ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ
Team Udayavani, Jul 2, 2020, 9:17 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಮರಣ ಮೃದಂಗ ಮತ್ತೆ ತಾಂಡವಾಡುತ್ತಿದ್ದು, ಅಥಣಿ ತಾಲೂಕಿನ 45 ವರ್ಷದ ವ್ಯಕ್ತಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾನೆ. ಕೇವಲ ಮೂರೇ ದಿನದಲ್ಲಿ ಮೂವರು ಕೋವಿಡ್ ಗೆ ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ನಾಲ್ಕು ಜನ ಮೃತಪಟ್ಟಂತಾಗಿದೆ.
ಅಥಣಿಯ 45 ವರ್ಷದ ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ತಂದ ಕೂಡಲೇ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದರೂ ಚಿಕಿತಯ್ಸೆ ಫಲಕಾರಿಯಾಗಲಿಲ್ಲ. ನಂತರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.
ಸೋಮವಾರ ಬೆಳಗಿನ ಜಾವ 32 ವರ್ಷದ ಅಥಣಿ ತಾಲೂಕಿನ ಸಂಕೋನಟ್ಟಿಯ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಬಲಿ ಆಗಿತ್ತು. ಬೆಂಗಳೂರಿನಿಂದ ೧೦ ದಿನಗಳ ಹಿಂದೆ ಆಗಮಿಸಿದ್ದ ಶಾಸ್ತ್ರಿ ನಗರದ 32 ವರ್ಷದ ವೃದ್ಧ ಮೃತಪಟ್ಟಿದ್ದನು. ಮೂರು ತಿಂಗಳ ಹಿಂದೆ ಹಿರೇಬಾಗೇವಾಡಿಯ ವೃದ್ಧೆ ಕೋವಿಡ್ ಗೆ ಬಲಿಯಾಗಿದ್ದಳು. ಜಿಲ್ಲೆಯಲ್ಲಿ ಒಟ್ಟು ನಾಲ್ವರು ಬಲಿಯಾದಂತಾಗಿದೆ.