ಸಮರ್ಪಕ ಕುಡಿವ ನೀರು ಪೂರೈಸಿ
Team Udayavani, Jul 5, 2020, 4:48 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಂಡೂರು: ಒಂದುಕಡೆ ಕೋವಿಡ್ ಭೀತಿಯಿಂದ ಸಾರ್ವಜನಿಕರು ತತ್ತರಿಸಿದ್ದರೆ ಮತ್ತೊಂದು ಕಡೆ ಡೆಂಘೀ ಆವರಿಸಿದೆ. ಮತ್ತೊಂದು ಕಡೆ ಮೂಲಭೂತವಾದ ಕುಡಿಯುವ ನೀರಿನ ಸಮಸ್ಯೆಯಿಂದ ಇಡೀ ಗೊಲ್ಲಲಿಂಗಮ್ಮನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಜನತೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ತಾಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿನಿಂದಲೂ ಸಹ ಒಂದಲ್ಲ ಒಂದು ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಈ ಬಗ್ಗೆ ಗ್ರಾಮಸ್ಥರು ಪಂಚಾಯಿತಿ ಅಧಿಕಾರಿಗಳಿಗೆ ನೇರವಾಗಿ ತಿಳಿಸಿದರೂ, ಸದಸ್ಯರ ಮೂಲಕ ಒತ್ತಾಯಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.ಬೋರು ಮತ್ತು ಪೈಪ್ ಹಾಕುವ ಕಾಮಗಾರಿಗಳನ್ನು ಅತಿ ನಿಧಾನಗತಿಯಲ್ಲಿ ಮಾಡುತ್ತಿರುವುದು ಕುಡಿಯುವ ನೀರಿಗೂ ಸಹ ಅಲೆದಾಡುವ, ದಿನಪೂರ್ತಿ ನೀರಿಗಾಗಿ ಕಾಯುವಂತಹ ದುಸ್ಥಿತಿ ಒದಗಿ ಬಂದಿದೆ ಎಂದು ಜೈಭೀಮ ಯುವಕ ಸಂಘದ ಮುಖಂಡ ಆರ್. ಕೆ. ಹೆಗಡೆ ಆರೋಪಿಸಿದ್ದಾರೆ.
ಗ್ರಾಮದ ಮುಖಂಡರೆಲ್ಲರೂ ಸೇರಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಾಲೂಕುಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಎ.ಕೆ. ಹುಲುಗಪ್ಪ, ರಮೇಶ್, ನಾಗರಾಜ, ಕುಬೇರ್, ರೇವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!