ಪರಿಹಾರದಲ್ಲಿ ಲೋಪವಾಗದಂತೆ ಸೂಚನೆ


Team Udayavani, Jul 7, 2020, 4:25 PM IST

ಪರಿಹಾರದಲ್ಲಿ ಲೋಪವಾಗದಂತೆ ಸೂಚನೆ

ಸವಣೂರು: ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಲೋಪವಾಗಿದ್ದೇ ಆದರೆ, ನೇರವಾಗಿ ಇಲಾಖೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣವರ ತೋಟಗಾರಿಕೆ ಇಲಾಖೆ ಅಧಿಕಾರಿ ವಿನೋದ ಹಾಗೂ ಕೃಷಿ ಇಲಾಖೆ ಅಧಿಕಾರಿ ಬಿ.ಎಸ್‌.ಕಲಾಲ ಅವರನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ಹೊರವಲಯದ ತಾಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಸಾಕಷ್ಟು ಹಣ ಖರ್ಚು ಮಾಡಿ ತೋಟಗಾರಿಕೆ ಬೆಳೆಗಳನ್ನು ಬೆಳೆದಿದ್ದ ಸಂದರ್ಭದಲ್ಲಿ ದೇಶದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗದ ಹಾವಳಿಯಿಂದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರು ಸಾಕಷ್ಟು ತೊಂದರೆ ಅನುಭವಿಸಿದ ಹಿನ್ನೆಲೆಯಲ್ಲಿ ಸರ್ಕಾರ ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ಘೋಷಣೆ ಮಾಡಿದೆ. ಇಲಾಖೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸರ್ವೇ ಮಾಡಿ ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ್ದರೂ ಸಹ ಅವೈಜ್ಞಾನಿಕವಾಗಿ ಮನಬಂದಂತೆ ಮಾಹಿತಿ ತಯಾರಿಸಿದ್ದೀರಿ. ಹೀಗಾದರೆ, ತಾಲೂಕಿನ ರೈತರಿಗೆ ಸಮರ್ಪಕವಾದ ಪರಿಹಾರ ದೊರಕುವಲ್ಲಿ ಅನ್ಯಾಯವಾಗುತ್ತದೆ. ಆದ್ದರಿಂದ, ಇಲಾಖೆ ಅಧಿಕಾರಿಗಳು ಸರ್ವೇಯಿಂದ ಉಳಿದುಕೊಂಡ ರೈತರ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರ ದೊರಕುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಪಂ ರಸ್ತೆ ಮತ್ತು ಒಳಚರಂಡಿ ಇಲಾಖೆ ಅಧಿಕಾರಿ ಹನುಮಂತಪ್ಪ ಸಭೆಗೆ ಮಾಹಿತಿ ನೀಡಲು ಮುಂದಾಗುತ್ತಿದ್ದಂತೆ, ತಾಪಂ ಅಧ್ಯಕ್ಷ ಮಾತನಾಡಿ, ಅತಿವೃಷ್ಟಿಯಿಂದ ತಾಲೂಕಿನಲ್ಲಿ ಸುಮಾರು 14 ಶಾಲೆಗಳು ಹಾನಿಗೊಳಗಾಗಿವೆ. ಈ ಶಾಲೆಗಳನ್ನು ದುರಸ್ತಿ ಮಾಡುವಂತೆ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದರೂ ಕೂಡ ಕಾಮಗಾರಿ ಪ್ರಾರಂಭಿಸಿಲ್ಲ. ತಕ್ಷಣ ಸೋಮವಾರದ ಒಳಗಾಗಿ ಕಾಮಗಾರಿ ಪ್ರಾರಂಭಿಸುವಂತೆ ಎಚ್ಚರಿಸಿದರು.

