ವಿವಿಧ ಯೋಜನೆಗೆ ಅನುದಾನ ವಿತರಣೆ
Team Udayavani, Jul 7, 2020, 6:57 AM IST
ಕೋಲಾರ: ತಾಲೂಕು ಶಿಬಿರ ಕಚೇರಿಯಲ್ಲಿ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್, ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ದೊರೆಯುವ ವಿವಿಧ ಯೋಜನೆಗಳ ಅನುದಾನ ವಿತರಿಸಿದರು. ರಾಸುಗಳ ಗುಂಪು ವಿಮೆ ಮೊತ್ತ 10 ಲಕ್ಷ ರೂ., ಮಹಿಳಾ ಹಾಲು ಉತ್ಪಾದಕರ ಸಂಘಗಳಲ್ಲಿ ಹಾಲು ಉತ್ಪಾದನೆ ಹೆಚ್ಚಿಸಲು 2 ಲಕ್ಷ ರೂ., ಬಿಎಂಸಿ ಸಿವಿಲ್ ಕಾಮಗಾರಿಗೆ 1 ಲಕ್ಷ ರೂ. ಮತ್ತು ನೂತನ ಕಟ್ಟಡ ಅನುದಾನ 3 ಲಕ್ಷ ರೂ. ವಿತರಿಸಿ ಹರೀಶ್ ಮಾತನಾಡಿದರು.
ಕೋವಿಡ್ 19ದಿಂದ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದು, ಇಂತಹ ಕ್ಲಿಸ್ಟಕರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ನಡೆಸುವ ರೈತರಿಗೆ ಯಾವುದೇ ತರಹ ತೊಂದರೆಯಾಗದಂತೆ ಸಕಾಲಕ್ಕೆ ಬಟವಾಡೆ ಮತ್ತು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿ ಆಗಿದ್ದೇವೆ ಎಂದು ವಿವರಿಸಿದರು. ಸಂಘಗಳಲ್ಲಿ ಕಡ್ಡಾಯವಾಗಿ ಸೂಚನಾ ಫಲಕಗಳನ್ನು ಅಳವಡಿಸಲು ಮತ್ತು ವಾರ್ಷಿಕ ಸಭೆಗಳಲ್ಲಿ ಬ್ಯಾನರ್ ಹಾಕುವಂತೆ ತಿಳಿಸಿದರು.
ಕೇಂದ್ರ ಸರ್ಕಾರದ ಆದೇಶದಂತೆ ಹಾಲು ಉತ್ಪಾದಕರು ಮತ್ತು ಸದಸ್ಯರಿಗೆ ಕೆ.ಸಿ.ಸಿ. (ಕಿಸಾನ್ ಕ್ರೆಡಿಟ್ ಕಾರ್ಡ್) ನೋಂದಾಯಿಸಿ ಕೊಂಡ ಆದರ ಪ್ರಯೋಜನೆಗಳನ್ನು ಪಡೆಯಲು ತಿಳಿಸಿದರು. ಶಿಬಿರದ ಉಪವ್ಯವಸ್ಥಾಪಕ ಡಾ.ಎ.ಸಿ. ಶ್ರೀನಿವಾಸಗೌಡ ವಾರ್ಷಿಕ ಸಭೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಿಸ್ತಾರಣಾಧಿಕಾರಿ ಶ್ರೀನಿವಾಸ್, ವಿ.ರಾಜಬಾಬು, ಎಸ್. ನಾಗಪ್ಪ, ಅಣ್ಣಪ್ಪ, ಭರತ್, ಸಮೀರ್ ನಾಗೇಂದ್ರ, ರಾಮಾಂಜಿನಪ್ಪ ತಾಲೂಕಿನ ಆಯ್ದ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್