ಮರವೂರು: ಯೋಜನೆ ಶೀಘ್ರ ಸಾಕಾರ ನಿರೀಕ್ಷೆ

ಕೋಸ್ಟ್‌ಗಾರ್ಡ್‌ ರಾಷ್ಟ್ರೀಯ ತರಬೇತಿ ಅಕಾಡೆಮಿ

Team Udayavani, Jul 4, 2020, 6:50 AM IST

ಮರವೂರು: ಯೋಜನೆ ಶೀಘ್ರ ಸಾಕಾರ ನಿರೀಕ್ಷೆ

ಸಾಂದರ್ಭಿಕ ಚಿತ್ರ

ಮಹಾನಗರ: ಕರ್ನಾಟಕದ ಕರಾವಳಿ ತೀರಕ್ಕೆ ಗರಿಷ್ಠ ಭದ್ರತೆ ಒದಗಿ ಸಲು ಭಾರತೀಯ ಕೋಸ್ಟ್‌ಗಾರ್ಡ್‌ (ಭಾರತೀಯ ಕರಾವಳಿ ತಟ ರಕ್ಷಣ ಪಡೆ) ಹಲವು ಆಯಾಮಗಳಲ್ಲಿ ಕಾರ್ಯಾ ಚರಿಸುತ್ತಿದ್ದು, ಇದೀಗ ರಾಷ್ಟ್ರೀಯ ತರಬೇತಿ ಅಕಾಡೆಮಿಯನ್ನು ಮಂಗಳೂರು ಹೊರವಲಯದ ಮರವೂರು ಬಳಿ ಸ್ಥಾಪಿ ಸುವ ಮಹತ್ವದ ಯೋಜನೆಗೆ ಮುಂದಾಗಿದ್ದು, ಶೀಘ್ರ ಸಾಕಾರದ ನಿರೀಕ್ಷೆ ಯಿದೆ.

ಈ ಹಿಂದೆ ಮರವೂರಿನಲ್ಲಿ ಅಕಾಡೆಮಿ ಸ್ಥಾಪನೆ ಬಗ್ಗೆ ಸುದ್ದಿ ಕೇಳಿಬಂದ ಕೆಲವೇ ತಿಂಗಳಲ್ಲಿ ಈ ಅಕಾಡೆಮಿ ದಿಢೀರಾಗಿ ಕೇರಳದಲ್ಲಿ ಸ್ಥಾಪನೆಯಾಗಲಿದೆ ಎಂಬ ಬಗ್ಗೆಯೂ ಮಾತು ಕೇಳಿಬಂದಿತ್ತು. ಆದರೆ ಅಲ್ಲಿ ಯೋಜನೆಗೆ ಗುರುತಿಸಿದ್ದ ಜಮೀನಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಲು ನಿರಾಕರಿಸಿದ ಹಿನ್ನೆಲೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೂಲಕ ಅಕಾಡೆಮಿ ಮತ್ತೆ ಮರವೂರಿಗೆ ಬಂದಿದ್ದು, ಶೀಘ್ರದಲ್ಲಿಯೇ ಈ ಯೋಜನೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. 1,010 ಕೋ. ರೂ. ವೆಚ್ಚದಲ್ಲಿ ಈ ಯೋಜನೆ ಸ್ಥಾಪನೆಯಾಗುವ ನಿರೀಕ್ಷೆಯಿದೆ.

160 ಎಕ್ರೆ ಭೂಮಿ
ಮರವೂರು ಸಮೀಪ ಗುರುಪುರ ನದಿ ತೀರದಲ್ಲಿ ಈ ಹಿಂದೆ ಜೆಸ್ಕೊ ಕಂಪೆನಿಗೆ ಒದಗಿಸಿದ್ದ 160 ಎಕ್ರೆ ಜಾಗವನ್ನು ಕೋಸ್ಟ್‌ಗಾರ್ಡ್‌ಗೆ ಒದಗಿಸಲು ಎರಡು ವರ್ಷಗಳ ಹಿಂದೆಯೇ ರಾಜ್ಯ ಸರಕಾರ ನಿರ್ಧರಿಸಿ ಈ ಬಗ್ಗೆ ಸಚಿವ ಸಂಪುಟದ ಅನುಮೋದನೆಯನ್ನೂ ನೀಡಿತ್ತು. ತನ್ನ ಯೋಜನೆಗಾಗಿ ಪಡೆದಿದ್ದ 160 ಎಕ್ರೆ ಜಾಗದಲ್ಲಿ ಜೆಸ್ಕೊ ನಿಗದಿತ ಅವಧಿಯಲ್ಲಿ ಯೋಜನೆ ಆರಂಭಿಸದ ಕಾರಣ ಆ ಜಾಗವನ್ನು ರಾಜ್ಯ ಸರಕಾರ ವಾಪಸ್‌ ಪಡೆದಿತ್ತು. ಇದೀಗ ಜಾಗವು ಕೆಐಎಡಿಬಿ ಅಧೀನದಲ್ಲಿದ್ದು, ಅದನ್ನು ಕೋಸ್ಟ್‌ ಗಾರ್ಡ್‌ಗೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

2009ರ ತೀರ್ಮಾನ ಅನುಷ್ಠಾನದತ್ತ
ಪ್ರಸ್ತುತ ಕೋಸ್ಟ್‌ಗಾರ್ಡ್‌ ಸಿಬಂದಿಗೆ ಭಾರತೀಯ ನೌಕಾ ಅಕಾಡೆಮಿಯಲ್ಲಿ ತರಬೇತಿ ನೀಡಲಾಗುತ್ತಿದೆ. 2008ರ ಮುಂಬಯಿ ದಾಳಿ ಬಳಿಕ ಕೇಂದ್ರ ಸರಕಾರವು ಕೋಸ್ಟ್‌ಗಾರ್ಡ್‌ ಪಡೆ, ಆಸ್ತಿ, ಮೂಲ ಸೌಕರ್ಯಗಳನ್ನು ಮೂರು ಪಟ್ಟು ಹೆಚ್ಚಿಸಲು ಉದ್ದೇಶಿಸಿತ್ತು. ಆದರೆ ಕೋಸ್ಟ್‌ಗಾರ್ಡ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬಂದಿ ನೇಮಕ ಮಾಡಬೇಕಾದರೆ ನೌಕಾ ಅಕಾಡೆಮಿಯ ಮೂಲ ಸೌಲಭ್ಯಗಳನ್ನು ಹೆಚ್ಚಿಸುವ ಅನಿವಾರ್ಯ ಎದುರಾಗಿತ್ತು. ಹಾಗಾಗಿ ಕೇಂದ್ರ ಸಚಿವ ಸಂಪುಟವು 2009ರಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪಿಸಲು ತೀರ್ಮಾನಿಸಿ ಅನುಮೋದನೆ ನೀಡಿತ್ತು. ಅದಾದ ಬಳಿಕ 11 ವರ್ಷಗಳ ಬಳಿಕ ಇದೀಗ ಈ ಯೋಜನೆ ಮಂಗಳೂರಿ ನಲ್ಲಿ ಸಾಕಾರಗೊಳ್ಳಲು ಸಜ್ಜಾಗಿದೆ.

ಕೋಸ್ಟ್‌ಗಾರ್ಡ್‌ ಕಾರ್ಯಗಳೇನು?
ಕೋಸ್ಟ್‌ಗಾರ್ಡ್‌ ವರ್ಷದ 365 ದಿನಗಳೂ ಸಮುದ್ರದಲ್ಲಿ ದೇಶದ ಗಡಿ ಕಾಯುವ ಕಾರ್ಯದಲ್ಲಿ ನಿರತವಾಗಿರುವ ವಿವಿಧೋದ್ದೇಶ ಸಂಸ್ಥೆಯಾಗಿದೆ. ಇತರ ಭದ್ರತಾ ಸಂಸ್ಥೆಗಳಿಗೆ ಹೋಲಿಸಿದಾಗ ಕೋಸ್ಟ್‌ಗಾರ್ಡ್‌ ಚಿಕ್ಕದಾಗಿದ್ದರೂ ಸಮುದ್ರದಲ್ಲಿ, ಭೂಮಿ ಮೇಲೆ ಮತ್ತು ಆಕಾಶದಲ್ಲಿ ಕಾರ್ಯಾಚರಣೆ ಮಾಡುವ ಸಾಮರ್ಥ್ಯ ಹೊಂದಿದೆ. ಸಮುದ್ರದಲ್ಲಿ ಮಾನವ ಜೀವ ರಕ್ಷಣೆ ಸಹಿತ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ನೆರವಿನ ಹಸ್ತ, ಕಳ್ಳ ಸಾಗಾಟಗಾರರ ವಿರುದ್ಧ ಕಾರ್ಯಾಚರಣೆ, ಸಾಗರ ಜೀವ ವೈವಿಧ್ಯ ರಕ್ಷಣೆ ಮಾಡುತ್ತಿರುತ್ತದೆ.

 ಮರವೂರಿನಲ್ಲೇ
ಅಕಾಡೆಮಿ
ಭಾರತೀಯ ಕೋಸ್ಟ್‌ ಗಾರ್ಡ್‌ನ ರಾಷ್ಟ್ರೀಯ ತರಬೇತಿ ಅಕಾಡೆಮಿಯನ್ನು ಮರವೂರಿನಲ್ಲಿಯೇ ಸ್ಥಾಪಿಸಲು ಉದ್ದೇಶಿಸಲಾಗಿದೆ. ಕೇರಳದಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಈ ಅಕಾಡೆಮಿಯನ್ನು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಮೂಲಕ ಮಂಗಳೂರಿಗೆ ತರಲಾಗಿದೆ. ಅಕಾಡೆಮಿ ನಿರ್ಮಾಣವಾಗುವ ಮೂಲಕ ಸಾವಿರಾರು ಯುವಕರಿಗೆ ದಾರಿದೀಪವಾಗಲಿದೆ.
 - ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ಟಾಪ್ ನ್ಯೂಸ್

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.