ಫಸಲ್ ಬಿಮಾದಡಿ ಹೆಸರು ನೋಂದಣಿಗೆ ಕ್ರಮ ಕೈಗೊಳ್ಳಿ
ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆ
Team Udayavani, Jul 3, 2020, 1:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈಗಾಗಲೇ ಸಾಲ ಪಡೆಯದ ರೈತರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಇದುವರೆಗೆ ಯೋಜನೆಯಡಿ ಜಿಲ್ಲೆಯಲ್ಲಿ ಕೇವಲ 504 ರೈತರು ಮಾತ್ರ ಹೆಸರು ನೋಂದಾಯಿಸಿದ್ದಾರೆ. ಇವರ ಪೈಕಿ 266 ಮಂದಿ ಸಾಲ ಪಡೆದಿದ್ದು, 238 ಸಾಲ ಪಡೆಯದ ರೈತರು ಇದ್ದು, 952ಎಕ್ರೆ ವಿಸ್ತೀರ್ಣವಿದೆ. ಇದುವರೆಗೆ ಸಾಲ ಪಡೆದ ರೈತರು ಕಡ್ಡಾಯವಾಗಿ ಯೋಜನೆ ವ್ಯಾಪ್ತಿಗೆ ಒಳಪಡುತ್ತಿದ್ದರು. ಆದರೆ ಈ ಬಾರಿ ಬೆಳೆ ವಿಮೆಯಿಂದ ತಮ್ಮನ್ನು ಕೈಬಿಡುವಂತೆ ಸಾಲ ಪಡೆದ ರೈತರು ಘೋಷಣಾ ಪತ್ರ ನೀಡಿದರೆ ಅವರನ್ನು ಕೈಬಿಡಲಾಗುವುದು. ಈ ಹಿನ್ನೆಲೆಯಲ್ಲಿ ಸಾಲ ಪಡೆಯದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯಡಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರೈತರ ಸಹಾಯಕ್ಕಾಗಿ ಬೆಳೆ ವಿಮೆ ಸಂಸ್ಥೆಯು ಪ್ರತಿ ತಾಲೂಕಿನಲ್ಲಿ ತನ್ನ ಪ್ರತಿನಿಧಿಗಳನ್ನು ನಿಯೋಜಿಸಬೇಕು. ಬೆಳೆ ವಿಮೆ ನೋಂದಣಿ ಮತ್ತು ಪರಿಹಾರ ಇತ್ಯರ್ಥ ಕುರಿತಾಗಿ ಬ್ಯಾಂಕುಗಳು ಮತ್ತು ವಿಮಾ ಸಂಸ್ಥೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಬ್ಯಾಂಕ್ಗಳಿಗೆ ಸೂಚನೆ: ಕೋವಿಡ್ ವೇಳೆ ಸರ್ಕಾರ ವಿವಿಧ ಫಲಾನುಭವಿಗಳಿಗೆ ನೀಡುವ ಸಹಾಯಧನದ ಮೊತ್ತವನ್ನು ಬ್ಯಾಂಕುಗಳು ಯಾವುದೇ ಕಾರಣಕ್ಕೂ ಅವರ ಸಾಲದ ಮೊತ್ತಕ್ಕೆ ವರ್ಗಾಯಿಸಬಾರದು. ಈ ಕುರಿತು ಯಾವುದೇ ದೂರುಗಳು ಬರಬಾರದು ಎಂದು ಡಿಸಿ ಬ್ಯಾಂಕರ್ಗಳಿಗೆ ಎಚ್ಚರಿಕೆ ನೀಡಿದರು.
ಅಂತಿಮ ದಿನಾಂಕ: ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳದ ಬೆಳೆಗಳಿಗೆ ಹೆಸರು ನೋಂದಾಯಿಸಲು ಆಗಸ್ಟ್ 14 ಮತ್ತು ಮುಸುಕಿನ ಜೋಳಕ್ಕೆ ವಿಮೆ ಮಾಡಿಸಲು ಜುಲೈ 31 ಅಂತಿಮ ದಿನವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