ಚೇತನ ಯೋಜನೆಯಿಂದ ದೂರ ಉಳಿದ ಫ‌ಲಾನುಭವಿಗಳು

ವೃತ್ತಿಯಿಂದ ಹೊರ ಬರಲು ಹಲವು ಸಮಸ್ಯೆ!

Team Udayavani, Jul 6, 2020, 5:51 AM IST

ಚೇತನ ಯೋಜನೆಯಿಂದ ದೂರ ಉಳಿದ ಫ‌ಲಾನುಭವಿಗಳು

ಸಾಂದರ್ಭಿಕ ಚಿತ್ರ...

ಉಡುಪಿ: ಆರ್ಥಿಕ ಸಮಸ್ಯೆಯಿಂದ ಲೈಂಗಿಕ ವೃತ್ತಿಗಿಳಿದ ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ರಾಜ್ಯ ಸರಕಾರ ಜಾರಿಗೆ ತಂದ “ಚೇತನ’ ಯೋಜನೆಯಿಂದ ಜಿಲ್ಲೆಯ ಲೈಂಗಿಕ ಕಾರ್ಯಕರ್ತರು ದೂರ ಉಳಿದಿದ್ದಾರೆ.

ಸರಕಾರ ಅನಿವಾರ್ಯವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು, ಹೊಸ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ “ಚೇತನ’ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಲೈಂಗಿಕ ಕಾರ್ಯ ಕರ್ತೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಮುಂದಾಗುತ್ತಿಲ್ಲ.

ಮುಚ್ಚಿದ ಎನ್‌ಜಿಒ-ಸಿಗದ ಯೋಜನೆ
ಲೈಂಗಿಕ ಕಾರ್ಯಕರ್ತೆಯರು ಸಾರ್ವ ಜನಿಕವಾಗಿ ಎಲ್ಲಯೂ ತಮ್ಮ ಗುರುತು ಹೇಳಿಕೊಳ್ಳಲು ಇಚ್ಛಿಸುತ್ತಿಲ್ಲ. ಇದರಿಂದಾಗಿ ಸರಕಾರ ಸಮಾಜದಲ್ಲಿ ಈ ವರ್ಗಕ್ಕಾಗಿ ದುಡಿಯುತ್ತಿರುವ ಎನ್‌ಜಿಒ ಸಂಸ್ಥೆಗಳ ಮೂಲಕ ವೃತ್ತಿಯನ್ನು ಬಿಡಲು ಇಚ್ಛಿಸುವ ಮಹಿಳೆಯರನ್ನು ಗುರುತಿಸಿ, ಅವರಿಗೆ ಚೇತನ ಯೋಜನೆಯಡಿ ಸ್ವಉದ್ಯೋಗ ಮಾಡಲು ಆರ್ಥಿಕ ಸಹಾಯ ಮಾಡುತ್ತದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಈ ವರ್ಗಕ್ಕಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್‌ಜಿಒ ಸಂಸ್ಥೆ ಮುಚ್ಚಿ ಹೋಗಿದೆ.

ಇದರಿಂದಾಗಿ ಕಳೆದ ಮೂರು ವರ್ಷಗಳಿಂದ ಲೈಂಗಿಕ ಕಾರ್ಯ ಕರ್ತರ ಕುರಿತು ಯಾವುದೇ ರೀತಿಯಾದ ಸರ್ವೆಯಾಗಲಿ ನಡೆದಿಲ್ಲ. ಅವರೇ ಮುಂದೆ ಬಂದು ಯೋಜನೆಯ ಲಾಭ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ 550 ಕಾರ್ಯಕರ್ತರು
ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಉಡುಪಿ, ಹೆಬ್ರಿ, ಕಾರ್ಕಳ, ಕಾಪು, ಬೈಂದೂರು ತಾಲೂಕಿನಲ್ಲಿ 2017ರ ಸರ್ವೆ ಅನ್ವಯ ಸುಮಾರು 550 ಲೈಂಗಿಕ ಕಾರ್ಯಕರ್ತೆಯರು ಇದ್ದರು.

