ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಅಪಾಯಕಾರಿ ವಿಹಾರ

ಕಡಲ ತೀರದಲ್ಲಿ ಜೀವದ ಜತೆಗಿನ ಚೆಲ್ಲಾಟಕ್ಕೆ ಬೇಕಿದೆ ಕಡಿವಾಣ

Team Udayavani, Jun 30, 2020, 6:31 AM IST

ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಅಪಾಯಕಾರಿ ವಿಹಾರ

ಕುಂದಾಪುರ: ವಿಶ್ವವಿಖ್ಯಾತ ತ್ರಾಸಿ – ಮರವಂತೆ ಕಡಲ ಕಿನಾರೆಯಲ್ಲಿ ಅಲೆಗಳ ಅಬ್ಬರ ಹೆಚ್ಚುತ್ತಿರುವ ಮಧ್ಯೆಯೂ ಅಪಾಯಕಾರಿ ಸ್ಥಳದಲ್ಲಿ ನಿಂತು ಪ್ರವಾಸಿಗರ ಸೆಲ್ಫಿ, ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಕ್ಕಳು, ಮಹಿಳೆಯರ ಸಹಿತ ಅನೇಕರು ಕಡಲ ತೀರದಲ್ಲಿ ವಿಹರಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ.

ನದಿ ಹಾಗೂ ಕಡಲ ಮಧ್ಯದಲ್ಲಿ ಹಾದುಹೋಗುವ ಹೆದ್ದಾರಿಯ ತ್ರಾಸಿ – ಮರವಂತೆಯ ಅತ್ಯಪೂರ್ವವಾದ ಸೊಬಗನ್ನು ಕಣ್ತುಂಬಿಕೊಳ್ಳಲು ದೂರ- ದೂರದ ಊರುಗಳಿಂದ ಪ್ರತಿ ನಿತ್ಯ ಸಾವಿರಾರು ಮಂದಿ ಬರುತ್ತಾರೆ. ಆದರೆ ಸ್ನೇಹಿತರು, ಸಂಬಂಧಿಕರೊಂದಿಗೆ ಮೈಮರೆತು ಅಪಾಯವನ್ನು ಲೆಕ್ಕಿಸದೇ ನೀರಿಗಿಳಿಯುತ್ತಿದ್ದು, ಇಲ್ಲಿ ಈಗ ಯಾರೂ ಕೂಡ ಕೇಳುವವರೇ ಇಲ್ಲದಂತಾಗಿದೆ.

ಕಡಲ್ಕೊರೆತಕ್ಕಾಗಿ ಹಾಕಲಾದ ಕಲ್ಲು, ಬಂಡೆಗಳ ತುದಿಯವರೆಗೆ ಹೋಗಿ ಭಾರೀ ಅಲೆಗಳು ಅಪ್ಪಳಿಸುವ ಸನಿಹದಲ್ಲೇ ಫೋಟೋ ತೆಗೆಯುತ್ತಿರುವುದು, ಭಾರೀ ಗಾತ್ರದ ಅಲೆಗಳ ಅಬ್ಬರವಿದ್ದರೂ ಅದಕ್ಕೆ ಬೆನ್ನು ಹಾಕಿ ಸೆಲ್ಫಿ ಕ್ಲಿಕ್ಕಿಸುವುದು, ಕಡಲಿಗಿಳಿದು ಅಲೆಗಳ ಜತೆ ಆಟವಾಡುವುದು ನೋಡಿದರೆ ಆತಂಕ ಉಂಟಾಗುತ್ತದೆ.

ಸುರಕ್ಷತಾ ಕ್ರಮಕ್ಕೆ ಆಗ್ರಹ
ತ್ರಾಸಿ – ಮರವಂತೆ ಚತುಷ್ಪಥ ಹೆದ್ದಾರಿಯ ಸೇತುವೆಯಿಂದ ಇಲ್ಲಿನ ಸೀಲ್ಯಾಂಡ್‌ವರೆಗಿನ ಕಡಲಬ್ಬರ ಜೋರಾ ಗಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ. ದಡದಿಂದ 90 ಮೀ. ಉದ್ದಕ್ಕಿರುವ ತಡೆಗೋಡೆ ಮೇಲೆ ನಿಲ್ಲುವುದು, ಸ್ನಾನ ಮಾಡುವುದು ಹಾಗೂ ಫೋಟೋ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದೆ.

