ಮಹಿಳೆಗೆ ಮನೆ ನಿರ್ಮಿಸಿಕೊಟ್ಟ ಎಸ್ಕೆಎಸ್ಸೆಸ್ಸೆಫ್
Team Udayavani, Jul 3, 2020, 5:16 AM IST
ಬಡಗನ್ನೂರು: ಎಸ್ಕೆಎಸ್ಸೆಸ್ಸೆಫ್ ಈಶ್ವರಮಂಗಲದ ವಿಖಾಯ ಕಾರ್ಯಕರ್ತರು ಪಡುವನ್ನೂರು ಗ್ರಾಮದ ಮೈದನಡ್ಕದಲ್ಲಿ ನಿರ್ಗತಿಕ ವಿಧವೆಯೋರ್ವರ ಪಾಳುಬಿದ್ದ ಮನೆಯನ್ನು ದುರಸ್ತಿಪಡಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಬಿದ್ದಿದ್ದರಿಂದ ವಾಸಿಸಲು ಸಾಧ್ಯವಾಗುತ್ತಿರಲಿಲ್ಲ. ಮಹಿಳೆಯು ಸಣ್ಣಪ್ರಾಯದ ಮಗನೊಂದಿಗೆ ಸಂಬಂಧಿಕರ ಮನೆಯಲ್ಲಿ ವಾಸವಿದ್ದರು. ವಿಷಯ ತಿಳಿದ ಎಸ್ಕೆಎಸ್ಸೆಸ್ಸೆಫ್ ವಿಖಾಯ ಕಾರ್ಯಕರ್ತರು ಈಗ ಸುಂದರವಾದ ಮನೆಯೊಂದನ್ನು ನಿರ್ಮಿಸಿಕೊಟ್ಟಿದ್ದಾರೆ.
ಸ್ವಯಂಸೇವಕರಿಂದ ನಿರಂತರ ಸೇವೆ
ಸುಮಾರು ಮೂರು ವಾರಗಳ ಕಾಲ ಮೈದನಡ್ಕ, ಪಾಳ್ಯತ್ತಡ್ಕ, ಮೇನಾಲ, ಮುಂಡೋಳೆ ಶಾಖೆಯ ಸುಮಾರು 75ರಷ್ಟು ಕಾರ್ಯಕರ್ತರು ಶ್ರಮದಾನ ಮಾಡಿದ್ದಾರೆ. ದಾನಿಗಳ ಸಹಕಾರದಿಂದ ಸುಮಾರು 2 ಲ. ರೂ. ವೆಚ್ಚದಲ್ಲಿ ಮನೆ ನಿರ್ಮಾಣವಾಗಿದೆ.
ನಮ್ಮ ಕ್ಲಸ್ಟರ್ ವ್ಯಾಪ್ತಿಯಲ್ಲಿ ಇಂಥ ಹಲವು ದುಃಸ್ಥಿತಿಯ ಮನೆಗಳಿರುವುದು ಗಮನಕ್ಕೆ ಬಂದಿದೆ. ಹಲವರು ನಮ್ಮಲ್ಲಿ ಸಹಾಯ ಕೋರಿದ್ದಾರೆ. ದಾನಿಗಳು ಇಚ್ಛಾಶಕ್ತಿ ತೋರಿಸಿದರೆ ಇಂತಹ ಸೇವಾ ಕಾರ್ಯಗಳನ್ನು ಮುಂದುವರಿಸಬಹುದಾಗಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಈಶ್ವರಮಂಗಲ ಕ್ಲಸ್ಟರ್ನ ಅಧ್ಯಕ್ಷ ಖಲೀಲುರಹ್ಮಾನ್ ಅರ್ಷದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು