ಖಾಸಗಿ ಶಿಕ್ಷಕರಿಗೆ ನೆರವಾಗಿ 1, 2 ದಿನಗಳ ಸಂಬಳ ನೀಡಲು ಸರಕಾರಿ ಶಿಕ್ಷಕರಿಗೆ ಸಚಿವರ ಮನವಿ
Team Udayavani, Jul 7, 2020, 6:15 AM IST
ಬೆಂಗಳೂರು: ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರು ಆರ್ಥಿಕವಾಗಿ ತೀವ್ರ ದುಃಸ್ಥಿತಿಯಲ್ಲಿದ್ದು, ಅವರ ನೆರವಿಗೆ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ತಮ್ಮ ಒಂದು ಇಲ್ಲವೇ ಎರಡು ದಿನಗಳ ವೇತನವನ್ನು ನೀಡುವ ಮೂಲಕ ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಇದು ನಮ್ಮೆಲ್ಲರ ಸಾಮಾಜಿಕ ಜವಾ ಬ್ದಾರಿಯೂ ಆಗಿದೆ.
ಕೋವಿಡ್ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸರಕಾರ ದಿಂದ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಶಿಕ್ಷಣ ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟ ದಲ್ಲಿರುವ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸರ ಕಾರವೂ ಅವಕಾಶಗಳನ್ನು ಅವ ಲೋಕಿ ಸುತ್ತಿದೆ. ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದನ್ನು ಇಲಾಖೆ ಗಮನಿಸಿದೆ ಎಂದರು.
ಖಾಸಗಿ ಶಾಲಾ ಶಿಕ್ಷಕರಿಗೆ ನೆರ ವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತನ್ನ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ನನ್ನ ಪಾಲನ್ನು ನೀಡುವೆ. ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಸಕಾರಾತ್ಮಕ ಸಂದೇಶ ನೀಡಬೇಕು ಎಂದರು.
ಸರಕಾರ ಕಠಿನ ಪರಿಸ್ಥಿತಿ ಯಲ್ಲಿಯೂ ಸರಕಾರಿ ಶಿಕ್ಷಕರ ವೇತನ, ಭತ್ತೆಗಳನ್ನು ನೀಡಲು ವಿಳಂಬ ಮಾಡಿಲ್ಲ. ಹೀಗಾಗಿ ಶಿಕ್ಷಕರು ಮಾನವೀಯ ಗುಣ ಮೆರೆಯಬೇಕು.
– ಎಸ್. ಸುರೇಶ್ ಕುಮಾರ್
ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು