ದ.ಕ.: ಹೆಚ್ಚುತ್ತಿದೆ ಐಎಲ್‌ಐ, “ಸಾರಿ’ ಪ್ರಕರಣ!


Team Udayavani, Jul 4, 2020, 7:56 AM IST

ದ.ಕ.: ಹೆಚ್ಚುತ್ತಿದೆ ಐಎಲ್‌ಐ, “ಸಾರಿ’ ಪ್ರಕರಣ!

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಜಿಲ್ಲೆಯ ಜನತೆಯಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಅದರಲ್ಲೂ “ಇನ್‌ಫ್ಲೂಯೆನ್ಜ್ ಲೈಕ್‌ ಇಲ್‌ನೆಸ್‌ (ಐಎಲ್‌ಐ)’ ಮತ್ತು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಸ್ಥಳೀಯವಾಗಿ ಕೋವಿಡ್ ಸೋಂಕು ಹಬ್ಬುತ್ತಿರುವುದು ಹೆಚ್ಚುತ್ತಿದೆ.

ಜಿಲ್ಲೆಯಲ್ಲಿ ಕಳೆದ 13 ದಿನಗಳ ಅವಧಿಯಲ್ಲಿ 723 ಮಂದಿ ಸೋಂಕಿಗೊಳಗಾಗಿರುವುದು ಕೋವಿಡ್ ಹರಡುವಿಕೆಯ ವೇಗದ ಬಗ್ಗೆ ಭೀತಿ ಶುರುವಾಗಿದೆ. ಈ ಪೈಕಿ ಬಹುತೇಕರು ಗಲ್ಫ್ ರಾಷ್ಟ್ರಗಳಿಂದ ಬಂದವರು ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟವರು. ಆದರೆ, 213 ಮಂದಿ ಸೋಂಕು ಪೀಡಿತರು ಜಿಲ್ಲೆಯಲ್ಲೇ ವಾಸಿಸುವವರಾಗಿದ್ದು, ಯಾವುದೇ ಸಂಪರ್ಕ ಇಲ್ಲದೆ ಕೋವಿಡ್ ದೃಢಪಟ್ಟಿದೆ. ಇದರಲ್ಲಿ 162 ಇನ್‌ಫ್ಲೂಯೆನ ಲೈಕ್‌ ಇಲ್‌ನೆಸ್‌ ಮತ್ತು 51 ಮಂದಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರಾಗಿದ್ದಾರೆ.

ಬಂಟ್ವಾಳ, ಶಕ್ತಿನಗರ, ಬೋಳೂರಿನಲ್ಲಿ ಪಾಸಿಟಿವ್‌ ಕಂಡು ಬಂದವರು ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಸ್ಥಳೀಯವಾಗಿ ಕೋವಿಡ್ ಹರಡುವಿಕೆ ಕಡಿಮೆಯಾಗಿತ್ತು. ಆದರೆ, ಇದೀಗ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಜಾಸ್ತಿಯಾಗುತ್ತಿರುವುದು ಜಿಲ್ಲೆಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ.

13 ದಿನ: 723 ಪ್ರಕರಣ
ಆರಂಭಿಕ ಹಂತದಲ್ಲಿ ಕೋವಿಡ್ ಹರಡುವಿಕೆಯ ವೇಗವೂ ತೀರಾ ಕಡಿಮೆ ಇತ್ತು. ಮಾ. 23ರಿಂದ ಎ. 5ರ ವರೆಗೆ 12 ಮಂದಿಗೆ ಕೋವಿಡ್ ಬಾಧಿಸಿದ್ದು, ಇವರಲ್ಲಿ 11 ಮಂದಿ ವಿದೇಶದಿಂದ ಆಗಮಿಸಿದವರೇ ಆಗಿದ್ದರು. ಆದರೆ, ಎ. 18ರ ಬಳಿಕ ಒಂದೇ ಮನೆಯ ನಾಲ್ಕಾರು ಮಂದಿಗೆ ಕೋವಿಡ್ ತಗುಲತೊಡಗಿದ್ದು, ಬಳಿಕ ನಿಂತಿತ್ತು. ಇದೀಗ ಈ ಸಂಖ್ಯೆ ದ್ವಿಗುಣಗೊಳ್ಳುತ್ತಲೇ ಸಾಗುತ್ತಿದ್ದು, ಕಳೆದ 13 ದಿನಗಳ ಅವಧಿಯಲ್ಲಿ 723 ಮಂದಿ ಕೊರೊನಾ ಬಾಧಿತರಾಗಿದ್ದಾರೆ.

ತಪಾಸಣೆಗೆ ಬನ್ನಿ
ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಜಿಲ್ಲೆಯಲ್ಲಿ ಜಾಸ್ತಿಯಾಗುತ್ತಿವೆ. ಸರಕಾರವು ಈ ಎರಡು ರೋಗ ಲಕ್ಷಣಗಳಿರುವವರನ್ನು ಕಡ್ಡಾಯವಾಗಿ ಗಂಟಲು ದ್ರವ ಮಾದರಿ ತೆಗೆದು ಪರೀಕ್ಷೆಗೊಳಪಡಿಸಬೇಕೆಂದು ಹೇಳಿದೆ. ಜನ ಲಕ್ಷಣ ಕಾಣಿಸಿಕೊಂಡರೆ ಮನೆಯಲ್ಲೇ ಕುಳಿತುಕೊಳ್ಳದೆ ತಪಾಸಣೆಗೆ ಆಗಮಿಸಬೇಕು. ಹಾಗೆ ಮಾಡುವುದರಿಂದ ಮನೆಯವರಿಗೂ ಹರಡುವ ಸಾಧ್ಯತೆಯನ್ನು ನಿಯಂತ್ರಿಸಬಹುದು.
-ಡಾ| ರಾಮಚಂದ್ರ ಬಾಯರಿ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.