ಪ್ರತಿ ಟನ್ ಅಕ್ರಮ ಮರಳಿಗೆ 3 ಸಾವಿರ ರೂ. ದಂಡ: ಡಿಸಿ
ಜಿಲ್ಲಾಮಟ್ಟದ ಮರಳು ಸಮಿತಿ ಸಭೆ ರಾತ್ರಿ ಮರಳು ಸಾಗಾಟ ನಿರ್ಬಂಧ
Team Udayavani, Jul 4, 2020, 6:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಹೊಸ ಮರಳು ನೀತಿಯ ಮಾರ್ಗಸೂಚಿ ಅನ್ವಯ ಅಕ್ರಮವಾಗಿ ಸಾಗಿಸುವ ಪ್ರತಿ ಟನ್ ಮರಳಿಗೂ 3 ಸಾವಿರ ರೂ. ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮರಳು ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ರಾಜಧನ ಪಡೆಯದೆ ಅಕ್ರಮವಾಗಿ ಮರಳು ಸಾಗಿಸುವುದು ದಂಡಾರ್ಹ. ನಿಯಮ ಉಲ್ಲಂಘಿಸಿ ಮರಳು ಸಾಗಿಸಿದಲ್ಲಿ ಕೂಡಲೇ ದಂಡ ವಿಧಿಸಬೇಕು. ಲಾರಿಗಳಲ್ಲಿ ಎಷ್ಟು ಟನ್ ಮರಳು ಇರುವುದೋ ಅದರಷ್ಟು ದಂಡ ವಿಧಿಸಬೇಕು ಎಂದರು.
ಅಕ್ರಮ ಮರಳು ದಂಧೆ ಹೆಚ್ಚಾಗುತ್ತಿರುವ ದೂರುಗಳು ಬರುತ್ತಿವೆ. 14 ಚಕ್ರವುಳ್ಳ ಲಾರಿಯಲ್ಲಿ 25 ಟನ್, 10 ಚಕ್ರವುಳ್ಳ ಲಾರಿಯಲ್ಲಿ 18 ಟನ್ ಮತ್ತು 12 ಚಕ್ರವುಳ್ಳ ವಾಹನಗಳಲ್ಲಿ 22 ಟನ್ ಮರಳು ಸಾಗಿಸುತ್ತಿರುವ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳಿಂದ ದೃಢೀಕರಣ ಪತ್ರ ಪಡೆಯಬೇಕು. ನಿಗದಿಗಿಂತ ಅ ಧಿಕ ಸಾಗಣೆ ಮಾಡಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದರು.
ರಾತ್ರಿ ವೇಳೆ ಯಾವುದೇ ಕಾರಣಕ್ಕೂ ಮರಳು ಸಾಗಿಸುವಂತಿಲ್ಲ. ಇಲಾಖೆಯಿಂದ ಪರವಾನಗಿ ಪಡೆದಲ್ಲಿ ಬೆಳಗ್ಗೆಯಿಂದ ರಾತ್ರಿ 9ರವರೆಗೆ ಮಾತ್ರ ಮರಳು ಸಾಗಿಸಬೇಕು. ರಾಯಚೂರು ತಾಲೂಕಿನ ಕಾಡ್ಲೂರು, ಮಾನ್ವಿ ತಾಲೂಕಿನ ಚೀಕಲಪರ್ವಿ, ದೇವದುರ್ಗ ತಾಲೂಕಿನ ಕೃಷ್ಣ ನದಿ ಬಳಿಯಿರುವ ಮರಳು ಸಂಗ್ರಹ ಕೇಂದ್ರಗಳಿಂದ ಮರಳು ಸಾಗಿಸಲಾಗುತ್ತದೆ ಎಂದು ತಿಳಿಸಿದರು. ಅಕ್ರಮವಾಗಿ ಮರಳು ಸಂಗ್ರಹಿಸುವುದು ಕೂಡ ಅಕ್ರಮವಾಗಿದ್ದು, ಕ್ರಮ ಕೈಗೊಳ್ಳಲಾಗುವುದು. ಚೆಕ್ಪೋಸ್ಟ್ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಮರಳು ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದರು.
ಎಸ್ಪಿ ಡಾ| ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಹರಿಬಾಬು, ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ, ರಾಜಶೇಖರ ಡಂಬಳ, ತಹಶೀಲ್ದಾರ್ ಡಾ| ಹಂಪಣ್ಣ, ಹಿರಿಯ ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ವಿಶ್ವನಾಥ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