ಬೆಳೆ ವಿಮೆ ನೋಂದಣಿ: ದ.ಕ.ಕ್ಕೆ ಕಡಿಮೆ, ಉಡುಪಿಗೆ ಹೆಚ್ಚು ಪರಿಹಾರ ಮಿತಿ!

 ನೋಂದಣಿ ಅವಧಿ ಜು. 10ರ ವರೆಗೆ ವಿಸ್ತರಣೆ

Team Udayavani, Jul 3, 2020, 5:59 AM IST

ಬೆಳೆ ವಿಮೆ ನೋಂದಣಿ: ದ.ಕ.ಕ್ಕೆ ಕಡಿಮೆ, ಉಡುಪಿಗೆ ಹೆಚ್ಚು ಪರಿಹಾರ ಮಿತಿ!

ಕುಂದಾಪುರ: ಕೇಂದ್ರ ಜಾರಿಗೆ ತಂದಿರುವ ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಿ ಪರಿಹಾರ ಪಡೆಯಲು ದ.ಕ. ಜಿಲ್ಲೆಗೆ ಒಂದು, ಉಡುಪಿಗೆ ಮತ್ತೂಂದು ಮಿತಿ! ಇದು ಪರಿಹಾರ ಮೊತ್ತದ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕ ಮೂಡಿದೆ.

ಉಡುಪಿಗೆ ಹೆಚ್ಚು
ದ.ಕ., ಮಂಡ್ಯ, ರಾಯಚೂರು, ಶಿವಮೊಗ್ಗ, ಬಾಗಲಕೋಟೆಯನ್ನು ನೀರಾವರಿ ಜಿಲ್ಲೆಗಳೆಂದು ಗುರುತಿಸಲಾಗಿದ್ದು ಶೇ. 25, ಇತರ ಜಿಲ್ಲೆಗಳಿಗೆ ಶೇ. 30 ಪರಿಹಾರ ಮಿತಿ ನಿಗದಿಪಡಿಸಲಾಗಿದೆ. ಈ ಐದು ಜಿಲ್ಲೆಗಳಿಗೆ ಮೂರು ವರ್ಷಗಳ ಅವಧಿಗೆ ವಿಮಾ ಕಂಪೆನಿಗೆ ಟೆಂಡರ್‌ ಕೂಡಾ ನೀಡಲಾಗಿದೆ.

ಬೆಳೆ ನಷ್ಟದ ಪ್ರಮಾಣವನ್ನು ಈ ಮಿತಿಯಲ್ಲಿ ಇರುವುದನ್ನು ಹೆಚ್ಚು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ರಿಸ್ಕ್ ಪ್ರಮಾಣ ಕಡಿಮೆ ಮಾಡಿದಷ್ಟು ರೈತರಿಗೆ ದೊರೆಯುವ ಪರಿಹಾರದ ಮೊತ್ತ ಕಡಿಮೆಯಾಗಲಿದೆ. ಹೆಕ್ಟೇರ್‌ಗೆ 6,400 ರೂ. ಪಾವತಿಸಿದರೆ ಶೇ. 30 ನಷ್ಟ ಪರಿಹಾರ ಎಂದರೆ 51,800 ರೂ. ದೊರೆಯುತ್ತದೆ. ನಷ್ಟದ ಮಿತಿ ಹೆಚ್ಚು ಮಾಡಿದರೆ ಪರಿಹಾರ ಮೊತ್ತ ಜಾಸ್ತಿ ದೊರೆಯಲಿದೆ. ಈ ಕುರಿತು ಸ್ಪಷ್ಟನೆ ಬಯಸಿದಾಗ, ರೈತರಿಗೆ ತೊಂದರೆಯಾಗುವುದಿಲ್ಲ. ಇದು ರಿಸ್ಕ್ ಪರ್ಸೆಂಟೇಜ್‌ನ ಕನಿಷ್ಠ ಪ್ರಮಾಣವಾಗಿದ್ದು ಹವಾ ಮಾನ ವೈಪರೀತ್ಯವಾದರೆ ಈ ಮೊತ್ತ ಹೆಚ್ಚಾಗಲೂ ಬಹುದು ಎಂದು ತೋಟಗಾರಿಕಾ ಸಹಾಯಕ ನಿರ್ದೇಶಕ ನಿಧೀಶ್‌ ಹೊಳ್ಳ ವಿವರಿಸಿದ್ದಾರೆ.

