ಹಳೇ ದ್ವೇಷ: ರೌಡಿಶೀಟರ್ ಹತ್ಯೆ
Team Udayavani, Jun 28, 2020, 5:41 AM IST
ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ವೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಜಾಲ ನಿವಾಸಿ ಸುಬ್ರಹ್ಮಣ್ಯ (30) ಕೊಲೆಯಾದ ರೌಡಿಶೀಟರ್. ಶುಕ್ರವಾರ ಸಂಜೆ ಆರು ಗಂಟೆ ಸುಮಾರಿಗೆ ಮೀನುಕುಂಟೆ ಹೊಸೂರು ಗ್ರಾಮಕ್ಕೆ ಸುಬ್ರಹ್ಮಣ್ಯ ಹೋಗಿದ್ದ.
ಅದೇ ವೇಳೆ ಆತನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಐದಾರು ಮಂದಿ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂ ದ ಹಲ್ಲೆ ನಡೆಸಿ ಪರಾರಿ ಯಾಗಿದ್ದಾರೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಬ್ರಹ್ಮಣ್ಯ ನನ್ನು ಕೂಡಲೇ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿರ ಮಧ್ಯಾಹ್ನ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು. ಸುಬ್ರಹ್ಮಣ್ಯ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದ್ದು,
ಈತನ ವಿರುದ್ಧ ಕೊಲೆ, ದರೋಡೆ ಸೇರಿ ಹತ್ತಕ್ಕೂ ಹೆಚ್ಚು ಪ್ರಕರಣ ಗಳಿದ್ದು, ಜೈಲು ಸೇರಿದ್ದ. ಇತ್ತೀಚೆಗೆ ಬಿಡುಗಡೆ ಹೊಂದಿ ಕೆಲ ಯುವಕರ ಜತೆ ಗಲಾಟೆ ಮಾಡಿಕೊಂಡಿದ್ದ. ಅದೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಸಂಚು ರೂಪಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು