ಡಿ.ಕೆ.ಶಿವಕುಮಾರ್ ಜತೆ ಭಿನ್ನಾಭಿಪ್ರಾಯವಿಲ್ಲ
Team Udayavani, Jul 4, 2020, 7:10 AM IST
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಮನೆಯಲ್ಲಿ ಭೇಟಿ ಮಾಡಿರುವುದಕ್ಕೆ ಯಾವುದೇ ವಿಶೇಷ ಇಲ್ಲ. ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ಸದಾಶಿವ ನಗರದ ಪಕ್ಷದ ಅಧ್ಯಕ್ಷರ ಮನೆಗೆ ತೆರಳಿ ಮಾತುಕತೆ ನಡೆಸಿದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಯ ಭೇಟಿಯಲ್ಲ. ಅವರು ನಮ್ಮ ಅಧ್ಯಕ್ಷರು, ನಾವು ಸೆಕೆಂಡ್ ಲೆμrನೆಂಟ್ಗಳು. ಪಕ್ಷ ಸಂಘಟನೆ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.
ಇದುವರೆಗೂ ಅವರ ಮನೆಗೆ ಭೇಟಿ ನೀಡದಿರಬಹುದು. ಆದರೆ, ಕಾಂಗ್ರೆಸ್ ಕಚೇರಿಯಲ್ಲಿ ಭೇಟಿಯಾಗಿ ಸಾಕಷ್ಟು ಬಾರಿ ಸಭೆಗಳನ್ನೂ ನಡೆಸಿದ್ದೇವೆ ಎಂದು ಹೇಳಿದರು. ಈಗಾಗಲೇ ಆರು ಜಿಲ್ಲೆಗಳ ಪ್ರವಾಸ ಮುಗಿಸಿದ್ದೇನೆ. ಬೇರೆ ಭಾಗಗಳಿಗೂ ಹೋಗುತ್ತೇನೆ. ಬೇರೆ ಪಕ್ಷದ ನಾಯಕರನ್ನ ವಾಪಸ್ ಕರೆತರುವ ವಿಚಾರದಲ್ಲಿ ಸಮಿತಿ ರಚನೆಯಾಗಿದೆ. ಸಮಿತಿ ವರದಿ ನೀಡಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್