ಲಂಚ ಕೊಡದಿದ್ರೆ ಇಲ್ಲಿ ಚಿಕಿತ್ಸೆ ನೀಡಲ್ಲ!

ಅಥಣಿ ತಾಲೂಕು ಆಸ್ಪತ್ರೆಗೆ ಬೇಕಿದೆ ಮೇಜರ್‌ ಸರ್ಜರಿ

Team Udayavani, Jun 29, 2020, 4:40 PM IST

ಲಂಚ ಕೊಡದಿದ್ರೆ ಇಲ್ಲಿ ಚಿಕಿತ್ಸೆ ನೀಡಲ್ಲ !

ಅಥಣಿ: “”ವೈದ್ಯೋ ನಾರಾಯಣೊ ಹರಿ” ಎಂಬ ಮಾತು ಈಗಲೂ ಪ್ರಚಲಿತದಲ್ಲಿದೆ. ಸಾಕಷ್ಟು ಪ್ರಸಂಗಗಳಲ್ಲಿ ವೈದ್ಯರು ಅನೇಕರಿಗೆ ಪುನರ್ಜನ್ಮ ನೀಡಿದ್ದಾರೆ. ಎಷ್ಟೋ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಆದರೆ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ವ್ಯವಸ್ಥೆ ಇದೆ.

ಕೋವಿಡ್ ಹಾವಳಿಯ ಈ ಸಂಕಷ್ಟ ಕಾಲದಲ್ಲಿ ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವ ಪ್ರತಿಯೊಬ್ಬರಿಂದಲೂ ಚಿಕಿತ್ಸೆಗಾಗಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅಥಣಿ ತಾಲೂಕಾ ಆಸ್ಪತ್ರೆಯಲ್ಲಿ ಹಣ ನೀಡದಿದ್ದರೆ ರೋಗಿಗಳನ್ನು ಮಾತನಾಡಿಸುವುದೇ ಇಲ್ಲ. ಇನ್ನು ಸಮರ್ಪಕ ಚಿಕಿತ್ಸೆ ಕನಸಿನ ಮಾತಾಗಿದೆ. ಒಳಗಡೆ ಹೋದರೆ ಸಾಕು, ಖಾಸಗಿ ಆಸ್ಪತ್ರೆಗಳಂತೆ ಇಲ್ಲಿಯೂ ಪ್ರತಿಯೊಂದು ಚಿಕಿತ್ಸೆಗೂ ಇಂತಿಷ್ಟು ಹಣ ನೀಡಬೇಕು ಎಂದು ದರ ನಿಗದಿ ಮಾಡಲಾಗಿದೆ. ದುಡ್ಡು ಕೊಟ್ಟರಷ್ಟೇ ಚಿಕಿತ್ಸೆ ಮಾಡಲಾಗುತ್ತಿದೆ ಎಂಬ ದೂರುಗಳು ಸಾಮಾನ್ಯವಾಗಿವೆ.

ಹೆರಿಗೆ ಸಮಯದಲ್ಲಿ ಸಿಜೇರಿಯನ್‌ ಮಾಡಿದರೆ ಸುಮಾರು 6ರಿಂದ 7 ಸಾವಿರ ರೂಪಾಯಿ ಕೊಡಬೇಕಾದ ಪರಿಸ್ಥಿತಿ ಇದೆ. ಸಾಮಾನ್ಯ ಹೆರಿಗೆಗೂ ಕೂಡ ಕನಿಷ್ಟ ಒಂದರಿಂದ ಎರಡು ಸಾವಿರ ರೂಪಾಯಿ ತೆರಬೇಕು. ಹಣ ಪಡೆಯದೇ ಯಾವುದೇ ಹೆರಿಗೆ ಸೇವೆ ಸಿಗುವುದಿಲ್ಲ. ಈ ಕುರಿತು ಮೇಲಾಧಿಕಾರಿಗಳಿಗೆ ಸಾಕಷ್ಟು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ಆರೋಪ.

