ಭತ್ತ ಖರೀದಿ ನೋಂದಣಿ ಸ್ಥಗಿತ: ರೈತರ ಪರದಾಟ

ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳು ಭತ್ತ ಮಾರಾಟವಾಗದ್ದರಿಂದ ಬೆಳೆಗಾರರಿಗೆ ಆತಂಕ

Team Udayavani, Jun 29, 2020, 6:37 PM IST

29-June-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊನ್ನಾಳಿ: ಭತ್ತ ಖರೀದಿ ನೋಂದಣಿಯನ್ನು ಎಪಿಎಂಸಿಯಲ್ಲಿ ಸ್ಥಗಿತಗೊಳಿಸಿರುವುದರಿಂದ ರೈತರು ಪರದಾಡುವ ಸ್ಥಿತಿ ಉಂಟಾಗಿದೆ.

2019-20ನೇ ಸಾಲಿನಲ್ಲಿ ರೈತರು ಬೆಳೆದ ಭತ್ತವನ್ನು ಖರೀದಿಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಸರ್ಕಾರ 2019ರ ಡಿಸೆಂಬರ್‌ 30 ರಂದು ಅನುಮತಿ ನೀಡಿತ್ತು. ಫೆಬ್ರವರಿವರೆಗೂ ರೈತರು ನೋಂದಣಿ ಮಾಡಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗಿತು. ಮಾರ್ಚ್‌ನಲ್ಲಿ ಪ್ರಾರಂಭವಾದ ಲಾಕ್‌ಡೌನ್‌ ಸತತ ಎರಡೂವರೆ ತಿಂಗಳು ಮುಂದುವರಿದಿದ್ದರಿಂದ ರೈತರು ಭತ್ತ ಖರೀದಿಗೆ ನೋಂದಣಿ ಮಾಡಿಸಲು ಆಗಲೇ ಇಲ್ಲ. ಈಗ ಜೂನ್‌ 15 ರಿಂದ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈ ಮಧ್ಯೆ ಎಪಿಎಂಸಿ ಮುಂಭಾಗದಲ್ಲಿ ನೋಂದಣಿ ಕಾರ್ಯ ಹಮ್ಮಿಕೊಳ್ಳದೆ ಒಳಭಾಗದ ಗೋದಾಮಿನಲ್ಲಿ ನೋಂದಣಿ ಕಾರ್ಯ ನಡೆಸಲಾಗಿತ್ತು. ಸಂಬಂಧಿಸಿದ ಅಧಿಕಾರಿಗಳು ಕನಿಷ್ಠ ಪಕ್ಷ ಈ ಬಗ್ಗೆ ಸೂಚನಾ ಫಲಕವನ್ನೂ ಹಾಕಿರಲಿಲ್ಲ. ಇದರಿಂದಾಗಿ ಎಷ್ಟೋ ಭತ್ತ ಬೆಳೆಗಾರರು ಎಪಿಎಂಸಿವರೆಗೆ ಬಂದು ಹಾಗೆಯೇ ಹಿಂದಿರುಗಿದ್ದೂ ಇದೆ. ಎಲ್ಲಿ ನೋಂದಣಿ ಮಾಡಿಸಬೇಕೆಂಬುದು ಗೊತ್ತಾಗದೆ ಭತ್ತವನ್ನು ಮನೆಯಲಿಟ್ಟುಕೊಂಡು ಕುಳಿತಿದ್ದಾರೆ.

ಭತ್ತದ ಬೆಲೆ 1815 ರೂ. ಹಾಗೂ ಪ್ರೋತ್ಸಾಹಧನ 200 ಸೇರಿ ಒಟ್ಟು 2015 ರೂ. ಇದೆ. ಹೊರಗಡೆ ಕೇವಲ 1400 ರಿಂದ 1500 ರೂ. ವರೆಗೆ ಇದೆ. ಭತ್ತವನ್ನು ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡೋಣವೆಂದರೆ ಅದೂ ಸಾಧ್ಯವಾಗುತ್ತಿಲ್ಲ.

