12 ಸಾವಿರ ರೂ. ಗೌರವಧನ ನೀಡಲು ಮನವಿ
Team Udayavani, Jul 7, 2020, 4:29 PM IST
ಹಾವೇರಿ: ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ, ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕೋರಿ ಜಿಲ್ಲಾ ಆರೋಗ್ಯಾಧಿ ಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಕಳೆದ ಜನವರಿ ತಿಂಗಳಿನಿಂದ ಈವರೆಗೆ 10 ಮನವಿ ಪತ್ರಗಳನ್ನು ಸರ್ಕಾರ ಮತ್ತು ಇಲಾಖೆಗೆ ಸಲ್ಲಿಸಲಾಗಿದೆ. ಆಶಾ ಕಾರ್ಯಕರ್ತೆಯರ ಸಂಘದಿಂದ ಸಲ್ಲಿಸಲಾದ ಈ ಮನವಿ ಪತ್ರಗಳಲ್ಲಿನ ವಿಷಯ ಕುರಿತು ಸ್ಪಂದಿಸಿ, ಚರ್ಚಿಸಲು ಈ ವರೆಗೂ ಸಂಘದ ಪದಾಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸದಿರುವುದು ವಿಷಾದನೀಯ ಸಂಗತಿ. ಇದೀಗ ಪರಿಸ್ಥತಿ ಇನ್ನೂ ಬಿಗಡಾಯಿಸಿದೆ. ರಾಜ್ಯದಲ್ಲಿ ಪ್ರತಿ ಆಶಾ ಕಾರ್ಯಕರ್ತೆಗೆ ಈಗಾಗಲೇ ಮಾಸಿಕ ಸರಾಸರಿ8000-9000 ರೂ. ಪ್ರೋತ್ಸಾಹ ಧನದ ವಿವಿಧ ಕೆಲಸಗಳ ಹಣವನ್ನು ಮತ್ತು ಗೌರವಧನ ಹಣವನ್ನು ಬಿಡಿಬಿಡಿಯಾಗಿ ನೀಡಲಾಗುತ್ತದೆ. ಎಲ್ಲ ಚಟುವಟಿಕೆಗಳನ್ನು ಬಿಡಿಬಿಡಿಯಾಗಿ ಪೋರ್ಟಲ್ನಲ್ಲಿ ದಾಖಲು ಮಾಡಬೇಕಾಗಿರುವುದರಿಂದ ಈ ಹಣ ಸರಿಯಾಗಿ ತಲುಪುತ್ತಿಲ್ಲ. ಆದ್ದರಿಂದ ಪ್ರೋತ್ಸಾಹ ಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ಒಂದೇ ನಿಶ್ಚಿತ ಗೌರವಧನ 12,000 ರೂ. ಪ್ರತಿ ತಿಂಗಳು ನೀಡಬೇಕು. ಕೋವಿಡ್ ಸೋಂಕು ನಿಯಂತ್ರಿಸಲು ಅಮೂಲ್ಯವಾದ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯ ರಕ್ಷಿಸುವುದು, ಸೋಂಕಿತ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ ನೀಡುವುದು ಮತ್ತು ಎಲ್ಲ ರಕ್ಷಣಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕು ಎಂದು ವಿನಂತಿಸಿದರು.
ನಿಯೋಗದಲ್ಲಿ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ, ಮುಖಂಡರಾದ ಚೇತನಾ ಹಿರೇಮಠ, ರೇಶ್ಮಾ ಗಿರಣಿ, ಪುಷ್ಪಾ ಮಡೂÉರಮಠ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !