ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶಾಂತಿಯುತ


Team Udayavani, Jun 26, 2020, 7:06 AM IST

sslc-ramanagara

ರಾಮನಗರ: ಕೋವಿಡ್‌-19 ಸೋಂಕು ಹರಡುತ್ತಿರುವ ಆತಂಕದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಶಿಕ್ಷಣ ಇಲಾಖೆ ಸಾಕಷ್ಟು ಮುಂಜಾಗ್ರತೆ ಕ್ರಮ ಅನುಸರಿಸಿದೆ. ಸರ್ಕಾರ ನೀಡಿದ ಭರವಸೆಯೊಂದಿಗೆ  ವಿದ್ಯಾರ್ಥಿಗಳು ಹುರುಪಿನಿಂದಲೇ ಪರೀಕ್ಷೆ ಬರೆದಿದ್ದಾರೆ. ಮೊದಲ ದಿನ ದ್ವಿತೀಯ ಭಾಷೆ ಪರೀಕ್ಷೆ ನಡೆದಿದ್ದು, ಜಿಲ್ಲೆ ಯಲ್ಲಿ 493 ವಿದ್ಯಾರ್ಥಿಗಳು ಗೈರಾಗಿದ್ದರು.

ಜಿಲ್ಲೆಯಲ್ಲಿ 13,307 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. ಜಿಲ್ಲಾದ್ಯಂತ 57  ಪರೀಕ್ಷೆ ಕೇಂದ್ರಗಳಲ್ಲಿ 12,795 ಮಂದಿ ಪರೀಕ್ಷೆ ಎದುರಿಸಿ ದರು. ಡಿಬಾರ್‌ ಪ್ರಕರಣಗಳು ಕಂಡು ಬಂದಿಲ್ಲ. ಜಿಲ್ಲೆಯ ಕಂಟೈನ್‌ಮೆಂಟ್‌ ವಲಯಗಳಿಂದ ಬಂದಿದ್ದ 34 ಮಂದಿ ವಿದ್ಯಾರ್ಥಿಗಳನ್ನು ಆಯಾ ಪರೀಕ್ಷೆ ಕೇಂದ್ರದಲ್ಲಿ ಪ್ರತ್ಯೇಕವಾಗಿಡಿ ಬರೆಸಲಾಯಿತು. ದೇಹದ ಉಷ್ಣ ತಪಾಸಣೆ  ಸಂದರ್ಭದಲ್ಲಿ ಹೆಚ್ಚಿನ ಉಷ್ಣಾಂಶ ಕಂಡು ಬಂದ ಮೂರು ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಸಲಾಗಿದೆ.

ಅಧಿಕಾರಿಗಳ ಭೇಟಿ: ಯಾವ ಆತಂಕಕ್ಕೂ ಒಳಗಾಗದೆ ಪರೀಕ್ಷೆ ಎದುರಿಸಿ ಎಂದು ಜಿಲ್ಲಾಧಿಕಾರಿಗಲು, ಸಿಇಒ ಮತ್ತು ಎಸ್ಪಿಯವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದರು. ಗುರುವಾರ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕೈಗೊಂಡಿರುವ  ಮುಂಜಾಗ್ರತ ಕ್ರಮ ಗಳನ್ನು ಖದ್ದು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ, ಸಿಇಒ ಇಕ್ರಂ ಮತ್ತು ಎಸ್‌ಪಿ ಅನೂಪ್‌ ಶೆಟ್ಟಿ ಪ್ರತ್ಯೇಕವಾಗಿ ಕೆಲವು ಕೇಂದ್ರಗಳಿಗೆ ಭೇಟಿ ಕೊಟ್ಟ ಪರಿಶೀಲನೆ ನಡೆಸಿದರು. ಡಿಡಿಪಿಐ ಸೋಮಶೇಖರಯ್ಯ ರಾಮ ನಗರ  ಹಾಗೂ ಚನ್ನಪಟ್ಟಣದ ಪರೀಕ್ಷೆ ಕೇಂದ್ರಗಳಿಗೆ ಭೇಟಿಕೊಟ್ಟಿದ್ದರು.

