12 ದಿನಗಳಲ್ಲಿ 2 ಲಕ್ಷ ಪ್ರಕರಣ: ರಷ್ಯಾ ಹಿಂದಿಕ್ಕಿ ಮೂರನೇ ಸ್ಥಾನ ಪಡೆಯಲಿದೆಯೇ ಭಾರತ?


Team Udayavani, Jul 2, 2020, 12:01 PM IST

12 ದಿನಗಳಲ್ಲಿ 2 ಲಕ್ಷ ಪ್ರಕರಣ: ರಷ್ಯಾ ಹಿಂದಿಕ್ಕಿ ಮೂರನೇ ಸ್ಥಾನ ಪಡೆಯಲಿದೆಯೇ ಭಾರತ?

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ವ್ಯಾಪಿಸು­ವಿಕೆಯ ವೇಗ ದಿನ ಕಳೆದಂತೆ ಹೆಚ್ಚುತ್ತಿದ್ದು, ಕೇವಲ ಜೂನ್‌ ತಿಂಗಳೊಂದರಲ್ಲೇ 3.86 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೆ ಗುರಿಯಾಗಿದ್ದಾರೆ. ವಿಶ್ವದ ಕೋವಿಡ್ ಹಾಟ್‌ಸ್ಪಾಟ್‌ ದೇಶಗಳ ಪೈಕಿ ಅಮೆರಿಕ, ಬ್ರೆಜಿಲ್‌ ಮತ್ತು ರಷ್ಯಾದ ಅನಂತರದ ಸ್ಥಾನದಲ್ಲಿ ಭಾರತ­ವಿದ್ದು, ಸೋಂಕಿತರ ಸಂಖ್ಯೆ ಇದೇ ರೀತಿ ಹೆಚ್ಚುತ್ತಾ ಹೋದರೆ ಮುಂದಿನ ಒಂದೇ ವಾರದಲ್ಲಿ ನಾವು ರಷ್ಯಾ­ವನ್ನೂ ಹಿಂದಿಕ್ಕಿ 3ನೇ ಸ್ಥಾನಕ್ಕೇರುವ ಆತಂಕವಿದೆ.

ಮೇ 31ರಂದು ಭಾರತದಲ್ಲಿ 1.98 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿತ್ತು. ಅನಂತರದ ಒಂದು ತಿಂಗಳಲ್ಲಿ ಈ ಸಂಖ್ಯೆ 5.85 ಲಕ್ಷಕ್ಕೇರಿಕೆಯಾಯಿತು. ಕಳೆದ 12 ದಿನಗಳಲ್ಲೇ 2 ಲಕ್ಷ ಸೋಂಕಿತರನ್ನು ದೇಶ ಕಂಡಿದೆ. ಮೇ ಅಂತ್ಯದಲ್ಲಿ 97 ಸಾವಿರವಿದ್ದ ಸಕ್ರಿಯ ಪ್ರಕರಣ­ಗಳ ಸಂಖ್ಯೆ ಈಗ 2.2 ಲಕ್ಷಕ್ಕೇರಿದ್ದು, ಆಸ್ಪತ್ರೆಗಳು ಹಾಗೂ ಆರೋಗ್ಯ ಸೇವಾಕರ್ತರಿಗೆ ಅತಿ ದೊಡ್ಡ ಸವಾಲು ಎದುರಾಗಿದೆ.

ಸಾವಿನ ಸಂಖ್ಯೆಯೂ ಹೆಚ್ಚಳ: ಜೂನ್‌ ತಿಂಗಳೊಂ­ದರಲ್ಲಿ 11,800 ಮಂದಿ ಕೊರೊನಾಕ್ಕೆ ಬಲಿಯಾಗಿ­ದ್ದಾರೆ. ಕಳೆದ ಮೂರು ತಿಂಗಳಲ್ಲಿ ಸಂಭವಿಸಿದ ಸಾವುಗಳಿಗೆ ಹೋಲಿಸಿದರೆ ಇದು ಎರಡು ಪಟ್ಟು ಅಧಿಕ. ಸಮಾಧಾನಕರ ವಿಷಯವೆಂದರೆ, ಮೇ ಅಂತ್ಯದಲ್ಲಿ ಸೋಂಕು ದೃಢಪಟ್ಟವರ ಸಂಖ್ಯೆ ಶೇ.4.78ರ ದರದಲ್ಲಿ ಏರಿಕೆಯಾಗುತ್ತಿದ್ದರೆ, ಈಗ ಅದು ಶೇ.3.16ಕ್ಕಿಳಿದಿದೆ. ಮಹಾರಾಷ್ಟ್ರದಲ್ಲಿ ಪ್ರತಿ ದಿನವೂ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ದಿಲ್ಲಿ, ತಮಿಳುನಾಡು ಮಾತ್ರವಲ್ಲದೆ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ­ದಲ್ಲೂ ಹೆಚ್ಚು ಹೆಚ್ಚು ಮಂದಿಗೆ ಸೋಂಕು ದೃಢಪಡುತ್ತಿರುವುದು ಆತಂಕದ ಸಂಗತಿಯಾಗಿದೆ.

ಒಂದೇ ದಿನ ದೇಶದಲ್ಲಿ 507 ಸಾವು
ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 507 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 8ರಿಂದ ಬುಧವಾರ ಬೆಳಗ್ಗೆ 8ರವರೆಗೆ ಗರಿಷ್ಠ ಸಂಖ್ಯೆಯ ಸಾವಿನ ಪ್ರಕರಣ ಗಳು ವರದಿಯಾಗಿದ್ದು, 18,653 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸತತ 5ನೇ ದಿನವೂ ದೈನಂದಿನ ಪ್ರಕರಣಗಳ ಸಂಖ್ಯೆ 18 ಸಾವಿರದ ಗಡಿ ದಾಟಿದಂತಾಗಿದೆ. ಈವರೆಗಿನ ಸಾವಿನ ಪ್ರಮಾಣದಲ್ಲಿ ಶೇ.70ರಷ್ಟು ಪ್ರಕರಣಗಳು ಮಹಾರಾಷ್ಟ್ರ, ದಿಲ್ಲಿ ಮತ್ತು ತಮಿಳುನಾಡು ರಾಜ್ಯಗಳಿಗೆ ಸೀಮಿತವಾಗಿವೆ. ಇದೇ ವೇಳೆ, 3.47 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗುವ ಮೂಲಕ, ಗುಣಮುಖ ಪ್ರಮಾಣ ಶೇ.59.43ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.