ದಾವಣಗೆರೆ ಜಿಲ್ಲೆಯಲ್ಲಿಂದು ಆರು ಮಂದಿಗೆ ಕೋವಿಡ್-19 ಸೋಂಕು ದೃಢ
Team Udayavani, Jun 28, 2020, 8:34 PM IST
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನರಲ್ಲಿ ಮಹಾಮಾರಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ದಾವಣಗೆರೆಯ ತರಳಬಾಳು ಬಡಾವಣೆ 37 ವರ್ಷದ ವ್ಯಕ್ತಿ (ರೋಗಿ ನಂಬರ್ 11950), 64 ವರ್ಷದ ವೃದ್ಧ (ರೋಗಿ ನಂಬರ್ 11951), 30 ವರ್ಷದ ಮಹಿಳೆ (ರೋಗಿ ನಂಬರ್ 11952), 55 ವರ್ಷದ ವ್ಯಕ್ತಿ (ರೋಗಿ ನಂಬರ್ 11953), ಹಗೇದಿಬ್ಬ ವೃತ್ತದ 68 ವರ್ಷದ ವೃದ್ಧ (ರೋಗಿ ನಂಬರ್ 11954), ಹರಿಹರದ ಗಂಗಾನಗರದ 65 ವರ್ಷದ ವೃದ್ಧ (ರೋಗಿ ನಂಬರ್ 11955)ನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕೋವಿಡ್-19 ಗುಣಮುಖರಾದ ಚನ್ನಗಿರಿಯ ಕುಂಬಾರಬೀದಿಯ 31 ವರ್ಷದ ವ್ಯಕ್ತಿ( ರೋಗಿ ನಂಬರ್ 8799) , ದಾವಣಗೆರೆಯ ಆನೆಕೊಂಡದ 39 ವರ್ಷದ ವ್ಯಕ್ತಿ(ರೋಗಿ ನಂಬರ್ 8800), ಚನ್ನಗಿರಿಯ ಕುಂಬಾರ ಬೀದಿಯ 56 ವರ್ಷದ ಮಹಿಳೆ (ರೋಗಿ ನಂಬರ್8803), ಚನ್ನಗಿರಿಯ ಕುಂಬಾರ ಬೀದಿಯ 68 ವರ್ಷದ ಮಹಿಳೆ (ರೋಗಿ ನಂಬರ್8804), ಚನ್ನಗಿರಿಯ ಕುಂಬಾರ ಬೀದಿಯ 59 ವರ್ಷದ ವ್ಯಕ್ತಿ(ರೋಗಿ ನಂಬರ್ 8805), ಚನ್ನಗಿರಿಯ ಗೌಡರ ಬೀದಿಯ 47 ವರ್ಷದ ವ್ಯಕ್ತಿ(ರೋಗಿ ನಂಬರ್ 8806) ಭಾನುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ 18 ಜನರು ಸೇರಿ ಒಟ್ಟು 1,131 ಜನರು ಅವಲೋಕನದಲ್ಲಿದ್ದಾರೆ. 21 ಜನರು ಒಳಗೊಂಡಂತೆ 307 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. 8 ಜನರು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. ನಿನ್ನೆ 17 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ 787 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 603 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 577 ಮಾದರಿಗಳ ವರದಿ ನೆಗೆಟಿವ್ ಎಂಬುದಾಗಿ ಬಂದಿದೆ.
ಕೋವಿಡ್-19 ಪರೀಕ್ಷೆಗೆ ಸಂಬಂಧಿಸಿದಂತೆ ಕಳುಹಿಸಲಾಗಿರುವ 19,927 ಗಂಟಲು ದ್ರವ ಮಾದರಿಗಳಲ್ಲಿ 16,161 ಮಾದರಿಗಳ ವರದಿ ನೆಗೆಟಿವ್ ಆಗಿದೆ. ಇನ್ನೂ 3,471 ಮಾದರಿಗಳ ವರದಿ ಬರಬೇಕಾಗಿದೆ.
ಜಿಲ್ಲೆಯಲ್ಲಿ ಒಟ್ಟು 295 ಪ್ರಕರಣಗಳಲ್ಲಿ ಇದುವರೆಗೆ 246 ಜನರು ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದು, 42 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು