ಕೋವಿಡ್ ಸಂಕಷ್ಟದೊಂದಿಗೆ ಕೇಂದ್ರದಿಂದ ಇಂಧನ ಕಷ್ಟ


Team Udayavani, Jul 8, 2020, 2:47 PM IST

ಕೋವಿಡ್ ಸಂಕಷ್ಟದೊಂದಿಗೆ ಕೇಂದ್ರದಿಂದ ಇಂಧನ ಕಷ್ಟ

ಮುಧೋಳ: ಕೋವಿಡ್  ಸಂಕಷ್ಟದ ಸಮಯದಲ್ಲೂ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಬಡ ಜನರಿಗೆ ಕಷ್ಟ ಕೊಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಸತೀಶ ಬಂಡಿವಡ್ಡರ ಆರೋಪಿಸಿದರು.

ನಗರದ ರನ್ನ ವೃತ್ತದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್‌-ಡಿಸೇಲ್‌ ಬೆಲೆ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು. ಕೋವಿಡ್‌-19 ಕಷ್ಟದ ಸಮಯದಲ್ಲಿ ಜನಸಾಮಾನ್ಯರ ಬಳಿ ದುಡ್ಡಿಲ್ಲ. ಯಾವ ಉದ್ಯಮಿಗಳ ಬಳಿಯೂ ದುಡ್ಡಿಲ್ಲ. ಯಾರ ಆರ್ಥಿಕ ಪರಿಸ್ಥಿತಿಯೂ ಚೆನ್ನಾಗಿಲ್ಲ. ಇಂತಹ ಸಮಯದಲ್ಲಿ ಜನಸಾಮಾನ್ಯರಿಗೆ ಸಹಾಯ ಮಾಡುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜವಾಬ್ದಾರಿ. ಆದರೆ, ಸರ್ಕಾರ ಬೇಕಾಬಿಟ್ಟಿಯಾಗಿ ವರ್ತಿಸುವ ಜತೆಗೆ ಬೆಲೆ ಏರಿಕೆಗೆ ಕಡಿವಾಣ ಹಾಕುತ್ತಿಲ್ಲ. ಇದರಿಂದ ಜನರು ರೊಚ್ಚಿಗೆದ್ದಿದ್ದಾರೆ ಎಂದರು.

ರಾಜ್ಯ ಸರಕಾರದಿಂದ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪಿಪಿಇ ಕಿಟ್‌, ಸ್ಯಾನಿಟೈಸರ್‌ ಖರೀದಿಯಲ್ಲೂ ಕೋಟ್ಯಂತರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಎಸ್‌. ಜಿ. ನಂಜಯ್ಯನಮಠ ಮಾತನಾಡಿ, ಕೇಂದ್ರ ಸರಕಾರ ಕಳೆದ 20 ದಿನಗಳಲ್ಲಿ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಗಳು ತಲಾ 10 ರೂ. ವರೆಗೆ ಏರಿಕೆ  ಮಾಡಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಕೋವಿಡ್‌ 19 ಸಮಯದಲ್ಲಿ ಜನರಿಗೆ ಸಹಾಯ ಮಾಡುವುದನ್ನು ಬಿಟ್ಟು ತೊಂದರೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿ, ಜನ ಕಷ್ಟದಲ್ಲಿದ್ದಾರೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ರನ್ನ ವೃತ್ತದಿಂದ ತಹಶೀಲ್ದಾರ್‌ ಕಚೇರಿವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆ ಮೂಲಕ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಲೋಕಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲೋಕಣ್ಣ ಕೊಪ್ಪದ, ಬಾಬು ಗೋಲಶೆಟ್ಟಿ, ಕಾಶಿಮಸಾಬ ಕೆಸರಟ್ಟಿ, ದುಂಡಪ್ಪ ಲಿಂಗರಡ್ಡಿ, ಗಿರೀಶ ಲಕ್ಷಾಣಿ, ಪಾಂಡಪ್ಪ ಹೂವನ್ನವರ, ಸುಧೀರ ಅರಳಿಕಟ್ಟಿ, ಕಾಂತುಗೌಡ ಪಾಟೀಲ, ಸುಭಾಸ ಗಸ್ತಿ, ಹಣಮಂತ ಅಡವಿ, ತಿಮ್ಮಣ್ಣ ಹಲಗತ್ತಿ, ಶೋಭಾ ಜಿಗಜಿನ್ನಿ, ತಿರುಪತಿ ಬಂಡಿವಡ್ಡರ, ಶ್ರೀಕಾಂತ ಕೋಳಿ, ಕುಮಾರ ಬಂಡಿವಡ್ಡರ, ಅಶೋಕ ಬಿಲ್ಲನ್ನವರ, ಮನು ಕೆರಕಲಮಟ್ಟಿ, ಸಿದ್ದು ದೇವಗೋಳ, ಬಸವರಾಜ ಇಟ್ಟನ್ನವರ, ಜಗನ್ನಾಥ ಪವಾರ, ನವಿನ ಬದ್ರಿ, ಗುರು ಮಠದ, ವೈ.ಎಸ್‌. ಲೋಗಾಂವಿ, ಮಂಜುನಾಥ ಮಂಟೂರ, ಗೋಪಾಲ ಗುಣದಾಳ, ಮಲ್ಲು ಪೂಜಾರಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.