ಕೋವಿಡ್ ವಾರಿಯರ್ಸ್ ಕಾರ್ಯ ಶ್ಲಾಘನೀಯ: ಸ್ವಾಮೀಜಿ
Team Udayavani, Jul 1, 2020, 6:19 PM IST
ಮೂಡಿಗೆರೆ: ಕೋವಿಡ್ ಸೋಂಕು ನಿರ್ಮೂಲನೆಗೆ ಜೀವದ ಹಂಗುದೊರೆದು ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್ ಕಾರ್ಯ ಶ್ಲಾಘನೀಯ. ಅವರ ಅವಿಶ್ರಾಂತ ಕಾರ್ಯ ಸಾಧು-ಸಂತರ ಸಾಧನೆಗೆ ಸಮ ಎಂದು ಬೇರುಗಂಡಿ ಮಠದ ರೇಣುಕಾ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕಳಸದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಬೆಳವಣಿಗೆ ಮತ್ತು ಅಂಕುಡೊಂಕುಗಳನ್ನು ಕ್ರೋಢೀಕರಿಸಿ ಓದುಗರ ಮುಂದೆ ಇಡುವ ಜಾಣ್ಮೆಯ ಕೆಲಸ ಪತ್ರಕರ್ತರದ್ದು. ಇದರ ಜೊತೆಗೆ ಪತ್ರಿಕೆಗಳನ್ನು ಮಳೆ-ಗಾಳಿ-ಛಳಿ ಎನ್ನದೆ ಸಮಯಕ್ಕೆ ಸರಿಯಾಗಿ ಓದುಗರಿಗೆ ತಲುಪಿಸುವ ವಿತರಕರ ಕೆಲಸವೂ ಶ್ಲಾಘನೀಯ ಎಂದರು.
ಜಗತ್ತಿನಾದ್ಯಂತ ಕೋವಿಡ್ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರಗಳು ಲಾಕ್ಡೌನ್ನಂತಹ ನಿರ್ಧಾರ ಕೈಗೊಂಡಾಗಿನಿಂದಲೂ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಆಶಾ ಕಾರ್ಯಕರ್ತೆಯರು, ಪೊಲೀಸರು ಸೇರಿದಂತೆ ಪರ್ತಕರ್ತರು ಹಾಗೂ ಪತ್ರಿಕಾ ವಿತರಕರ ಕಾರ್ಯ ಎಲ್ಲರೂ ಮೆಚ್ಚುವಂತಹದ್ದು ಎಂದರು.
ಕಾರ್ಯನಿರತ ಪತ್ರಕತ್ರರ ಸಂಘದ ರಾಜ್ಯ ಕಾರ್ಯದರ್ಶಿ ಕೆಸವಳಲು ರಾಘವೇಂದ್ರ ಮಾತನಾಡಿ, ಒಂದು ಸುದ್ದಿಯನ್ನು ಓದುಗರಿಗೆ ತಲುಪಿಸುವ ಸಂದರ್ಭದಲ್ಲಿ ಹಲವಾರು ಜನರ ಪರಿಶ್ರಮವಿರುತ್ತದೆ. ಸಮಾಜದ ಹಿತಕ್ಕಾಗಿ ಅತ್ಯಂತ ಕಡಿಮೆ ವೇತನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ನೆರವಿಗೆ ಸರ್ಕಾರ ನಿಲ್ಲಬೇಕಿದೆ ಎಂದರು.
ಪ್ರತಿಷ್ಠಾನದ ಸಂಸ್ಥಾಪಕಾಧ್ಯಕ್ಷ ಮೋಹನ್ ರಾಜಣ್ಣ, ಓಸ್ವಾಲ್ಡ್ ಪಿರೇರಾ, ರವಿ ರೈ, ಬಕ್ಕಿ ಮಂಜುನಾಥ್ ಮಾತನಾಡಿದರು. ವಿತರಕರಾದ ಸುದೇಶ್ ಸುವರ್ಣ, ರಾಧಾಕೃಷ್ಣ, ವೆಂಕಟೇಶ್, ಟಿ.ಗಣೇಶ್, ಲಕ್ಷ್ಮಣ, ಎಸ್.ಗಣೇಶ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉಮಾಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಚಿನ್ ಕುಮಾರ್, ಲಕ್ಷ್ಮೀ ನಾಗರಾಜ್, ಕಾವ್ಯಾ, ಬಕ್ಕಿ ಮಂಜುನಾಥ್ ಗೀತಗಾಯನ ನಡೆಸಿದರು. ತನುಶ್ರೀ ನಾಗೇಂದ್ರ, ಶರಣ್ಯಾ ರಾಧಾಕೃಷ್ಣ ಭರತನಾಟ್ಯ ಪ್ರದರ್ಶನ ನೀಡಿದರು. ಗುರು ಪ್ರಸಾದ್, ಸುರಭಿ ಜೈನ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್ ಶಾ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?