ಮಳೆಗಾಲದಲ್ಲಿ ಸಮುದ್ರದ ಅಲೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಇದರ ಅಬ್ಬರವನ್ನು ಅಂದಾಜಿಸುವುದು ಕೂಡ ಕಷ್ಟ. ಇಲ್ಲಿನ ಕಡಲ ತೀರದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಗೃಹ ರಕ್ಷಕದ ದಳದವರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹೆಚ್ಚುವರಿ “ಪ್ರವಾಸಿ ಮಿತ್ರ’ರಿಗೆ ಬೇಡಿಕೆ
ತ್ರಾಸಿ- ಮರವಂತೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಇರಬೇಕಾದ ಪ್ರವಾಸಿ ಮಿತ್ರರ ಕೊರತೆಯಿದೆ. ಇಲ್ಲಿ ಗೃಹ ರಕ್ಷಕ ದಳದ ಇಬ್ಬರು ಸಿಬಂದಿ ಹಾಗೂ ಒಬ್ಬರು ಲೈಫ್‌ಗಾರ್ಡ್‌ ಅಗತ್ಯವಿದ್ದರೂ, ಈಗ ಇಲ್ಲಿರುವುದು ಒಬ್ಬರು ಗೃಹ ರಕ್ಷಕ ದಳದ ಸಿಬಂದಿ ಹಾಗೂ ಒಬ್ಬರು ಪ್ರವಾಸಿ ಮಿತ್ರರು ಮಾತ್ರ. ಇಲ್ಲಿಗೆ 4 ಮಂದಿ ಪ್ರವಾಸಿ ಮಿತ್ರರನ್ನು ನಿಯೋಜಿಸಿದ್ದರೂ, ಈಗಿರುವುದು ಇಲ್ಲಿ ಒಬ್ಬ ಪ್ರವಾಸಿ ಮಿತ್ರರು ಮಾತ್ರ.

ಗಮನ ಹರಿಸಲಾಗುವುದು
ಮರವಂತೆಗೆ ಕಳೆದ ವರ್ಷ ನಾಲ್ವರು ಪ್ರವಾಸಿ ಮಿತ್ರರನ್ನು ನೇಮಕಗೊಳಿಸಲಾಗಿತ್ತು. ಆದರೆ ಆ ಬಳಿಕ ಸೋಮೇಶ್ವರ, ಕಾಪು, ಮಲ್ಪೆ ಮತ್ತಿತರ ಕಡೆಗಳಿಗೆ ನಿಯೋಜಿಸಿರುವುದರಿಂದ ಹಾಗೂ ತುರ್ತು ನೆರೆ ವಿಪತ್ತು ತಂಡದಲ್ಲಿಯೂ ಅಗತ್ಯವಿರುವುದರಿಂದ ಸದ್ಯಕ್ಕೆ ಒಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿಗೆ ಹೆಚ್ಚುವರಿ ಪ್ರವಾಸಿ ಮಿತ್ರರ ನಿಯೋಜನೆ ಕುರಿತಂತೆ ಗಮನಹರಿಸಲಾಗುವುದು.
– ಡಾ| ಪ್ರಶಾಂತ್‌ ಶೆಟ್ಟಿ, ಸಮಾದೇಷ್ಟರು, ಜಿಲ್ಲಾ ಗೃಹ ರಕ್ಷಕ ದಳ ಉಡುಪಿ

ಎಚ್ಚರಿಕೆ ಅಗತ್ಯ
ಮರವಂತೆಯಲ್ಲಿ ಪ್ರವಾಸಿಗರ ಸುರಕ್ಷತಾ ಕ್ರಮಗಳ ಕುರಿತಂತೆ ಆದ್ಯತೆ ನೆಲೆಯಲ್ಲಿ ಗಮನಹರಿಸಲಾಗುವುದು. ಇಲ್ಲಿನ ಕಡಲ ತೀರದಲ್ಲಿ ವಿಹರಿಸುವಾಗ, ಸೆಲ್ಫಿ, ಫೋಟೋ ತೆಗೆಯುವ ಸಂದರ್ಭದಲ್ಲಿ ಪ್ರವಾಸಿಗರು ಆದಷ್ಟು ಎಚ್ಚರಿಕೆಯಿಂದ ಇರಬೇಕು. ಈಗಿನ್ನು ಮಳೆಗಾಲವಾಗಿರುವುದರಿಂದ ಕಲ್ಲು ಬಂಡೆಗಳು ಜಾರುವ ಸಂಭವವೂ ಇರುತ್ತದೆ.
– ಚಂದ್ರಶೇಖರ ನಾಯ್ಕ, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಉಡುಪಿ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.