ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ


Team Udayavani, Jul 5, 2020, 5:13 PM IST

5-July-22

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮೊಳಕಾಲ್ಮೂರು: ತಾಲೂಕಿನ ಕಾಟನಾಯಕನಹಳ್ಳಿ ಮತ್ತು ರಾಂಪುರ ಗ್ರಾಮಗಳಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಒಂದು ಗಂಟೆ ನಂತರ ವರ್ತಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ಆಟೋ ಚಾಲಕರು ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಸಹಕಾರ ನೀಡಬೇಕೆಂದು ತಹಶೀಲ್ದಾರ್‌ ಎಂ. ಬಸವರಾಜ್‌ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ಲಾಕ್‌ಡೌನ್‌ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾದ ಪರಿಣಾಮ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ದಿನ ನಿತ್ಯ ಬೆಳಿಗ್ಗೆ 7 ರಿಂದ ಮಧ್ಯಾಹ್ನ ಒಂದು ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವಿದೆ. ಕೋವಿಡ್ ನಿಯಂತ್ರಿಸಲು ಮಧ್ಯಾಹ್ನ ಒಂದು ಗಂಟೆಯಿಂದ ಬಂದ್‌ ಮಾಡುವ ಮೂಲಕ ಲಾಕ್‌ಡೌನ್‌ ಮಾಡಲಾಗುವುದು ಎಂದರು.

ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವುದರಿಂದ ಆ ಪ್ರದೇಶಗಳಿಂದ ಬರುವವರಿಂದ ಅಂತರ ಕಾಯ್ದುಕೊಂಡು ಜಾಗರೂಕರಾಗಿರಬೇಕು. ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪಿಎಸ್‌ಐ ಎಂ.ಕೆ. ಬಸವರಾಜ್‌ ಮಾತನಾಡಿ, ಜನತೆಯ ಆರೋಗ್ಯ ರಕ್ಷಣೆಗಾಗಿ ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು. ಹೊರ ಜಿಲ್ಲೆಯಿಂದ ಮತ್ತು ರಾಜ್ಯಗಳಿಂದ ಬರುವವರಿಗೆ ಮಾಸ್ಕ್ಗಳನ್ನು ಬಳಸಬೇಕೆಂದು ಅರಿವು ಮೂಡಿಸಬೇಕು. ಕೋವಿಡ್ ನಿಂದ ಆಗುವ ಅನಾಹುತಗಳನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದರು. ವರ್ತಕರ ಸಂಘದ ಅಧ್ಯಕ್ಷ ಮೇದಾರ ರಾಮು, ಸಂಘದ ಕೆ.ಟಿ. ರಾಜಶೇಖರ, ಪಪಂ ಮಾಜಿ ಸದಸ್ಯ ರಾಜಶೇಖರ ಗಾಯಕವಾಡ್‌, ಟೈಲರ್‌ ಬಸವರಾಜ್‌, ಅಶ್ವಿ‌ನಿ , ಎಂ.ಎಸ್‌. ನಾಗರಾಜ್‌, ರವಿ, ಬಸವರಾಜ್‌, ಆರೀಪುಲ್ಲಾ, ಅಬ್ದುಲ್‌ ಹಕೀಂ, ಬಿ.ಟಿ. ಶಿವಕುಮಾರ್‌, ಡಿ.ಎಚ್‌. ರಾಜು, ಹಫೀಜ್‌, ಇಸಾಕ್‌, ಕೆ.ಟಿ. ಮಂಜುನಾಥ, ಅಕ್ರಂವುಲ್ಲಾ, ಬೇಕರಿ ಸೈಫುಲ್ಲಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.