ಕಳೆದ ಮೂರು ತಿಂಗಳಲ್ಲಿ ಕೇವಲ 876 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಹೊನ್ನಾಳಿಯ ಮಂಜುನಾಥ ರೈಸ್‌ಮಿಲ್‌, ದಾವಣಗೆರೆಯ ಮುರುಘರಾಜೇಂದ್ರ ಇಂಡಸ್ಟ್ರೀಸ್‌, ಬಸವೇಶ್ವರ ಇಂಡಸ್ಟ್ರೀಸ್‌ ಹಾಗೂ ಎಚ್‌.ಬಿ. ಇಂಡಸ್ಟ್ರೀಸ್‌ನಲ್ಲಿ ಭತ್ತ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.

ಗೋದಾಮಿನ ವ್ಯವಸ್ಥಾಪಕರು ಎಲ್ಲಿ ಹೇಳುತ್ತಾರೋ ಅಂತಹ ಕಡೆ ರೈತರು ತಮ್ಮ ಭತ್ತವನ್ನು ದಾಸ್ತಾನು ಮಾಡಬೇಕಿದೆ. ಅವಳಿ ತಾಲೂಕಿನ ಅನೇಕ ರೈತರು ಭತ್ತ ಖರೀದಿ ನೋಂದಣಿ ಸಲುವಾಗಿ ಎಪಿಎಂಸಿಗೆ ಅಲೆಯುತ್ತಿದ್ದಾರೆ. ಆದರೆ ಅಧಿಕಾರಿಗಳು ನೋಂದಣಿ ದಿನಾಂಕ ಮುಗಿದಿರುವುದರಿಂದ ಈಗ ನೋಂದಣಿ ಮಾಡಿಸಿಕೊಳ್ಳುವುದಿಲ್ಲ ಎಂದು ಸಾಗ ಹಾಕುತ್ತಿದ್ದಾರೆ. ಇದರಿಂದ ರೈತರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದು, ಸರ್ಕಾರ ನೋಂದಣಿ ಅವಧಿಯನ್ನು ವಿಸ್ತರಿಸಿ ಭತ್ತ ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕಿದೆ.

‌ಸಮಸ್ಯೆಗೆ ಅಧಿಕಾರಿಗಳೇ ಕಾರಣ
ಕಷ್ಟ ಪಟ್ಟು ಭತ್ತ ಬೆಳೆದರೂ ಅಧಿಕಾರಿಗಳು ಖರೀದಿಗೆ ಮೀನಾಮೇಷ ಎಣಿಸುತ್ತಿದ್ದಾರೆ. ಸರ್ಕಾರವೇ ಎರಡುವರೆ ತಿಂಗಳು ಲಾಕ್ ಡೌನ್‌ ಮಾಡಿದೆ. ಅಲ್ಲದೆ ಅಧಿಕಾರಿಗಳು ನೋಂದಣಿ ಸ್ಥಳವನ್ನು ತಮಗೆ ಇಷ್ಟ ಬಂದ ಕಡೆ ಮಾಡಿರುವುದರಿಂದ ಎಲ್ಲಿ ನೋಂದಣಿ ಮಾಡಿಸಬೇಕೆಂದು ಗೊತ್ತಾಗದೆ ಅಲೆದಾಡಿ ಕೊನೆಗೆ ಕೇಳಿಕೊಂಡು ಇಲ್ಲಿಗೆ ಬಂದರೆ ನೋಂದಣಿ ಸಮಯ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಸಾಲ ಮಾಡಿ ಬೆಳೆದ ನಾವು ಎಲ್ಲಿಗೆ ಹೋಗಬೇಕು ಎಂದು ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದ ಭತ್ತ ಬೆಳೆಗಾರ ಬಸವನಗೌಡ ಬೇಸರ ವ್ಯಕ್ತಪಡಿಸಿದರು.

ಎಂ.ಪಿ.ಎಂ ವಿಜಯಾನಂದಸ್ವಾಮಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.