ಕೋವಿಡ್ ತಡೆ; ಯಾದಗಿರಿ ಮಾದರಿ
ಜಿಲ್ಲೆಯಲ್ಲಿ ಗುಣಮುಖರ ಸಂಖ್ಯೆ ಹೆಚ್ಚು
Team Udayavani, Jun 30, 2020, 9:45 AM IST
ಯಾದಗಿರಿ: ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್19 ತಡೆಗಟ್ಟುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಬೀದರ ವೈದ್ಯಕೀಯ ಮಹಾವಿದ್ಯಾಲಯದಿಂದ ಆಗಮಿಸಿದ್ದ ರಾಜ್ಯ ಮಟ್ಟದ ಮೌಲ್ಯಮಾಪನ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ.
ಜೂ.26ರಿಂದ 28ರವರೆಗೆ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡ ಡಾ| ಚಂದ್ರಕಾಂತ ಚಿಲ್ಲರಗಿ, ಡಾ| ಶಿವರಾಜ ಬಿರಾದಾರ, ಡಾ| ಅಶೋಕ ಅವರನ್ನೊಳಗೊಂಡ ತಂಡವು, ಕೋವಿಡ್ ನಿಗ್ರಹಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿತು. ಜಿಲ್ಲೆಯ ಎಲ್ಲ ಕ್ವಾರಂಟೈನ್ ಕೇಂದ್ರ, ಕಂಟೈನ್ಮೆಂಟ್ ಝೋನ್, ಫೀವರ್ ಕ್ಲಿನಿಕ್ಗಳು, ಗಂಟಲು ದ್ರವ ಸಂಗ್ರಹಿಸುವ ವಾಹನ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ, ಕೋವಿಡ್ ಲ್ಯಾಬ್ಗಳನ್ನು, ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರಕರಣಗಳು, ಆಶಾ ಕಾರ್ಯಕತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿತು.
ಯಾದಗಿರಿ ಜಿಲ್ಲಾಡಳಿತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸರಿಸುತ್ತಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ನಡುವೆಯೂ ಕೋವಿಡ್ ತಡೆಗೆ ಶ್ರಮಿಸುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಗಂಟಲು ದ್ರವ ಮಾದರಿ ಪರೀಕ್ಷಿಸಿದೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಬೇಗನೆ ಗುಣಮುಖರಾಗಿ ಮಾಡಿರುವುದನ್ನು ತಂಡ ಶ್ಲಾಘಿಸಿದೆ.
ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಕೋವಿಡ್ ತಡೆಗೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮೌಲ್ಯಮಾಪನ ತಂಡಕ್ಕೆ ವಿವರಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