ವ್ಯವಸಾಯದ ಬಗ್ಗೆ ನಿಖಿಲ್‌ಕುಮಾರ್ ಹೇಳಿದ್ದೇನು ಗೊತ್ತಾ?


Team Udayavani, Jul 3, 2020, 9:24 AM IST

fb nikhil

ಇತ್ತೀಚೆಗಷ್ಟೇ ಮದುವೆಯಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ಕುಮಾರ್‌ ಕೃಷಿ ಭೂಮಿಯಲ್ಲಿ ವ್ಯವಸಾಯವನ್ನು ಮಾಡಲು ಆರಂಭಿಸಿದ್ದು, ನೀವು ಕೃಷಿ ಮಾಡಿ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಹೌದು! ಇದೀಗ ನಿಖಿಲ್‌ ಸಿನಿಮಾರಂಗದಿಂದ ಕೃಷಿ ಕಡೆ ಒಲವು ತೋರಿದ್ದು, ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.

“ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸವೊಂದನ್ನು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ ಇನ್ನು ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ.

ಡಾಕ್ಟರ್ ತನ್ನ‌ ಮಗ ಡಾಕ್ಟರ್ ‌ಆಗಲಿ, ಪೊಲೀಸ್ ತನ್ನ ಮಗನೂ ತನ್ನಂತೆಯೇ ಪೊಲೀಸ್ ಆಗಲಿ ಸರ್ಕಾರಿ‌ ನೌಕರ ತನ್ನ ಮಗನೂ ಸರ್ಕಾರಿ ನೌಕರನಾಗಲಿ ಎಂದು ಆಸೆ ಪಡುತ್ತಾನೆ. ಆದರೆ ನಮ್ಮ ದೇಶದ ರೈತ ತನ್ನ ಮಗನೂ ರೈತನಾಗಲಿ ಎಂದು ಎಂದೂ ಬಯಸದ ಪರಿಸ್ಥಿತಿ ಇದೆ. ತಾನು ಪಟ್ಟ ಕಷ್ಟ ತನಗೇ ಕೊನೆಯಾಗಲಿ ನನ್ನ ಮಕ್ಕಳಿಗೆ ಈ ಕಷ್ಟ ಬೇಡ ಎಂದು ಸಾಲ ಮಾಡಿಯಾದರೂ ಮಕ್ಕಳನ್ನು ಓದಿಸಿ ಉದ್ಯೋಗಕ್ಕಾಗಿ ನಗರಗಳಿಗೆ ಕಳುಹಿಸುತ್ತಾರೆ. ರೈತರಿಗೆ ತಾವು ಏನೇ ಬೆಳೆದರೂ ಅದಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರವೂ ಆತನಿಗಿಲ್ಲ. ಜೀವಮಾನವಿಡೀ ದುಡಿದು ಬದುಕುವ ರೈತನಿಗೆ ಈ ದೇಶದ ಮೊದಲ ಗೌರವ ಸಿಗಬೇಕಿದ್ದು ಸರ್ಕಾರಿ ಅಧಿಕಾರಿಗಳು ಹಾಗೂ ಬ್ಯಾಂಕ್ ನೌಕರರು ರೈತರು ತಮ್ಮ ಕಚೇರಿಗೆ ಬಂದಾಗ ಗೌರವದಿಂದ ನಡೆಸಿಕೊಳ್ಳಬೇಕು. ಜಮೀನಿನಲ್ಲಿ ಮುಳ್ಳು ಚುಚ್ಚಿ ಮಣ್ಣಿಗೆ ರಕ್ತದ ಅಭಿಷೇಕವಾದರೂ ಮರುದಿನ ಅದೇ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಘನತೆಯ ಬದುಕನ್ನು ಕಟ್ಟಿ ಕೊಡಬೇಕಿದೆ. ರೈತರ ಮಕ್ಕಳು ಕೃಷಿಭೂಮಿಯಲ್ಲಿ ಕೆಲಸ ಮಾಡುವುದು ಒಂದು ಗೌರವ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.ರೈತನಾಗಿ ಬದುಕುವುದು ದೌರ್ಭಾಗ್ಯವಲ್ಲ ಬದಲಾಗಿ ಅದೊಂದು ಸೌಭಾಗ್ಯ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.

ನಗರದಿಂದ ಮತ್ತೆ ಊರುಗಳಿಗೆ ಹಿಂದಿರುಗಿ ತಮ್ಮ ತಮ್ಮ ಕೃಷಿಭೂಮಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ನಿಮಗೆಲ್ಲರಿಗೂ ಯಶಸ್ಸು ಸಿಗಲಿ. ರೈತನ ಮಗನೆಂದು ಹೆಮ್ಮೆಯಿಂದ ಹೇಳಿ. ವಿದ್ಯಾಭ್ಯಾಸವಿರುವ ಯುವಕರು ವ್ಯವಸಾಯಕ್ಕಾಗಿ ಜಮೀನಿಗಿಳಿದರೆ ಮಧ್ಯವರ್ತಿಗಳ ಮೋಸವೂ ಕಡಿಮೆಯಾಗಲಿದೆ. ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಬಳಸಿಕೊಳ್ಳುವ ಅವಕಾಶವಿದೆ.‌ ಕೃಷಿಯಲ್ಲೆ ಉನ್ನತ ಪದವಿ ಪಡೆದ ರೈತರ ಮಕ್ಕಳೇ ದೇಶದ ಕೃಷಿನೀತಿಯನ್ನು ನಿರ್ಧರಿಸುವಂತಾಗಲಿ. ಇದರ ಜೊತೆಗೆ ಸರ್ಕಾರಗಳು ಸಹಾ ಕೃಷಿ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೇಶದಲ್ಲಿ ರೈತನೆಂದರೆ ಎದ್ದು ಕೈಮುಗಿಯುವ ದಿನಗಳು ದೂರವಿಲ್ಲ.

ನಾನು ಸಹಾ ರೈತನ ಮಗನಾಗಿದ್ದು ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ‌ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ’. ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅಲ್ಲದೇ ತಮ್ಮ ಜಮೀನಿನಲ್ಲಿ ಓಡಾಡುತ್ತಿರುವ ಫೋಟೊಗಳನ್ನೂ ಶೇರ್‌ ಮಾಡಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.