ಕೋವಿಡ್ ನಿಯಂತ್ರಣಕ್ಕೆ ಸಹಕಾರ ಕೊಡಿ
Team Udayavani, Jul 1, 2020, 6:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಳ್ಳಕೆರೆ: ಕಳೆದ ಸುಮಾರು ನಾಲ್ಕು ತಿಂಗಳುಗಳಿಂದ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ತಾಲೂಕು ಆಡಳಿತ ಕೋವಿಡ್ ವೈರಾಣು ನಿಯಂತ್ರಣದಲ್ಲಿ ಹಲವಾರು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಈ ಭಾಗದಲ್ಲಿ ಹೆಚ್ಚು ವ್ಯಾಪಿಸದಂತೆ ನಿಗಾವಹಿಸಿದೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಸಾಕಷ್ಟು ಶ್ರಮವಹಿಸಿದರೂ ನಿರೀಕ್ಷಿತ ಫಲಿತಾಂಶ ಲಭ್ಯವಾಗಿಲ್ಲ. ಖಾಸಗಿ ಆಸ್ಪತ್ರೆ ವೈದ್ಯರು ತಾಲೂಕು ಆಡಳಿತದೊಂದಿಗೆ ಸಹಕರಿಸಲು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ಮನವಿ ಮಾಡಿದರು.
ಮಂಗಳವಾರ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಗರದ ಖಾಸಗಿ ನರ್ಸಿಂಗ್ ಹೋಂ ಮತ್ತು ಖಾಸಗಿ ವೈದ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ವೈರಾಣು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಾಗದು, ಬದಲಾಗಿ ಈ ಬಗ್ಗೆ ಹೆಚ್ಚು ತಿಳಿದುಕೊಂಡಿರುವ ವೈದ್ಯರ ಸಮೂಹ ಸಹಕಾರ ನೀಡಬೇಕಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಗರದ ಎಲ್ಲಾ ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.
ತಾಪಂ ಇಒ ಶ್ರೀಧರ್ ಐ. ಬಾರಕೇರ್ ಮಾತನಾಡಿ, ತಾಲೂಕು ಆಡಳಿತ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೈರಾಣು ತಡೆಗೆ ಕಾರ್ಯಕ್ರಮ ರೂಪಿಸಿ ಯಶಸ್ವಿಯಾಗಿದೆ. ಆದರೂ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೈರಾಣು ಬಾಧಿತರಿದ್ದಾರೆ. ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಮಾತನಾಡಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿನಿತ್ಯ ಪ್ರತ್ಯೇಕ ದಾಖಲಾತಿ ಪುಸ್ತಕದಲ್ಲಿ ರೋಗಿಗಳ ಸಂಪೂರ್ಣ ಮಾಹಿತಿಯನ್ನು ನಮೂದಿಸಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ನೀಡಬೇಕು. ವಿಶೇಷವಾಗಿ ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ತುರ್ತು ಗಮನಹರಿಸಬೇಕೆಂದರು. ಡಾ| ಕೆ.ಎಂ. ಜಯಕುಮಾರ್, ಡಾ| ಲೋಕೇಶ್, ಶ್ರೀನಿವಾಸ್, ಎಲ್.ಎಸ್. ವೀರೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
MUST WATCH
ಹೊಸ ಸೇರ್ಪಡೆ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!