ಬಡ್ಡಿ ರಹಿತ ಸಾಲ
ಸರಕಾರ ಇವರಿಗೆ ಸ್ವಉದ್ಯೋಗ ಆರಂಭಿಸಲು ಮೂಲ ಬಂಡವಾಳವನ್ನು ಚೇತನ ಯೋಜನೆ ನೀಡಲಿದೆ. ಇದನ್ನು ಪಡೆ ಯಲು ಬಯಸುವವರು ತಾವು ಲೈಂಗಿಕ ವೃತ್ತಿ ಬಿಡುವುದಾಗಿ ಪ್ರಮಾಣಪತ್ರ ಕೊಡಬೇಕು. ಅನಂತರವೂ ವೃತ್ತಿ ಮುಂದು ವರಿಸಿದರೆ, ಕೊಟ್ಟ ಹಣ ಸರಕಾರಕ್ಕೆ ಹಿಂದಿರುಗಿಸ ಬೇಕು. 18-60 ವರ್ಷದೊಳಗಿನ ಮಹಿಳೆಯರಿಗೆ 50,000 ರೂ. ದೊರೆಯಲಿದೆ. ಅದರಲ್ಲಿ 25,000 ಬಡ್ಡಿರಹಿತ ನೇರ ಸಾಲ ಹಾಗೂ 25,000 ಸಹಾಯಧನ ಸಿಗಲಿದೆ.

ಗುರಿ ಮಾತ್ರ; ಸಾಧನೆ ಶೂನ್ಯ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಇನ್ನೂ ಯಾವುದೇ ರೀತಿಯಾದ ಭೌತಿಕ ಹಾಗೂ ಆರ್ಥಿಕ ಗುರಿ ಬಂದಿಲ್ಲ. 2015-16ರಲ್ಲಿ ಭೌತಿಕ 10 ಹಾಗೂ ಆರ್ಥಿಕ 2 ಲ.ರೂ. ಗುರಿಯನ್ನು ಸಾಧಿಸಿದೆ. 2016-17ರಲ್ಲಿ ಭೌತಿಕ 13 ಹಾಗೂ ಆರ್ಥಿಕ 2.60 ಲ. ರೂ. ಗುರಿ, 2017-18ರಲ್ಲಿ ಭೌತಿಕ 3 ಹಾಗೂ ಆರ್ಥಿಕ 1.50 ಲ.ರೂ.ಗುರಿಯನ್ನು ತಲುಪಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಇಲಾಖೆಯು ನಿಗಮಕ್ಕೆ ಗುರಿ ನೀಡಿದರೂ ಸಾಧನೆ ಮಾತ್ರ ಶೂನ್ಯವಾಗಿದೆ.

ಸ್ವಉದ್ಯೋಗಕ್ಕೆ ಅವಕಾಶ
ವೃತ್ತಿಯನ್ನು ಬಿಟ್ಟು ಬರುವವರಿಗೆ ಚೇತನ ಯೋಜನೆಯಡಿ ಸ್ವಉದ್ಯೋಗಕ್ಕೆ ಅವಕಾಶ ಆರಂಭಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ವೃತ್ತಿಯಿಂದ ಹೊರ ಬರಲು ಇಚ್ಛಿಸುವವರು ನೇರವಾಗಿ ಕಚೇರಿಯಿಂದ (ದೂರವಾಣಿ ಸಂಖ್ಯೆ 0820-2574978 ) ಮಾಹಿತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಇಲಾಖೆಯನ್ನು ಸಂಪರ್ಕಿಸ ಬಹುದಾಗಿದೆ.
-ಶೇಸಪ್ಪ ಮಹಿಳಾ ಮತ್ತು
ಮಕ್ಕಳ ಇಲಾಖೆ ಉಪನಿರ್ದೇಶಕ, ಉಡುಪಿ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.