ಸೋಂಕಿತನ ಶವ ಸುಟ್ಟ ಪ್ರಕರಣಕ್ಕೆ ರಾಜಕೀಯ ತಿರುವು


Team Udayavani, Jul 9, 2020, 4:06 PM IST

ಸೋಂಕಿತನ ಶವ ಸುಟ್ಟ ಪ್ರಕರಣಕ್ಕೆ ರಾಜಕೀಯ ತಿರುವು

ಕಾರವಾರ: ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕಾರವಾರ: ಕೋವಿಡ್‌ ಹೊಂದಿದ್ದ ವ್ಯಕ್ತಿ ಕಳೆದ ಸೋಮವಾರ ಮಧ್ಯಾಹ್ನ ಮೃತಪಟ್ಟ ನಂತರ ಆತನ ಶವ ಸಂಸ್ಕಾರಕ್ಕೆ ಕಾರವಾರ ಮತ್ತು ಪಕ್ಕದ ನಾಲ್ಕು ಹಳ್ಳಿಗಳ ಸ್ಮಶಾನದಲ್ಲಿ ಅವಕಾಶ ಸಿಗದೆ ಸೋಮವಾರ ತಡರಾತ್ರಿ ತನಕ ಅಧಿಕಾರಿಗಳು ಪೇಚಾಡಿದ ಘಟನೆಗೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಮಾಜಿ ಶಾಸಕ ಸತೀಶ್‌ ಸೈಲ್‌ ಕೋವಿಡ್‌ನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ಸುರಕ್ಷಿತ ಸ್ಥಳದಲ್ಲಿ ಮಾಡಲು ಆಡಳಿತ ಪಕ್ಷದ ಶಾಸಕರು ಎಡವಿದ್ದಾರೆ ಎಂದು ಆರೋಪಿಸಿದರೆ, ಇದನ್ನು ಆಡಳಿತ ಪಕ್ಷದ ಹಾಲಿ ಶಾಸಕಿ ರೂಪಾಲಿ ನಾಯ್ಕ ಅಲ್ಲಗಳೆದಿದ್ದಾರೆ.  ಕೋವಿಡ್‌ ರೋಗಿಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೋವಿಡ್‌ನಿಂದಾದ ಮೃತರ ಅಂತ್ಯಕ್ರಿಯೆಗೆ ಪ್ರತ್ಯೇಕ ಸ್ಥಳ ಹುಡುಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಘಟನೆ ಹಿನ್ನೆಲೆ: ಬೆಂಗಳೂರಿನಲ್ಲಿ ನಿಮೋನಿಯದಿಂದ ಬಳಲುತ್ತಿದ್ದ 42 ವರ್ಷದ ಒಬ್ಬರು ಚಿಕಿತ್ಸೆಗೆ ಆಸ್ಪತ್ರೆ ಸಿಗದೇ ಸ್ವಂತ ಊರಾದ ಶಿರಸಿಗೆ ಮರಳಿದ್ದರು. ಅವರು ಕಳೆದ ರವಿವಾರ ಶಿರಸಿಗೆ ಬಂದು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಅವರಿಗೆ ಕೋವಿಡ್‌ ಇರುವುದು ಖಚಿತವಾಗುತ್ತಿದ್ದಂತೆ ಕಾರವಾರ ವೈದ್ಯಕೀಯ ಕಾಲೇಜು ಕೋವಿಡ್‌ ಘಟಕಕ್ಕೆ ಚಿಕಿತ್ಸೆಗೆ ಕರೆತರಲಾಯಿತು. ಆದರೆ ಅವರು ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದರು. ಶವವನ್ನು ಶಿರಸಿಗೆ ಕೊಂಡೊಯ್ಯಲು ಕುಟುಂಬದವರು ಆಸಕ್ತಿ ತೋರದ ಕಾರಣ, ಅಧಿಕಾರಿಗಳು ಕಾರವಾರದ ಹೈವೇ ಪಕ್ಕದ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಮುಂದಾದರು. ಅಲ್ಲಿನ ಜನತೆಯಿಂದ ವಿರೋಧ ವ್ಯಕ್ತವಾದ ಕಾರಣ ಹಬ್ಬುವಾಡ ಸ್ಮಶಾನದಲ್ಲಿ ಸಂಸ್ಕಾರಕ್ಕೆ ಯತ್ನಿಸಿದರೆ ಅಲ್ಲೂ ವಿರೋಧ ವ್ಯಕ್ತವಾಯಿತು. ಮಾಜಾಳಿ ಗ್ರಾಮದ ಸ್ಮಾಶನದಲ್ಲಿ ಮಾಜಿ ಶಾಸಕರಿಂದ ವಿರೋಧ ವ್ಯಕ್ತವಾಯಿತು ಎನ್ನಲಾಗಿದೆ. ಚೆಂಡಿಯಾ, ತೊಡೂರು ಗ್ರಾಪಂ ವ್ಯಾಪ್ತಿಯ ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತವಾದ ಕಾರಣ ಸೋಮವಾರ ತಡರಾತ್ರಿ ಹೆದ್ದರಿ ಪಕ್ಕದ ಸಂಕ್ರುಬಾಗ ಅರಣ್ಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಶವ ದಹನ ಮಾಡಲಾಯಿತು. ದಹನ ಕ್ರಿಯೆ ಸರಿಯಾಗಿಲ್ಲ ಎಂಬ ಆರೋಪ ಬರುತ್ತಿದ್ದಂತೆ ಮಂಗಳವಾರ ಶವ ದಹನ ಮಾಡಿದ ಜಾಗದಲ್ಲಿ ಟ್ರಕ್‌ನಲ್ಲಿ ಮಣ್ಣು ತಂದು ಸುರಿಯಲಾಯಿತು.