ಕೊನೆ ದಿನ
ತೋಟಗಾರಿಕಾ ಬೆಳೆಗಳಾದ ಅಡಿಕೆ, ಕರಿಮೆಣಸು, ವೀಳ್ಯದೆಲೆ, ದ್ರಾಕ್ಷಿ, ದಾಳಿಂಬೆ, ಲಿಂಬೆ, ಪರಂಗಿ, ಶುಂಠಿ, ಹೂಕೋಸು ಬೆಳೆಗಳನ್ನು ಜು. 10ರ ಒಳಗೆ ನೋಂದಾಯಿಸಬೇಕು. ಮಾವು ಬೆಳೆಯನ್ನು ಜು. 31ರ ಒಳಗೆ, ಹಿಂಗಾರು ಹಂಗಾಮಿನ ಬೆಳೆಗಳಾದ ದ್ರಾಕ್ಷಿ, ಮಾವು, ದಾಳಿಂಬೆ, ಮೆಣಸಿನಕಾಯಿ ಬೆಳೆಗಳನ್ನು ನ. 15ರ ಒಳಗೆ ನೋಂದಾಯಿಸಬೇಕು.

ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ವಿಮೆ ಮಾಡಿಸಬಹುದು. ಬೆಳೆ ವಿಮೆ ನೋಂದಣಿಗೆ ಜೂ.30 ಕೊನೆ ದಿನವಾಗಿತ್ತು. ಜೂ. 25ರಂದು ಆದೇಶವಾಗಿ ಜೂ.26ರಂದು ಕಚೇರಿಗಳಿಗೆ ಬಂದಿದ್ದು ಜೂ. 27, 28 ಸರಕಾರಿ ರಜೆ ದಿನ. ಕೇವಲ ಎರಡು ದಿನಗಳ ಗಡುವು ನೀಡಿ ಸರಕಾರ ಆದೇಶ ನೀಡಿದ್ದು ರೈತರಲ್ಲಿ ಗೊಂದಲ ಮೂಡಿಸಿತ್ತು. ದ.ಕ., ಉಡುಪಿಯ ಪ್ರಧಾನ ಬೆಳೆ ಅಡಿಕೆ ಬೆಳೆಗಾರರಿಗೆ ಇದರಿಂದ ತೊಂದರೆಯಾಗಿತ್ತು. ಎಲ್ಲ ಜಿಲ್ಲೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸರಕಾರ ನೋಂದಣಿ ಅವಧಿಯನ್ನು 10 ದಿನ ವಿಸ್ತರಿಸಿದೆ.

ಕಡ್ಡಾಯ ಅಲ್ಲ
ಬೆಳೆ ಸಾಲ ಪಡೆದ ರೈತರಿಗೆ ಸಹಕಾರಿ ಸಂಸ್ಥೆಗಳು, ಬ್ಯಾಂಕುಗಳು ಕಡ್ಡಾಯ ಬೆಳೆವಿಮೆ ಮಾಡಿಸುತ್ತಿವೆೆ. ಆದರೆ ಸರಕಾರದ ಸುತ್ತೋಲೆಯಂತೆ ಬೆಳೆವಿಮೆ ಕಡ್ಡಾಯವಲ್ಲ. ಬೆಳೆ ಸಾಲ ಪಡೆದ ರೈತ ಬೆಳೆವಿಮೆ ನೋಂದಣಿಗಿಂತ 7 ದಿನಗಳ ಮುಂಚೆ ತನಗೆ ಬೆಳೆವಿಮೆ ಅಗತ್ಯವಿಲ್ಲ ಎಂದು ಅಫಿದವಿತ್‌ ನೀಡಿದರೆ ಅವರನ್ನು ವಿಮೆ ವ್ಯಾಪ್ತಿಯಿಂದ ಹೊರಗಿಡಲಾಗುವುದು. ಆದರೆ ಅಂತಹ ರೈತರಿಗೆ ಬೆಳೆ ನಷ್ಟವಾದಾಗ ಯಾವುದೇ ವಿಮಾ ಪರಿಹಾರ ದೊರೆಯುವುದಿಲ್ಲ.

