ಕಾಲೇಜು ಹತ್ತಿರ) 4 ಎಕರೆ ಭೂಮಿಯಲ್ಲಿ ಐಟಿ ಪಾರ್ಕ್‌ ರಚನೆಯಾಗಲಿದ್ದು ಐಟಿ ಅಭಿವೃದ್ಧಿಗೆಂದು ಈ ಭೂಮಿಯನ್ನು ಈ ಹಿಂದೆಯೇ ಮೀಸಲಿಡಲಾಗಿತ್ತು. ಇದರಲ್ಲಿ ಶೇ.40ರಷ್ಟು ಪ್ರದೇಶವು ಐಟಿ ಕಾರ್ಯಸ್ಥಳವಾಗಿರಲಿದ್ದು, ಇದರಲ್ಲಿ ಐಟಿ ಪಾರ್ಕ್‌, ರಫ್ತು ಆಧಾರಿತ ಉದ್ಯಮಗಳಿಗೆ ಮೀಸಲಾಗಿರಲಿದೆ. ಉಳಿದ ಶೇ.60ರಷ್ಟು ಸ್ಥಳವನ್ನು ವಾಣಿಜ್ಯ, ವಸತಿ, ಸಮಾಜಕ್ಕೆ ಅವಶ್ಯ ಮೂಲ ಸೌಕರ್ಯ ಗಳಿಗಾಗಿ ಮೀಸಲಿಡ ಲಾಗುತ್ತದೆ. ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ.

ಕ್ಲಸ್ಟರ್‌ ಕಂಪೆನಿಗಳಿಗೆ ಅವಕಾಶ
ಕೊರೊನಾ ಕಾರಣದಿಂದ ಐಟಿ ಉದ್ಯಮ ಕ್ಷೇತ್ರವು ಪ್ರಸ್ತುತ “ವರ್ಕ್‌ ಫ್ರಂ ಹೋಂ’ ಪರಿಕಲ್ಪನೆಗೆ ಹೆಚ್ಚು ಆದ್ಯತೆ ನೀಡುತ್ತಿರುವ ಕಾರಣದಿಂದ ಕ್ಲಸ್ಟರ್‌ ಮಾದರಿಯಲ್ಲಿ ಕಂಪೆನಿ ನಿರ್ಮಾಣಕ್ಕೆ ಐಟಿ ಉದ್ಯಮಿಗಳು ಹೆಚ್ಚು ಒಲವು ತೋರುತ್ತಿದ್ದಾರೆ. ಹೀಗಾಗಿ ಕ್ಲಸ್ಟರ್‌ ಮಟ್ಟದಲ್ಲಿ ಹಲವು ಕಂಪೆನಿಗಳು ಆರಂಭವಾಗುವ ನಿರೀಕ್ಷೆಯಿದ್ದು, ಇದಕ್ಕೆ ಪೂರಕವಾಗಿ ಐಟಿ ಪಾರ್ಕ್‌ ಮಂಗಳೂರಿನಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುವ ನಿರೀಕ್ಷೆಯಲ್ಲಿದೆ. ಈ ಮೂಲಕ ಸುಮಾರು 2000ಕ್ಕೂ ಅಧಿಕ ಜನರಿಗೆ ಉದ್ಯೋಗ ಒದಗಿಸಿಕೊಡುವುದು ಈ ಯೋಜನೆಯ ಮೂಲ ಉದ್ದೇಶ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್‌) ಸಂಸ್ಥೆಯು ರಾಜ್ಯದಲ್ಲಿ ವಿದ್ಯುನ್ಮಾನ ಉದ್ಯಮಗಳನ್ನು ಉತ್ತೇ ಜಿಸಲು ಆರಂಭಿಸಲಾಗಿದೆ. ಉದ್ಯಮಗಳನ್ನು ಎಲ್ಲ ಕಾಲದಲ್ಲಿಯೂ ಮುಂಚೂಣಿಯಲ್ಲಿಟ್ಟು ಜನ ಸಾಮಾನ್ಯರಿಗೆ ಮಾಹಿತಿ ತಂತ್ರಜ್ಞಾನ ಶಿಕ್ಷಣ ನೀಡುವ ನಿಟ್ಟಿನಲ್ಲಿ ತೊಡಗಿಸಿ ಕೊಳ್ಳಲಾಗಿದೆ. ರಾಜ್ಯದ ಇ-ಆಡಳಿತ ಸೇವೆಗಳನ್ನು ಒದಗಿಸುವ ಮೂಲ ಉದ್ದೇಶದಿಂದ 1976ರಲ್ಲಿ ಅಸ್ತಿತ್ವಕ್ಕೆ ಬಂತು. ರಾಜ್ಯದಲ್ಲಿ ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ ಸಂಬಂಧಿತ ಕೈಗಾರಿಕೆಗಳಿಗೆ ವಿಶ್ವದರ್ಜೆಯ ಮೂಲ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುತ್ತದೆ. ಎಸ್‌ಟಿಪಿಐ ಸಂಸ್ಥೆಯ ಸಹಯೋಗದೊಂದಿಗೆ ಮಾಹಿತಿ ತಂತ್ರಜ್ಞಾನ ಉದ್ಯಮಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸುವುದು ಹಾಗೂ ರಫ್ತು ಆಧಾರಿತ ಯೋಜನೆಗಳನ್ನು ಉತ್ತೇಜಿಸಲು ಸಹಕಾರ ನೀಡುತ್ತದೆ.

