ಮಾತೃಪೂರ್ಣದಡಿ ಕಿಟ್‌ ವಿತರಣೆಯೇ ಯಶಸ್ವಿ

3 ವರ್ಷಗಳ ಬಳಿಕ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಶತ ಪ್ರತಿಶತ ಸಾಧನೆ

Team Udayavani, Jun 27, 2020, 6:30 AM IST

ಮಾತೃಪೂರ್ಣದಡಿ ಕಿಟ್‌ ವಿತರಣೆಯೇ ಯಶಸ್ವಿ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮಾತೃಪೂರ್ಣ ಯೋಜನೆಯಡಿ ಶತ ಪ್ರತಿಶತ ಪ್ರಗತಿಯನ್ನು ಸಾಧಿಸಿದೆ. ಈ ಮೂಲಕ ಸರಕಾರ ಹಾಕಿದ ಗುರಿ ತಲುಪುವಲ್ಲಿ ಯಶಸ್ವಿಯಾಗಿದೆ. ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್‌ ವಿತರಣೆ ಮಾಡುತ್ತಿರು ವುದು ಈ ಯಶಸ್ಸಿಗೆ ಕಾರಣ.

ಕೋವಿಡ್-19  ಹಿನ್ನೆಲೆಯಲ್ಲಿ ಸರಕಾರವು ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ. ಪರ್ಯಾಯವಾಗಿ ಕಿಟ್‌ ನೀಡುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಾರಿಗೊಳಿಸಿದೆ. ಎಪ್ರಿಲ್‌, ಮೇ ತಿಂಗಳಿನಲ್ಲಿ ಒಬ್ಬರಿಗೆ 1,260 ರೂ. ವೆಚ್ಚದ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ನೀಡಲಾಗಿದೆ. ಈ ಯೋಜನೆ ಜೂನ್‌ಗೂ ವಿಸ್ತರಣೆಯಾಗಿದ್ದು, ಒಬ್ಬರಿಗೆ 630 ರೂ. ಮೊತ್ತದ ಕಿಟ್‌ ವಿತರಣೆಯಾಗಲಿದೆ.

ಶೇ. 100 ಪ್ರಗತಿ
ಉಡುಪಿ ಜಿಲ್ಲೆಯಲ್ಲಿ 5,989 ಗರ್ಭಿಣಿಯರು, 5,559 ಬಾಣಂತಿಯರು ಹಾಗೂ ದ.ಕ. ಜಿಲ್ಲೆಯಲ್ಲಿ 24,000 ಫ‌ಲಾನುಭವಿಗಳು ಮಾತೃಪೂರ್ಣ ಯೋಜ ನೆಯ ಕಿಟ್‌ ಪಡೆದುಕೊಂಡಿದ್ದಾರೆ. ಬಿಸಿಯೂಟ ಯೋಜನೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮಾತೃಪೂರ್ಣ ಯೋಜನೆಯಡಿಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಿದೆ.

ಬಿಸಿಯೂಟಕ್ಕೆ ಯೋಜನೆ
2020ರ ಮಾರ್ಚ್‌ ವರೆಗೆ ಉಡುಪಿ ಜಿಲ್ಲೆಯಲ್ಲಿ 1,191 ಅಂಗನವಾಡಿ ಕೇಂದ್ರಗಳಲ್ಲಿ 4,912 ಗರ್ಭಿಣಿಯರು, 5,267 ಬಾಣಂತಿಯರು ನೋಂದಾಯಿಸಿ ಕೊಂಡಿದ್ದು, ಅವರಲ್ಲಿ 1,199 ಗರ್ಭಿಣಿಯರು ಮತ್ತು 976 ಬಾಣಂತಿಯರು ಬಿಸಿಯೂಟಕ್ಕೆ ಹಾಜರಾಗುತ್ತಿದ್ದರು. ಈ ಮೂಲಕ ಯೋಜನೆಯು ಶೇ. 20ರಷ್ಟು ಪ್ರಗತಿಯನ್ನಷ್ಟೇ ಸಾಧಿಸಿತ್ತು. ದಕ್ಷಿಣ ಕನ್ನಡದಲ್ಲಿ ಸುಮಾರು 2,400 ಫ‌ಲಾನುಭವಿಗಳು ಮಾತ್ರ ಬಿಸಿಯೂಟ ಸೇವಿಸುತ್ತಿದ್ದರು.

ಇದೇ ಪದ್ಧತಿ ಮುಂದುವರಿಸಿ
ಕಳೆದ ಮೂರು ವರ್ಷಗಳಿಂದ ಯೋಜನೆಯಡಿ ಪ್ರತೀ ತಿಂಗಳು ಶೇಕಡಾವಾರು ಪ್ರಗತಿಯ ಪರಿ ಶೀಲನೆ ನಡೆಯುತ್ತಿದೆ. ಇದುವರೆಗೆ ಶೇ . 100ರಷ್ಟು ಪ್ರಗತಿ ಸಾಧಿಸಲಾಗಿರಲಿಲ್ಲ. ಅವಿ ಭಜಿತ ದ.ಕ. ಜಿಲ್ಲೆಯಲ್ಲಿ ಯೋಜನೆ ಬಳಸಿ ಕೊಳ್ಳುವ ಫ‌ಲಾನುಭವಿಗಳ ಸಂಖ್ಯೆ ಕಡಿಮೆ ಇದೆ. ಇದ ರಿಂದಾಗಿ ಯೋಜನೆಯನ್ನು ಪರಿಣಾಮ ಕಾರಿ ಯಾಗಿ ಜಾರಿ ಮಾಡುವುದು ಇಲಾಖೆಗೆ ಕಷ್ಟವಾಗುತ್ತಿದೆ. ಆದ್ದರಿಂದ ಬಿಸಿಯೂಟದ ಬದಲು ಪೌಷ್ಟಿಕ ಆಹಾರವನ್ನು ತಿಂಗಳಿಗೊಮ್ಮೆ ಮನೆಗೆ ವಿತರಿಸಲು ಅವಕಾಶ ಮಾಡಿಕೊಡುವಂತೆ ಈ ಹಿಂದೆಯೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿ ಕಾರಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಫ‌ಲಾನುಭವಿಗಳೂ ಇದೇ ಬೇಡಿಕೆ ಹೊಂದಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾತೃ ಪೂರ್ಣ ಯೋಜನೆ ಯಡಿ ಕಿಟ್‌ ವಿತ ರಿಸು ತ್ತಿದೆ. ಇದ ರಿಂದಾಗಿ ಇಲಾಖೆ ಶೇ. 100 ರಷ್ಟು ಪ್ರಗತಿ ಸಾಧಿಸಿದೆ. ಯೋಜನೆ ಯಡಿಯಲ್ಲಿ ಬಿಸಿ ಯೂಟ ವಿತರಣೆ ಯಾಗುತ್ತಿರುವ ಸಂದರ್ಭ ದಲ್ಲಿ ಇಲಾಖೆಯು ಉಡುಪಿ ಶೇ. 34 ಮತ್ತು ದ.ಕ. ದಲ್ಲಿ ಶೇ. 20ರಷ್ಟು ಮಾತ್ರ ಪ್ರಗತಿ ಸಾ ಧಿಸಿತ್ತು.
– ಶೇಸಪ್ಪ , ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ, ಉಡುಪಿ
– ಉಸ್ಮಾನ್‌, ಮಹಿಳಾ ಮಕ್ಕಳ ಇಲಾಖೆ ಉಪನಿರ್ದೇಶಕ, ದ.ಕ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.