ಬೆಳೆ ವಿಮೆಯಿಂದ ರೈತರು ದೂರ ಸರಿಯಲು ಕಾರಣ ವಿಮೆಯನ್ನು ಘಟಕವಾಗಿ ಪರಿಗಣಿಸಿರುವುದು. ಇಡೀ ಗ್ರಾಮದ ಬೆಳೆ ನಾಶವಾಗದ ಹೊರತು ಇದರಲ್ಲಿ ಒಬ್ಬರು, ಇಬ್ಬರು ರೈತರ ಬೆಳೆ ನಷ್ಟವಾದರೆ ವಿಮಾ ಪರಿಹಾರ ಪಡೆಯಲು ಅವಕಾಶ ಇಲ್ಲ. ಬೆಳೆ ನಾಶವಾಗಿ 72 ಗಂಟೆಗಳ ಒಳಗೆ ರೈತರು ವಿಮಾ ಸಂಸ್ಥೆಗೆ ಮಾಹಿತಿ ನೀಡಿ ಅವರು ಸರ್ವೆ ಮಾಡಿ ಪರಿಹಾರ ಮೊತ್ತವನ್ನು ನೇರ ರೈತರ ಖಾತೆಗೆ ಜಮೆ ಮಾಡುವುದು ಈ ವಿಮೆಯ ಆಶಯ. ಇದಕ್ಕಾಗಿ ಅವರು ಪಂಚಾಯತ್‌ನಲ್ಲಿ ದಾಖಲಾಗುವ ಮಳೆಮಾಪನದ ಅಂಕಿ ಅಂಶವನ್ನು ಅವಲಂಬಿಸುತ್ತಾರೆ.

ಇನ್ನೂ ನೋಂದಣಿಗೆ
ಅವಕಾಶ ಇದೆ
ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿ ದಿನಾಂಕ ವಿಸ್ತರಣೆಗೆ ಬೇಡಿಕೆ ಸಲ್ಲಿಸಲಾಗಿತ್ತು. ಅದರಂತೆ ಜು.10ರ ವರೆಗೆ ನೋಂದಣಿ ಮಾಡಲು ಸರಕಾರದಿಂದ ಆದೇಶ ಬಂದಿದೆ.
-ಭುವನೇಶ್ವರಿ, ಜಿಲ್ಲಾ ಉಪ ನಿರ್ದೇಶಕಿ,
ತೋಟಗಾರಿಕೆ ಇಲಾಖೆ, ಉಡುಪಿ

ವಿಮೆ ಪರಿಹಾರ ಹೆಚ್ಚಿಸಲಿ
ವಿಮೆ ಮೊತ್ತದಲ್ಲಿ ಮಳೆಯಾಗುವ ಜಿಲ್ಲೆಗಳ ನಡುವೆ ತಾರತಮ್ಯ ಸಲ್ಲದು. ಸಾಮೂಹಿಕ ಬೆಳೆ ನಾಶವಾದರೆ ಮಾತ್ರ ಪರಿಹಾರ ದೊರೆಯುವ ಕಾರಣ ಪರಿಹಾರದ ಮೊತ್ತ ಮಿತಿ ಹೆಚ್ಚಿಸಿದಷ್ಟೂ ರೈತರಿಗೆ ಅನುಕೂಲ.
– ವಿಕಾಸ್‌ ಹೆಗ್ಡೆ ಕೆ.,
ಭಾರತೀಯ ಕಿಸಾನ್‌ ಸಂಘದ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.