ತೃಪ್ತಿ ವ್ಯಕ್ತಪಡಿಸಿದ ಪೋಷಕರು: ಜಿಲ್ಲೆಯ ಲ್ಲಿನ 57 ಪರೀಕ್ಷೆ ಕೇಂದ್ರದಲ್ಲೂ ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳಲಾ ಗಿತ್ತು. ಪ್ರತಿ ಯೊಬ್ಬ ವಿದ್ಯಾರ್ಥಿಯ ದೇಹದ  ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ ವ್ಯವಸ್ಥೆ, ಸಾಮಾಜಿಕ ಅಂತರ ಕಾಪಾಡಿ ಕೊಳ್ಳುತ್ತಿದ್ದುದನ್ನು ಗಮನಿಸಿದ ಪೋಷಕರು ತೃಪ್ತಿ ವ್ಯಕ್ತಪಡಿಸಿ ದರು. ಬುಧವಾರ ಸುರಿದ ಮಳೆಯಿಂದಾಗಿ ಜಿಲ್ಲೆಯ ಒಂದೆರೆಡು ಪರೀಕ್ಷೆ ಕೇಂದ್ರಗಳಲ್ಲಿ ಸಮಸ್ಯೆ  ಎದುರಾಗಿತ್ತು. ಅದನ್ನು ನಿವಾರಿಸಿ ಪರೀಕ್ಷೆ ಬರೆಯಿಸಲಾಗಿದೆ. ಹೊರ ಜಿಲ್ಲೆ ಗಳ 54 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದಾರೆ.

113 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು
ಕನಕಪುರ: ಕೋವಿಡ್‌ 19 ಸೋಂಕಿನ ಆತಂಕದ ನಡುವೆಯೇ ವಿದ್ಯಾರ್ಥಿಗಳು ಎಸ್‌ಎಸ್‌ಲ್‌ಸಿ ಪರೀಕ್ಷೆಯನ್ನು ಮುಕ್ತವಾಗಿ ಎದುರಿಸಿದರು. ತಾಲೂಕಿನಲ್ಲಿ 16 ಪರೀಕ್ಷೆ ಕೇಂದ್ರಗಳಲ್ಲಿ 3,939 ಪೈಕಿ 3720 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 113 ಮಂದಿ ಗೈರಾಗಿದ್ದರು. ಬೆಳಿಗ್ಗೆ 8ರಿಂದಲೇ ಪರೀಕ್ಷೆಗೆ ಬಂದ  ವಿದ್ಯಾರ್ಥಿಗಳಿಗೆ ಸ್ಕೌಟ್‌ ಮತ್ತು ಗೈಡ್ಸ್‌, ಪೊಲೀಸ್‌ ಇಲಾಖೆ, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಮಾಸ್ಕ್, ಕೈಗಳಿಗೆ ಸ್ಯಾನಿಟೈಸರ್‌ ಸಿಂಪಡಿಸಿದರು.

ವಿದ್ಯಾರ್ಥಿಗಳ  ದೇಹದ ಉಷ್ಣತೆ ಪರಿಶೀಲಿಸಿ, ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಸಲಹೆ ಸೂಚನೆ ನೀಡಿ, ವಿದ್ಯಾರ್ಥಿಗಳು ಭಯ ಮತ್ತು ಆತಂಕ ಬಿಟ್ಟು ಪರೀಕ್ಷೆ ಎದುರಿಸಿಲು ಮುಕ್ತ ವಾತಾ ವರಣ ನಿರ್ಮಾಣ ಮಾಡಿದರು. ಆರೋಗ್ಯದಲ್ಲಿ  ವ್ಯತ್ಯಾಸವಿದೆ ಇಬ್ಬರು ವಿದ್ಯಾರ್ಥಿಗಳು ಮತ್ತು ಕ್ವಾರಂಟೈನ್‌ ಹಾಗೂ ಸೀಲ್‌ ಡೌನ್‌ ವಲಯದಲ್ಲಿದ್ದ 7 ವಿದ್ಯಾರ್ಥಿಗಳನ್ನು ವಿಶೇಷ ಕೊಠಡಿಗಳಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಿ, ವಿದ್ಯಾರ್ಥಿಗಳು ಪರಸ್ಪರ ಪರಿಕರಗಳ ವಿನಿಮಯ ನಿಷೇಧಿಸಲಾಗಿತ್ತು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.