ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ


Team Udayavani, Jun 29, 2020, 6:31 AM IST

bsy-maatu

ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಾತಿನ ಮೇಲೆ ನಿಂತ ನಾಯಕರಾಗಿದ್ದು, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದರು. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಕೊಟ್ಟ ಮಾತು ಉಳಿಸಿ ಕೊಂಡ ನಾಯಕ ಇದ್ದರೆ ಅದು ಬಿಎಸ್‌ ವೈ ಮಾತ್ರ. ಈ ಮಾತಿಗೆ ನೀವು ಅಪವಾದ ಆಗಬೇಡಿ. ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳುತ್ತಿಲ್ಲ. ಅದು  ನಿಮಗೆ ಬಿಟ್ಟ ವಿಚಾರ. ಆದರೆ ನನ್ನ ಅನುಭವ ಬಳಸಿಕೊಳ್ಳಿ ಎಂದು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಮಾತು ತಪ್ಪಬೇಡಿ: ದೇಶದ ರಾಜಕಾರಣ ನಡೆಯುತ್ತಿರುವುದು ಭಾವನೆ ಮತ್ತು ನಂಬಿಕೆ ಮೇಲೆ. ಆ ಎರಡೂ ಮುಗಿದು ಹೋದರೆ ರಾಜಕಾರಣ ಇರೋದೇ ಇಲ್ಲ. ಜನನಾಯಕರು ಈ ಭಾವನೆ ಮತ್ತು ನಂಬಿಕೆ ಉಳಿಸಿಕೊಳ್ಳಬೇಕಿದೆ.  ಯಡಿಯೂರಪ್ಪನವರೇ ತಾವು ಮಾತು ತಪ್ಪದ ಮಗನಾಗಿ. ಮಾತು ತಪ್ಪಿದ ಮಗನಾಗಬಾರದು ಎಂಬುದು ಜನರ ಅಭಿಪ್ರಾಯ ಎಂದು ಹೇಳಿದರು.

ನನ್ನ ಆಶಯ: ನನಗೆ ಈಗಾಗಲೇ ಸಾಕಷ್ಟು ಅನುಭವ ಆಗಿದೆ. ಜನರು ನೆನಪಿಟ್ಟುಕೊಳ್ಳುವಂತಹ ಕೆಲಸಗಳನ್ನು ಮಾಡಿದ್ದೇನೆ. ಅಷ್ಟು ಸಾಕು. ನನಗೆ ಎಂಎಲ್ಸಿ ಸ್ಥಾನ ಸಿಕ್ಕಾಕ್ಷಣ ನನ್ನ ಕೀರ್ತಿ ಯೇನು ಅಟ್ಟಕ್ಕೇರುವುದಿಲ್ಲ. ಸ್ಥಾನ ಸಿಗದಾಕ್ಷಣ  ನನಗೇನೂ ಬೇಸರವಾಗುವುದಿಲ್ಲ. ಆದರೆ ಅವರು ಕೊಟ್ಟ ಮಾತನ್ನು ಉಳಿಸಿ  ಕೊಳ್ಳಲಿ, ಮಾತು ತಪ್ಪದ ಮಗನಾಗದಿರಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

