ಕೊಪ್ಪಳ: 139ಕ್ಕೆ ಏರಿಕೆಯಾದ ಕೋವಿಡ್ 19 ಸೋಂಕಿತರ ಸಂಖ್ಯೆ
Team Udayavani, Jul 6, 2020, 7:51 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
ಸೋಮವಾರ 8 ಜನರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 139ಕ್ಕೆ ಏರಿಕೆಯಾದಂತಾಗಿದೆ.
ಇನ್ನೂ 1405 ಜನರ ಗಂಟಲು ದ್ರವ ಮಾದರಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಇನ್ನೂ ಸೋಮವಾರ 8 ಜನರಿಗೆ ಸೋಂಕು ದೃಢಪಟ್ಟವರ ಪೈಕಿ ಹೊಸಪೇಟೆ ತಾಲೂಕಿನ ಕಂಪ್ಲಿ ನಿವಾಸಿ 27 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದ್ದು, ಈತ ಜು.3ರಂದು ಬೆಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ಬಂದವನಾಗಿರುತ್ತಾನೆ. ಈತನಿಗೆ ಐಎಲ್ಐನಡಿ ಸೋಂಕು ದೃಢಪಟ್ಟಿದೆ.
ಇನ್ನೂ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ 24 ವರ್ಷದ ಯುವತಿಗೆ ಸೋಂಕು ಬಂದಿದ್ದು, ಈಕೆ ಜೂ.26ರಂದು ಮಧ್ಯಪ್ರದೇಶದಿಂದ ಜಿಲ್ಲೆಗೆ ಆಗಮಿಸಿದವರಾಗಿದ್ದಾರೆ, ಈ ಯುವತಿಯಲ್ಲಿ ಸೋಂಕಿನ ಲಕ್ಷಣಗಳಿಲ್ಲ.
ಇನ್ನು ಕುಷ್ಟಗಿ ತಾಲೂಕಿನ ಪುರ ಗ್ರಾಮದ 10 ವರ್ಷದ ಬಾಲಕ ಹಾಗೂ 54 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು ಇವರಿಬ್ಬರಲ್ಲೂ ಸೋಂಕಿನ ಲಕ್ಷಣಗಳಿಲ್ಲ.
ಇನ್ನೂ ಗಂಗಾವತಿ ತಾಲೂಕಿನ ತೊಂಡಿಹಾಳ ಕ್ಯಾಂಪಿನ 41 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಇವರಿಗೆ ಯಾವುದೇ ರೀತಿಯ ಪ್ರಯಾಣದ ಹಿನ್ನಲೆಯೂ ಇರುವುದಿಲ್ಲ, ಸೋಂಕಿನ ಲಕ್ಷಣಗಳೂ ಇಲ್ಲ.
ಇನ್ನು, ಗಂಗಾವತಿ ನಗರದ 70 ವರ್ಷದ ಮಹಿಳೆ, 28 ವರ್ಷದ ಮಹಿಳೆ, ಕುಷ್ಟಗಿ ತಾಲೂಕಿನ ನವಲಹಳ್ಳಿ ಗ್ರಾಮದ 23 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. 23 ವರ್ಷದ ಯುವಕ ತುಮಕೂರಿನಿಂದ ಜು.1ರಂದು ಜಿಲ್ಲೆಗೆ ಆಗಮಿಸಿದ ಹಿನ್ನಲೆಯನ್ನು ಹೊಂದಿದ್ದಾನೆ.
ಇದೀಗ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಕೋವಿಡ್ 19 ಸೋಂಕಿತರ ಸಂಖ್ಯೆ 139ಕ್ಕೆ ಏರಿಕೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