ಕಳಪೆ ಬೇಳೆ ಪೂರೈಸಿದರೆ ಕಠಿಣ ಕ್ರಮ: ಗೋಪಾಲಯ್ಯ
Team Udayavani, Jun 30, 2020, 7:01 AM IST
ಹಾಸನ: ಅಕ್ಷರ ದಾಸೋಹದ ಯೋಜನೆಯಡಿ ಮಕ್ಕಳಿಗೆ ಕಳಪೆ ತೊಗರಿಬೇಳೆ ಪೂರೈಸಿದರೆ ಕಠಿಣ ಕ್ರಮ ಕೈಗೊಳ್ಳುವು ದಾಗಿ ಆಹಾರ ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದರು. ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ಹಾಗೂ ಹಾಸನದಲ್ಲಿ ಆಹಾರ ನಿಗಮದ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳಿಗೆ ನೀಡುವ ಬೇಳೆ ಕಳಪೆ ಗುಣಮಟ್ಟದ್ದಾಗಿದೆ ಎನ್ನುವ ಆರೋಪದ ಮೇಲೆ ಖುದ್ದಾಗಿ ಎಲ್ಲ ತಾಲೂಕಿಗೆ ಭೇಟಿ ನೀಡಿ ಸರಬ ರಾಜಾಗಿರುವ ಬೇಳೆಯನ್ನು ಪರಿಶೀಲನೆಗೆ ಒಳಪಡಿಸುತ್ತಿದ್ದೇನೆ. ಬೇಳೆ ಕಳಪೆ ಗುಣ ಮಟ್ಟದ್ದಾಗಿವೆ ಎಂದು ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ,
ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಪಂ ಸಿಇಒ ಬಿ.ಎ. ಪರಮೇಶ್ ಹಾಗೂ ಆಹಾರ ಇಲಾಖೆ ಉಪ ನಿರ್ದೇಶಕಿ ಸವಿತಾಅವರೊಂದಿಗೆ ಗೋದಾಮುಗಳಿಗೆ ಭೇಟಿ ನೀಡಿದ ಸಚಿವರು ದಾಸ್ತಾನು ಇದ್ದ ಬೇಳೆ ಕಾಳುಗಳನ್ನು ಪರಿಶೀಲಿಸಿದರು. ಇತರೆ ಜಿಲ್ಲೆಗಳಲ್ಲಿನ ಬೇಳೆಕಾಳುಗಳ ಮಾದರಿ ತರಿಸಿ ತಪಾಸಣೆಗೆ ಒಳಪಡಿಸಿ ಗುಣಮಟ್ಟದಲ್ಲಿ ಕಳಪೆಯಾದರೆ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಿ ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಬಾಂಬೆ ಡೇಸ್ ಪುಸ್ತಕ ಬರೆಯಲಿ ಓದುವೆ: ಎಚ್. ವಿಶ್ವನಾಥ್ ಅವರಿಗೆ ಸ್ಥಾನಮಾನ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಹಾಗೂ ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳಲಿ¨ªಾರೆ ಎಂದು ಸಚಿವ ಗೋಪಾಲಯ್ಯ ಹೇಳಿದರು. ವಿಶ್ವನಾಥ್ ಅವರು ಬಾಂಬೆ ಡೇಸ್ ಎಂಬ ಕೃತಿ ರಚಿಸುವುದಾಗಿ ಹೇಳಿದ್ದಾರೆ. ಅದು ಅವರ ವೈಯಕ್ತಿಕ ವಿಷಯವಾಗಿದೆ. ಕೃತಿಯನ್ನು ನಾನು ಓದುತ್ತೇನೆ. ಆದರೆ ಈ ಬಗ್ಗೆ ಹೆಚ್ಚು ಪ್ರಸ್ತಾಪ ಮಾಡುವು ದಿಲ್ಲ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