ನಾಮನಿರ್ದೇಶಿತರ ನೇಮಕದಲ್ಲೂ ಅಚ್ಚರಿ?

ಒಂದು ಯಾ ಎರಡು ಅಪರೂಪದ ನೇಮಕ ; ಪಕ್ಷಕ್ಕೆ ದುಡಿದವರಿಗೆ ಅವಕಾಶ?

Team Udayavani, Jun 28, 2020, 6:40 AM IST

ನಾಮನಿರ್ದೇಶಿತರ ನೇಮಕದಲ್ಲೂ ಅಚ್ಚರಿ?

ಬೆಂಗಳೂರು: ವಿಧಾನಪರಿಷತ್‌ಗೆ ನಾಮ ನಿರ್ದೇಶನದಲ್ಲೂ ರಾಜ್ಯ ಬಿಜೆಪಿ ಸರಕಾರ ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಲಿದೆಯೇ?

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ನ ಆಯ್ದ ಸ್ಥಾನಗಳಿಗೆ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಜೆಪಿ ಈಗಲೂ ಅದೇ ದಾರಿ ತುಳಿಯುವ ಸಾಧ್ಯತೆ ನಿಚ್ಚಳವಾಗಿದೆ. ಒಂದು ಅಥವಾ ಎರಡು ಸ್ಥಾನಗಳಿಗೆ ಅಚ್ಚರಿಯ ಆಯ್ಕೆ ಮಾಡಲಿದೆ ಎನ್ನಲಾಗುತ್ತಿದೆ.

ಈ ಸಂಬಂಧ ಪಕ್ಷದ ಆಂತರಿಕ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ. ಒಟ್ಟು ಐದು ನಾಮನಿರ್ದೇಶಿತ ಸದಸ್ಯರ ನೇಮಕ ಪೈಕಿ 3 ಸ್ಥಾನಗಳಿಗೆ ಪಕ್ಷ ಸೂಚಿಸಿ ದವರನ್ನು ಪರಿಗಣಿಸಿದರೆ ಉಳಿದೆರಡು ಸ್ಥಾನಗಳನ್ನು ಸಿಎಂ ಯಡಿಯೂರಪ್ಪ ಮತ್ತು ಇತರ ನಾಯಕರು ಚರ್ಚಿಸಿ ನೇಮಕ ಮಾಡುವ ಸಂಭವವಿದೆ. ಪಕ್ಷದ ವತಿಯಿಂದ ನೇಮಕವಾಗುವವರ ಪೈಕಿ ಒಂದೆರಡು ಅಚ್ಚರಿಯ ಆಯ್ಕೆ ಇರುವ ನಿರೀಕ್ಷೆ ಇದೆ.

ಈಗ ಪಕ್ಷ ಸಂಘಟನೆಯೊಂದಿಗೆ ನೇರ ಇಲ್ಲವೇ ಪರೋಕ್ಷವಾಗಿ ನಂಟು ಹೊಂದಿರುವ ಅಥವಾ ಪಕ್ಷದ ಸಿದ್ಧಾಂತದ ಪರವಾಗಿರುವ ಮತ್ತು ಮೃದು ಧೋರಣೆಯಿರುವ ಜತೆಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಪರಿಗಣಿಸುವ ಪ್ರಯತ್ನ ನಡೆದಿದೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ಸರಕಾರ ರಚನೆಗೆ ತೆರೆಮರೆಯಲ್ಲಿ ಶ್ರಮಿಸಿದ್ದರೂ ಈವರೆಗೆ ಸೂಕ್ತ ಸ್ಥಾನಮಾನ ಸಿಗದವರ ಪೈಕಿ ಒಬ್ಬರನ್ನು ನೇಮಕ ಮಾಡುವ ಸಂಭವವಿದೆ.

ಜುಲೈಯಲ್ಲಿ ನೇಮಕ
ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಸಿಎಂ ಯಡಿಯೂರಪ್ಪ ಜತೆ ಒಂದು ಸುತ್ತು ಚರ್ಚೆ ನಡೆಸಲಿದ್ದಾರೆ. ಬಳಿಕ ರಾಜ್ಯ ಕೋರ್‌ ಕಮಿಟಿ ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿ ಬಳಿಕವಷ್ಟೇ ವರಿಷ್ಠರಿಗೆ ಸಂಭಾವ್ಯರ ಹೆಸರು ರವಾನಿಸಲಾಗುತ್ತದೆ. ಜುಲೈ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ನೇಮಕ ಪ್ರಕ್ರಿಯೆ ನಡೆಯಬಹುದು. ಆಷಾಢ ಮಾಸವೆಂಬ ಕಾರಣಕ್ಕೆ ನೇಮಕ ಮುಂದೂಡುವುದಿಲ್ಲ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಪಕ್ಷದ ವರ್ಚಸ್ಸು ವೃದ್ಧಿ
ರಾಜ್ಯಸಭೆ, ವಿಧಾನ ಪರಿಷತ್‌ನಂತಹ ಪ್ರತಿಷ್ಠಿತ ಸ್ಥಾನಗಳಿಗೆ ಪಕ್ಷಕ್ಕಾಗಿ ದುಡಿದ ಸಾಮಾನ್ಯರನ್ನು ಆಯ್ಕೆ ಮಾಡಿದ ಪಕ್ಷದ ನಿಲುವಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅನ್ಯ ಪಕ್ಷಗಳ ಮುಖಂಡರೂ ಮೆಚ್ಚುಗೆ ಸೂಚಿಸುತ್ತಿದ್ದು, ಒಟ್ಟಾರೆ ಪಕ್ಷದ ವರ್ಚಸ್ಸು ವೃದ್ಧಿಸುತ್ತಿದೆ. ಹಾಗಾಗಿ ನಾಮನಿರ್ದೇಶಿತರ ಆಯ್ಕೆಯಲ್ಲೂ ಅಪರೂಪದ ಸಾಧಕರನ್ನು ಗುರುತಿಸಿ ಭಿನ್ನ ಪಕ್ಷ ಎಂಬುದನ್ನು ಇನ್ನಷ್ಟು ಗಟ್ಟಿಪಡಿಸಲು ಪಕ್ಷದ ನಾಯಕರು ಮುಂದಾಗಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.