ರಾಜಕೀಯ ತಿರುವು: ಈ ಘಟನೆ ಕಾರವಾರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಮಾಜಿ ಶಾಸಕರು, ಇದೊಂದು ಆಡಳಿತದ ವೈಫಲ್ಯ, ಶಾಸಕಿಗೆ ಮುಂದಾಲೋಚನೆಯಿಲ್ಲ. ಕೋವಿಡ್‌ ರೋಗಿ ಸತ್ತರೆ, ಪ್ರತ್ಯೇಕ ಸ್ಥಳದಲ್ಲಿ ಶವ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಜನರ ಆತಂಕ ನಿವಾರಿಸಲು, ಜನರ ಆಗ್ರಹದಂತೆ ಶವ ದಹನಕ್ಕೆ ಸ್ಥಳೀಯ ಸ್ಮಶಾನಗಳಲ್ಲಿ ಅವಕಾಶ ನೀಡಲಿಲ್ಲ ಎಂದಿದ್ದಾರೆ. ಇದಕ್ಕೆ ಹಾಲಿ ಶಾಸಕಿ ರೂಪಾಲಿ ನಾಯ್ಕ, ಸರ್ಕಾರದ ಪ್ರತಿ ಕೆಲಸದಲ್ಲೂ ಹುಳುಕು ಹುಡುಕಲಾಗುತ್ತಿದೆ ಎಂದು ಅಪ್ತರ ಬಳಿ ಅಳಲು ತೋಡಿಕೊಂಡಿದ್ದಾರೆ. ಬುಧವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೋವಿಡ್‌ ರೋಗಿಗಳು ಸಾವನ್ನಪ್ಪಿದರೆ, ಅವರ ಶವ ಸಂಸ್ಕಾರಕ್ಕೆ ಸುರಕ್ಷಿತ ಸ್ಥಳ ಹುಡುಕಲು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಸಹ ವಿವಿಧ ತಾಲೂಕುಗಳ
ತಹಶೀಲ್ದಾರರು, ಸಹಾಯಕ ಕಮಿಷನರ್‌ ಜೊತೆ ಸಭೆ ನಡೆಸಿ, ಶವ ಸಂಸ್ಕಾರಕ್ಕೆ ಅಡ್ಡಿ ಮಾಡುವವರ ವಿರುದ್ಧ ಕೇಸು ದಾಖಲಿಸಲು ಸೂಚಿಸಿದರು. ಈತನ್ಮಧ್ಯೆ ನಗರದಲ್ಲಿ ಎಲೆಕ್ಟ್ರಾನಿಕ್‌ ಚಿತಾಗಾರ ನಿರ್ಮಿಸುವಂತೆ ಬೇಡಿಕೆ ಸಹ ಕೇಳಿ ಬಂದಿದ್ದು, ಜಿಲ್ಲಾಧಿಕಾರಿಗೆಈ ಸಂಬಂಧ ಜನಶಕ್ತಿ ವೇದಿಕೆ ಲಿಖೀತ ಮನವಿಯೂ ಸಲ್ಲಿಸಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.