 ”ಶೀಘ್ರ ಕ್ರಮ’
ದೇರೆಬೈಲ್‌ನಲ್ಲಿ ಕಿಯೋನಿಕ್ಸ್‌ ಸಂಸ್ಥೆಗೆ ಸೇರಿದ 4 ಎಕ್ರೆ ಜಮೀನಿನಲ್ಲಿ ಐಟಿ ಪಾರ್ಕ್‌ ಅಭಿವೃದ್ಧಿಪಡಿಸಲು ಉದ್ದೇಶಿಸ ಲಾಗಿದೆ. ಈ ಬಗ್ಗೆ ಶೀಘ್ರದಲ್ಲಿ ಸಂಸದರು, ಸಚಿವರು, ಶಾಸಕರು, ಉದ್ಯಮ ಕ್ಷೇತ್ರದ ಸಂಘಟನೆ ಪ್ರಮುಖರ ಜತೆಗೆ ಚರ್ಚಿಸಿ ಈ ಯೋಜನೆ ಶೀಘ್ರದಲ್ಲಿ ಸಾಕಾರಗೊಳಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಲಾಗುವುದು.
-ಹರಿಕೃಷ್ಣ ಬಂಟ್ವಾಳ್‌, ಅಧ್ಯಕ್ಷರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ

 ”ಐಟಿ ಪಾರ್ಕ್‌ ಸಾಕಾರ ನಿರೀಕ್ಷೆ’
ಮಂಗಳೂರಿನಲ್ಲಿ ಐಟಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಾಗೂ ಯುವಕರಿಗೆ ಉದ್ಯೋಗವಕಾಶ ಸಿಗಬೇಕೆಂಬ ಇರಾದೆಯಿಂದ ನಗರದಲ್ಲಿ ಐಟಿ ಪಾರ್ಕ್‌ ಆರಂಭಿಸುವ ಬಗ್ಗೆ ಸರಕಾರಕ್ಕೆ ಮನವಿ ಮಾಡುತ್ತಲೇ ಬರಲಾಗಿದೆ. ಸದ್ಯ ಈ ಯೋಜನೆ ಸಾಕಾರದ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಐಟಿ ಪಾರ್ಕ್‌ ಆರಂಭದ ನಿರೀಕ್ಷೆಯೂ ಇದೆ.
-ಐಸಾಕ್‌ ವಾಝ್, ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.