ಹತ್ತಿಮತ್ತೂರ ಮಂಟಗಣಿ ಮುಖ್ಯ ರಸ್ತೆಯಲ್ಲಿ ಸಿಡಿ ನಿರ್ಮಾಣದ ಕುರಿತು ತಾಪಂ ಸದಸ್ಯ ಫಕ್ಕೀರಗೌಡ ಕುಂದೂರ ಮಾಡಿದ ಪ್ರಸ್ತಾಪಕ್ಕೆ; ಅಧ್ಯಕ್ಷರು ಮಾತನಾಡಿ, ತಾಪಂ ಅನುದಾನದಲ್ಲಿ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸಿ ಸಿಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಜಿಪಂ ರಸ್ತೆ ಮತ್ತು ಒಳಚರಂಡಿ ಇಲಾಖೆ ಅಧಿ ಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿ ಬಿ.ಎಸ್‌. ಕಲಾಲ ಇಲಾಖೆ ಮಾಹಿತಿ ನೀಡಿ, ಲಾಕ್‌ಡೌನ್‌ ಸಂದರ್ಭದಲ್ಲಿ ರಾಜ್ಯ ಸರ್ಕಾರ ಗೋವಿಜೋಳ ಬೆಳೆಗಾರರಿಗೆ 5 ಸಾವಿರ ರೂ. ಪರಿಹಾರ ಯೋಜನೆಗೆ ಸವಣೂರ ತಾಲೂಕಿನಲ್ಲಿ 11,159 ರೈತರು ನೀರಾವರಿ ಗೋವಿನಜೋಳ ಬೆಳೆಯನ್ನು ಬೆಳೆದಿದ್ದಾರೆ. ಅದರಲ್ಲಿ, 6517 ರೈತರ ಖಾತೆಗಳಿಗೆ ಪರಿಹಾರದ ಹಣ ಜಮೆ ಮಾಡಲಾಗಿದೆ. ಇನ್ನುಳಿದ ರೈತರ ಖಾತೆಗಳಲ್ಲಿ ತಾಂತ್ರಿಕ ತೊಂದರೆಯಿದೆ. ಅದನ್ನು ಸರಿಪಡಿಸಿ ಹಣ ಜಮೆ ಮಾಡಲಾಗುವದು ಎಂದರು.

ತಾಲೂಕಿನಲ್ಲಿ ಕೇವಲ 11,159 ರೈತರು ಮಾತ್ರ ನೀರಾವರಿ ಗೋವಿನಜೋಳ ಬೆಳೆ ಬೆಳೆದಿದ್ದಾರೆಯೇ? ಯಾವ ಆಧಾರದ ಮೇಲೆ ರೈತರನ್ನು ಗುರುತಿಸಿದ್ದೀರಿ. ಈ ಕುರಿತು ಸಮೀಕ್ಷೆಯ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡುವಂತೆ ಸೂಚಿಸಿದ ಅಧ್ಯಕ್ಷರು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ಸಮೀಕ್ಷೆ ಮಾಡಿದ ಖಾಸಗಿ ವ್ಯಕ್ತಿಗಳ ಬೇಜವಾಬ್ದಾರಿತನದಿಂದ ಗೋವಿನಜೋಳ ಬೆಳೆದ ಸಾವಿರಾರು ರೈತರು ಪರಿಹಾರದಿಂದ ವಂಚಿತರಾಗಿದ್ದಾರೆ ಎಂದು ಹರಿಹಾಯ್ದರು.

ಸಭೆಗೆ ಇನ್ನೂಳಿದ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ನಂತರ, ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮೀತಿ ಅಧ್ಯಕ್ಷರಾಗಿ ರತ್ನಾ ವಗ್ಗನವರ ಅವರು ಆಯ್ಕೆಯಾದರು. ಸಭೆಯಲ್ಲಿ ತಾಪಂ ಉಪಾದ್ಯಕ್ಷೆ ಜಯಶೀಲಾ ರೊಟ್ಟಿಗವಾಡ, ರತ್ನಾ ವಗ್ಗನವರ, ಸದಸ್ಯರಾದ ಬಸವರಾಜ ಕೋಳಿವಾಡ, ಬಸವರಾಜ ಕಳಸದ, ಸವಿತಾ ಬಿಜೂjರ, ಸಂಗೀತಾ ಪೂಜಾರ, ರೇಣವ್ವ ಬಾರ್ಕಿ, ಭಾರತಿ ಕುಂಭಾರ, ದುರ್ಗಪ್ಪ ಕಾಳೆ, ರೇಖಾ ಕಂಬಳಿ ಇಒ ಮುನಿಯಪ್ಪ ಪಿ., ಎಡಿ ಎಸ್‌.ಎಚ್‌.ಅಮರಾಪೂರ, ಮ್ಯಾನೇಜರ್‌ ಬಿ.ಎಸ್‌.ಚಿಕ್ಕಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.