ವೈದ್ಯರು-ಸಿಬ್ಬಂದಿ ಜಗಳ: ಇಲ್ಲಿಯ ಸಿಬ್ಬಂದಿ ಮತ್ತು ವೈದ್ಯರ ನಡುವೆ ಸಮನ್ವಯತೆ ಇಲ್ಲ. ಇದರಿಂದ ನಿತ್ಯವೂ ಸಿಬ್ಬಂದಿ ಮತ್ತು ವೈದ್ಯರ ನಡುವೆ ಜಗಳಗಳು ನಡೆಯುತ್ತಲೇ ಇವೆ. ರೋಗಿಗಳ ವಾರ್ಡ್‌ ಬಳಿಯೇ ವೈದ್ಯರು ಮತ್ತು ಸಿಬ್ಬಂದಿ ಹಲವು ಬಾರಿ ಕಿತ್ತಾಡಿಕೊಂಡಿದ್ದಾರೆ. ವೈದ್ಯರು ಸರಿಯಾದ ಸಮಯಕ್ಕೆ ಬರದೇ ಇರುವುದನ್ನು ಪ್ರಶ್ನಿಸಿದ ಸಿಬ್ಬಂದಿಯೊಬ್ಬರಿಗೆ ಸಾರ್ವಜನಿಕರ ಎದುರೇ ವೈದ್ಯರು ಬೆದರಿಕೆ ಹಾಕಿದ್ದಲ್ಲದೆ ಕೈ ಕೈ ಮಿಲಾಯಿಸಿರುವ ಘಟನೆಯೂ ನಡೆದಿದೆ. ಇದರಿಂದ ತೊಂದರೆ ಅನುಭವಿಸುತ್ತಿರುವವರು ಆಸ್ಪತ್ರೆಗೆ ಬರುವ ರೋಗಿಗಳಾಗಿದ್ದಾರೆ. ಸರಕಾರಿ ಆಸ್ಪತ್ರೆಯ ದುರವಸ್ಥೆಗೆ ಬೇಸತ್ತ ಸ್ಥಳೀಯರು ಅನಾಮಧೇಯ ವ್ಯಕ್ತಿಯ ಹೆಸರಿನಲ್ಲಿ, ನಮಗೆ ಇಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ-ಸಿಗುವ ಭರವಸೆಯೂ ಇಲ್ಲ ಎಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಆದರೆ ಇದುವರೆಗೆ ಯಾವುದೇ ಕ್ರಮ ಆಗಿಲ್ಲ. ಇನ್ನು 108 ಆಂಬುಲೆನ್ಸ್‌ ಸೇವೆಗೂ ಇಲ್ಲಿ ಹಣ ಕೊಡಬೇಕು. ಇಲ್ಲದಿದ್ದರೆ ರೋಗಿ ಮೃತಪಟ್ಟರೂ ಆಂಬುಲೆನ್ಸ್‌ ಬರುವುದಿಲ್ಲ. ಇದರಿಂದ ಬೇಸತ್ತು ಸ್ವಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಿ ಎಂದು ನೊಂದ ರೋಗಿಯೊಬ್ಬ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗಳಿಗಾಗಿ ಹಣ ಪಡೆಯಲಾಗುತ್ತಿದೆ ಎಂಬ ವಿಷಯವಾಗಿ ಇದುವರೆಗೆ ತಮಗೆ ಯಾರೂ ಲಿಖೀತವಾಗಿ ದೂರು ನೀಡಿಲ್ಲ, ಹಣ ಕೊಟ್ಟವರು ಲಿಖೀತವಾಗಿ ದೂರು ನೀಡಿದರೆ ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. – ಡಾ| ಚನಗೌಡ ಪಾಟೀಲ ತಾಲೂಕು ವೈದ್ಯಾಧಿಕಾರಿ

ಇಲ್ಲಿ ಮಾನವೀಯತೆಗಿಂತ ಹಣಕ್ಕೆ ಹೆಚ್ಚು ಬೆಲೆ ಇದೆ. ಸ್ವತಃ ನನ್ನ ಸಹೋದರಿಯ ಹೆರಿಗೆಗಾಗಿ ನಾನೇ ಇಲ್ಲಿ ಮೂರು ಸಾವಿರ ರೂ. ಕೊಟ್ಟಿದ್ದೇನೆ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೇ ಬೆದರಿಕೆ ಹಾಕಿದ್ದಾರೆ. ಉಡಾಫೆಯ ಮಾತು ಆಡಿದ್ದಾರೆ. ಮೇಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. – ಚಿದಾನಂದ ಶೇಗುಣಸಿ ಸಾಮಾಜಿಕ ಕಾರ್ಯಕರ್ತ, ಅಥಣಿ

 

ಸಂತೋಷ ರಾ. ಬಡಕಂಬಿ

ಟಾಪ್ ನ್ಯೂಸ್

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.