ಜಿಪಂ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಕಾಂಗ್ರೆಸ್ ಅಭ್ಯರ್ಥಿ
Team Udayavani, Jun 26, 2020, 5:30 PM IST
ವಿಜಯಪುರ: ಇಲ್ಲಿನ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಸುಜಾತಾ ಕಳ್ಳಿಮನಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಸಂಜೆ ಪಕ್ಷದ ಶಾಸಕರ ಸಮ್ಮುಖದಲ್ಲಿ ನಡೆದ ಜಿಪಂ ಸದಸ್ಯರ ಸಭೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ ಅಧ್ಯಕ್ಷತೆಯಲ್ಲಿ ನಡೆದ ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕರಾದ ಸಿ.ಎಸ್. ನಾಡಗೌಡ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸುಜಾತಾ ಕಳ್ಳಿಮನಿ ಒಬ್ಬರ ಹೆಸರು ಮಾತ್ರ ಪ್ರಸ್ತಾಪವಾಯಿತು.
ಸುಜಾತಾ ಹೆಸರು ಪ್ರಸ್ತಾಪಿಸುತ್ತಲೇ ಕಾಂಗ್ರೆಸ್ನ 18 ಸದಸ್ಯರಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದ 17 ಜನರು ಬೆಂಬಲ ವ್ಯಕ್ತಪಡಿಸಿದರು. ಸಭೆಗೆ ಗೈರಾದ ಜಿಪಂ ಸದಸ್ಯ ಆಳಿಂಗರಾಯ ಅವರು ಅನಾರೋಗ್ಯದ ಕಾರಣ ನೀಡಿದ್ದರು. ಆದರೆ ಆಳಿಂಗರಾಯ ಇವರನ್ನು ಸಂಪರ್ಕಿಸಿದ ಪ್ರಮುಖರು, ಪಕ್ಷದ ಪ್ರಮುಖರನ್ನು ಸಂಪರ್ಕಿಸುವಂತೆ ಸೂಚನೆ ನೀಡಿದರು.
ಸಭೆಗೆ ಗೈರು ಹಾಜರಾದರೂ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಹೇಳಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದರಿ ಸಭೆಯಲ್ಲಿ ಕಾಂಗ್ರೆಸ್ ಮೂವರು ಶಾಸಕರು ಹಾಗೂ ಮಾಜಿ ಶಾಸಕರು ಮ್ಯಾಜಿಕ್ ಸಂಖ್ಯೆ ಪಡೆಯಲು 4 ಸದಸ್ಯರ ಕೊರತೆ ಇದ್ದು, ಜೆಡಿಎಸ್ನ ಮೂವರು ಸದಸ್ಯರ ಹಾಗೂ ಓರ್ವ ಪಕ್ಷೇತರ ಬೆಂಬಲ ಪಡೆಯಲು ಮನವೊಲಿಸುವ ಕುರಿತು ಗಂಭೀರ ಚರ್ಚೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