ಕೋವಿಡ್ ನಿಯಂತ್ರಣಕೆ ಅಧಿಕಾರಿಗಳ ಪಾತ್ರ ಮಹತದ್ದು
Team Udayavani, Jul 7, 2020, 4:35 PM IST
ಕುಕನೂರು: ಕೋವಿಡ್ ನಿಯಂತ್ರಿಸುವಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಗ್ರಾಪಂ ಅಧ್ಯಕ್ಷ ಫಕ್ಕಿರೇಶ ಆರೇರ ಹೇಳಿದರು.
ತಾಲೂಕಿನ ಭಾನಾಪೂರ ಗ್ರಾಪಂನಲ್ಲಿ ಗ್ರಾಪಂ ವತಿಯಿಂದ ಕೋವಿಡ್ ವಾರಿಯರ್ಸ್ಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಕೋವಿಡ್ ವಿರುದ್ಧ ಹೋರಾಟ ನಡೆಸಿದ್ದಾರೆ. ಗ್ರಾಪಂ ಮಟ್ಟದಲ್ಲಿ ಆರೋಗ್ಯ ಇಲಾಖೆ, ಗ್ರಾಪಂ, ಕಂದಾಯ, ಆಶಾ, ಸೇರಿದಂತೆ ಪ್ರತಿಯೊಬ್ಬರು ತಮ್ಮ ಜೀವನದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಟ ನಡೆಸಿದ್ದಾರೆ.
ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಅಗ್ನಿಶಾಮಕ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿದೆ. ಒಟ್ಟಾರೆಯಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್ ವಾರಿಯರ್ಸ್ ಚೆನ್ನಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಪಿಡಿಒ ಪರಶುರಾಮ ನಾಯಕ, ಬಂದಮ್ಮ ಜಂಗ್ಲಿ, ವಿಶಾಲಾಕ್ಷಿ ರೇಣುಕಾ, ಕೃಷ್ಣಾ ಅಬ್ಬಿಗೇರಿ, ಭೀಮಪ್ಪ, ಮಹೇಶ, ಸವಿತಾ, ನೇತ್ರಾ, ಗ್ರಾಪಂ ಸರ್ವಸದಸ್ಯರು, ಗುರು-ಹಿರಿಯರು, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್