ಮೆಕ್ಕೆಜೋಳ ಹಾನಿ: 13 ಕೋಟಿ ಆರ್ಥಿಕ ನೆರವು
Team Udayavani, Jul 5, 2020, 1:25 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ಲಾಕ್ಡೌನ್ ವೇಳೆ ಸಂಕಷ್ಟ ಎದುರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಘೋಷಿಸಿದ್ದು, ಜಿಲ್ಲೆಯ ರೈತರಿಗೆ 13 ಕೋಟಿ ಅನುದಾನ ಬಂದಿದೆ.
2019-20ನೇ ಸಾಲಿನಲ್ಲಿ ಮುಸುಕಿನ ಜೋಳ (ಗೋವಿನ ಜೋಳ) ಬೆಳೆದ ರೈತರಿಗೆ 5 ಸಾವಿರ ರೂ.ಗಳಂತೆ ಆರ್ಥಿಕ ನೆರವನ್ನು ಜಮೆ ಮಾಡಲು ಇಲ್ಲಿಯವರೆಗೆ ಏಕ ಮಾಲೀಕತ್ವದ ಭೂ ಹಿಡುವಳಿ ಇರುವ ಒಟ್ಟು 26,099 ರೈತರಿಗೆ 13,04,95,000 ರೂ. ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ. ಜಂಟಿ ಖಾತೆ ಭೂ ಹಿಡುವಳಿ ಹೊಂದಿದ ರೈತರ ಪಟ್ಟಿಯನ್ನು ಜಿಲ್ಲೆಯ ಎಲ್ಲ ತಾಲೂಕುಗಳ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗ್ರಾಪಂ ಕಾರ್ಯಾಲಯದಲ್ಲಿ ಪ್ರದರ್ಶಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ 11,935 ಮೆಕ್ಕೆ ಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ಹೊಂದಿದ ರೈತರಿದ್ದು, ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ನೋಟರಿ ದೃಢೀಕರಣ ಮಾಡಿಸಿ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