ಬೆಂಗಳೂರಿನಲ್ಲಿ ವಿಶೇಷ “ರಿಮ್ಯಾಂಡ್ ಕೋರ್ಟ್’
Team Udayavani, Jul 6, 2020, 5:43 AM IST
ಬೆಂಗಳೂರು: ನ್ಯಾಯಾಲಯದ ಆವರಣದಲ್ಲಿ ಕೋವಿಡ್-19 ಹರಡುವುದನ್ನು ನಿಯಂತ್ರಿಸುವ ಸುಲುವಾಗಿ ಆರೋಪಿಗಳು, ವಿಚಾರಣಾಧೀನ ಕೈದಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಲು ಹೈಕೋರ್ಟ್ ಮೊಟ್ಟ ಮೊದಲ ಬಾರಿಗೆ “ರಿಮ್ಯಾಂಡ್ ಕೋರ್ಟ್’ ಅನ್ನು ಸ್ಥಾಪಿಸಿದೆ. ಬೆಂಗಳೂರಿನ ಗುರುನಾನಕ್ ಭವನದಲ್ಲಿ ಈ ರಿಮ್ಯಾಂಡ್ ಕೋರ್ಟ್ ಕಾರ್ಯಾರಂಭಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಕೋರ್ಟ್ಗಳ ಕಾರ್ಯನಿರ್ವಹಣೆಗೆ ರಚಿಸಲಾದ ಮಾರ್ಗಸೂಚಿಗಳ (ಎಒಪಿ) ಅನ್ವಯ ಈ ರಿಮ್ಯಾಂಡ್ ಕೋರ್ಟ್ ಆರಂಭಿಸಲಾಗಿದೆ. ಆರೋಪಿಯನ್ನು ಬಂಧಿಸಿದರೆ, ವಿಚಾರಣಾಧೀನ ಕೈದಿಯನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸ ಬೇಕಾದರೆ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಈ ರಿಮ್ಯಾಂಡ್ ಕೋರ್ಟ್ನಲ್ಲಿ ಕಲಾಪ ನಡೆಸಿ ವಿಚಾರಣೆ ಮಾಡಿ ಬಂಧಿತ ಆರೋಪಿಗಳ ಹಾಗೂ ವಿಚಾರಣಾಧೀನ ಕೈದಿಗಳ ಖುದ್ದು ಹಾಜರಾತಿ ಮತ್ತು ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.
ಬಂಧಿತ ಆರೋಪಿಗಳ ಹಾಗೂ ವಿಚಾರಣಾಧೀನ ಕೈದಿಗಳ ಖುದ್ದು ಹಾಜರಾತಿ ವೇಳೆ ಅನುಸರಿಸಬೇಕಾದ ಎಲ್ಲಾ ಸುರಕ್ಷಿತ ಕ್ರಮಗಳನ್ನು ಈ ರಿಮ್ಯಾಂಡ್ ಕೋಟ್ನಲ್ಲಿ ಕೈಗೊಳ್ಳಲಾಗುತ್ತದೆ. ಸರ್ಕಾರಿ ಪ್ರಾಧಿಕಾರಗಳು ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿ ಪಾಲಿಸಿ ವಿಚಾರಣಾಧೀನ ಕೈದಿ ಹಾಗೂ ಬಂಧಿತ ಆರೋಪಿಯನ್ನು ಸುರಕ್ಷಿತವಾಗಿ ರಿಮಾಂಡ್ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ ಎಂದು ರಿಜಿಸ್ಟ್ರಾರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