7 ಪುಸ್ತಕ ಬರೆದಿದ್ದೇನೆ: ನಾನು ಸಾಹಿತಿಯೂ ಹೌದು, ರಾಜಕಾರಣಿಯೂ ಹೌದು. 7 ಪುಸ್ತಕಗಳನ್ನು ಬರೆದಿದ್ದೇನೆ. ಚುನಾವಣೆ ವಿಡಂಬನೆ, ತುರ್ತು ಪರಿಸ್ಥಿತಿ ಬಗ್ಗೆಯೂ ಬರೆದಿದ್ದೇನೆ. ಚಾಣಕ್ಯನ ಕಾಲದಲ್ಲಿ ಹೇಗೆಲ್ಲ ಚುನಾವಣೆ ನಡೆ  ಯುತ್ತಿತ್ತು ಎಂಬುದನ್ನು ಉಲ್ಲೇಖೀಸಿದ್ದೇನೆ ಎಂದು ಹೇಳಿದರು. ನಾನು ಮತ್ತೂಂದು ರಾಜಕೀಯ ಪುಸ್ತಕ ಬರೆಯಲು ಮುಂದಾಗಿ ದ್ದೇನೆ. ಆ ಪುಸ್ತಕಕ್ಕೆ “ದಿ ಬಾಂಬೆ ಡೇಸ್‌’ ಎಂದು ಹೆಸರು ಕೊಟ್ಟಿದ್ದೇನೆ. ಈ ಪುಸ್ತಕ ಮೂರು  ಭಾಷೆಯಲ್ಲಿರಲಿದ್ದು, ದೆಹಲಿಯಲ್ಲಿ ಬಿಡುಗಡೆ ಮಾಡುತ್ತೆನೆ. ಬಾಂಬೆಯಲ್ಲಿ ಏನಾಯಿತು, ಅದೆಲ್ಲವನ್ನು ಬರೆಯುತ್ತಿದ್ದೇನೆ. ಒಂದು ಸರ್ಕಾರ ಹೋಗಿ ಮತ್ತೂಂದು ಸರ್ಕಾರ ಬರಲೇಬೇಕಿದೆ. ಜನ ತಂತ್ರ ವ್ಯವಸ್ಥೆ ಯಲ್ಲಿ ಭಾವನೆ,  ನಂಬಿಕೆ ಮೇಲಿನ ತಲ್ಲಣ ವೇನು. ಇದೆಲ್ಲ ವನ್ನು ಅಕ್ಷರದ ಮೂಲಕ ಜನರಿಗೆ ತಿಳಿಸು ತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿ ವಿರುದ್ಧ ವ್ಯಂಗ್ಯ: ನಾನು ಯಾವ ಪಕ್ಷದಲ್ಲೇ ಇದ್ದರು ಆ ಪಕ್ಷವನ್ನ ಪ್ರೀತಿ ಮಾಡುತ್ತೇನೆ. ಪಕ್ಷದ ನಾಯಕತ್ವದ ನಡವಳಿಕೆ ವಿರುದ್ಧವೂ ದಂಗೆ ಎದ್ದಿದ್ದೇನೆ. ಬಂಗಾರಪ್ಪ, ವೀರಪ್ಪ ಮೊಯ್ಲಿ ಹಾಗೂ ನಾವೇ ಕರೆತಂದ  ಸಿದ್ದರಾಮಯ್ಯನ ವಿರುದ್ಧವೂ ದಂಗೆ ಎದ್ದಿದ್ದೆ. ಸಮ್ಮಿಶ್ರ ಸರ್ಕಾರದ ಕುಮಾರಸ್ವಾಮಿ ವಿರುದ್ಧ ದಂಗೆ ಎದ್ದವನು ನಾನು. ಈ ಎಲ್ಲ ಸಂಗತಿಗಳಿಗೆ ಪುಸ್ತಕ ರೂಪ ನೀಡಲು ಅಣಿಯಾಗುತ್ತಿದ್ದೇನೆ ಎಂದು ವಿಶ್ವನಾಥ್‌ ಹೇಳಿದರು. 2006ರಲ್ಲಿ  ಕುಮಾರಸ್ವಾಮಿ ಅವರು ಧರ್ಮ ಸಿಂಗ್‌ ಸರ್ಕಾರ ಬೀಳಿಸಿದ್ದು ಕ್ಷಿಪ್ರ ಕ್ರಾಂತಿಯಂತೆ. ಆದರೆ, ಈಗ ನಾವು ಮಾಡಿದ್ದು ಪಕ್ಷಕ್ಕೆ ದ್ರೋಹ ಅಂತೆ ಎಂದು ಮಾಜಿ ಸಿಎಂ ಎಚ್‌ಡಿಕೆ ವಿರುದ್ಧ ಕಿಡಿಕಾರಿದರು.

ಸಾರಾ ಹೇಳಿಕೆಗೆ ತಿರುಗೇಟು: ವಿಶ್ವನಾಥ್‌ ಅಧ್ಯಾಯ ಮುಗಿಯಿತು ಎಂಬ ಸಾ.ರಾ.ಮಹೇಶ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಯಾರಿಗೂ ಉತ್ತರ ಕೊಡಬೇಕಿಲ್ಲ. ಅವರ್ಯಾರೂ ನನ್ನ ಮಟ್ಟ ಅಲ್ಲ. ಅವರು ಗ್ರಾಮ ಪಂಚಾಯತಿ  ಮಟ್ಟದವರು. ಅದಕ್ಕೆ ನಾನು ಉತ್ತರ ಕೊಡಬೇಕಿಲ್ಲ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.