ವೈರಸ್ ಸೋಂಕಿತರು ಚಿಕಿತ್ಸೆಯಿಲ್ಲದೆ ನರಳುತ್ತಿದ್ದಾರೆ, ಸಚಿವರಲ್ಲಿ ಸಮನ್ವಯವಿಲ್ಲ: HDK ಕಿಡಿ


Team Udayavani, Jul 2, 2020, 10:04 AM IST

hd-kumaraswmay

ಬೆಂಗಳೂರು: ಕೋವಿಡ್-19 ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ವೈರಸ್ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮೂಲಕ  ಸರ್ಕಾರದ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು. ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ.

ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೋವಿಡ್ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ನೆರೆಯ ಕೇರಳ ಸರ್ಕಾರ ವೈರಸ್ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಸೋಂಕು ಶರವೇಗದಲ್ಲಿ ಎಲ್ಲೆಡೆ  ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ  ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ.

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.