ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ
Team Udayavani, Jul 1, 2020, 9:52 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ.
ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದು, ಆನೆ ಮರಿ ಆರೋಗ್ಯವಾಗಿದೆ ಎನ್ನಲಾಗಿದೆ.
ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರೀತಿ ಪಾತ್ರವಾಗಿತ್ತು. ವೀರೇಂದ್ರ ಹೆಗ್ಗಡೆಯವರು ಇಂದು ಆನೆ ಮರಿಯನ್ನು ವೀಕ್ಷಿಸಿ ಮುದ್ದಾಡಿದರು.