ನಕಲಿ ಜಾತಿ ಪ್ರಮಾಣ ಪತ್ರ: ಕ್ರಮಕ್ಕೆ ಆಗ್ರಹ
Team Udayavani, Jul 5, 2020, 10:50 AM IST
ಬಳ್ಳಾರಿ: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಲೆಮಾರಿ ಅಭಿವೃದ್ಧಿ ಕೋಶದಿಂದ 9 ಲಕ್ಷ ರೂ.ಗಳ ಸಾಲ ಮಂಜೂರಾತಿ ಮಾಡಿಸಿಕೊಂಡಿರುವ ಎಂ.ಸಿ. ಲೋಕಪ್ಪ ಎನ್ನುವವರ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಾವಾದ) ಯ ಸೋಮಪ್ಪ ಚಲವಾದಿ, ಮಲ್ಲಿಕಾರ್ಜುನ ಬೈಲೂರು ಆಗ್ರಹಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಮಹಾರಾಜಹಟ್ಟಿ ಗ್ರಾಮದ ನಿವಾಸಿಯಾಗಿದ್ದ ಎಂ.ಸಿ. ಲೋಕಪ್ಪ ಎಂಬುವವರು ಮೂಲತಃ ದೊಂಬಿದಾಸ ಜಾತಿಗೆ ಸೇರಿದವಾಗಿದ್ದು, ಪರಿಶಿಷ್ಟ ಜಾತಿಯಲ್ಲಿ ಬರುವ ಚನ್ನದಾಸರ ಎಂದು ನಕಲು ಜಾತಿ ಪ್ರಮಾಣ ಪತ್ರವನ್ನು ಪಡೆದು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಲೆಮಾರಿ ಅಭಿವೃದ್ಧಿ ಕೋಶದಿಂದ 9 ಲಕ್ಷ ರೂ.ಗಳ ಸಾಲ ಮಂಜೂರಾತಿ ಮಾಡಿಸಿಕೊಂಡು ಪರಿಶಿಷ್ಟ ಜಾತಿ ವ್ಯಾಪ್ತಿಯಲ್ಲಿನ ಅಲೆಮಾರಿಗಳಿಗೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದರು.
ಎಂ.ಸಿ. ಲೋಕಪ್ಪ ಅವರ ತಂದೆ ಆರ್. ಎಂ.ಚಂದ್ರಪ್ಪ ಎಂಬುವವರು ಮಹಾರಾಜಹಟ್ಟಿಯಲ್ಲಿ ಗ್ರಾಪಂ ಸದಸ್ಯರಾಗಿದ್ದು ಅಲ್ಲಿ ದೊಂಬಿದಾಸ ಎಂದು ಜಾತಿ ಪ್ರಮಾಣ ಪತ್ರವನ್ನೂ ಸಲ್ಲಿಸಿದ್ದಾರೆ. ಆದರೆ, ಅವರ ಮಗನಾದ ಎಂ.ಸಿ.ಲೋಕಪ್ಪ ಎನ್ನುವವರು ಜಗಳೂರು ಮತ್ತು ಬಳ್ಳಾರಿ ಎರಡು ತಾಲೂಕುಗಳಲ್ಲೂ ಚನ್ನದಾಸರ ಎಂದು ನಕಲು ಜಾತಿ ಪ್ರಮಾಣ ಪತ್ರವನ್ನು ಪಡೆದಿದ್ದಾರೆ. ಜತೆಗೆ ಆತನ ಮಕ್ಕಳಿಗೂ ಚನ್ನದಾಸರ ಎಂದೇ ಜಾತಿ ಪ್ರಮಾಣವನ್ನು ಪಡೆದಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲಾಗಿದ್ದರೂ ತನಿಖೆ ನಡೆಸುವಲ್ಲಿ ಪೊಲೀಸರು ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಪತ್ರಕರ್ತ ಎಂದು ಹೇಳಿಕೊಳ್ಳುವ ಲೋಕಪ್ಪ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೂ ಬೆದರಿಸುತ್ತಿದ್ದಾನೆ. ಹಾಗಾಗಿ ನಕಲು ಜಾತಿ ಪ್ರಮಾಣ ಪತ್ರ ಪಡೆದಿರುವ ಲೋಕಪ್ಪ ವಿರುದ್ಧ ಕೂಡಲೇ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಬಿ.ನಾಗೇಂದ್ರ, ಸಿ.ಶರಣಬಸಪ್ಪ, ಹುಲುಗಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್