ತರಕಾರಿ ಖರೀದಿಗೆ ಮಂಗಳೂರಿಗೆ ತೆರಳುವ ವಾಹನಗಳಿಗೆ ಪ್ರತ್ಯೇಕ ಪಾಸ್‌

ಕಾಸರಗೋಡು: ಕೋವಿಡ್ ಕೋರ್‌ ಸಮಿತಿ ಸಭೆಯಲ್ಲಿ ತೀರ್ಮಾನ

Team Udayavani, Jul 10, 2020, 5:58 AM IST

ತರಕಾರಿ ಖರೀದಿಗೆ ಮಂಗಳೂರಿಗೆ ತೆರಳುವ ವಾಹನಗಳಿಗೆ ಪ್ರತ್ಯೇಕ ಪಾಸ್‌

ಕಾಸರಗೋಡು: ಜಿಲ್ಲೆಯಿಂದ ತರಕಾರಿ ಖರೀದಿಗೆ ಮಂಗಳೂರಿಗೆ ತೆರಳುವ ವಾಹನಗಳಿಗೆ ಪ್ರತ್ಯೇಕ ಪಾಸ್‌ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್ ಕೋರ್‌ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು.ಆರ್‌.ಟಿ.ಒ. ಪಾಸ್‌ ಮಂಜೂರು ಮಾಡಲಿದೆ. ವಾಹನದ ಚಾಲಕ ಮತ್ತು ಕ್ಲೀನರ್‌ಗಳಿಗೆ ಪ್ರತ್ಯೇಕ ಪಾಸ್‌ ಇರುವುದು. ವಾಹನಗಳಲ್ಲಿ ತೆರಳುವವರು ಪ್ರತಿ ವಾರಕ್ಕೊಮ್ಮೆ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೊಳಪಡಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗುರುತು ಚೀಟಿ ಕಡ್ಡಾಯ
ಗಡಿ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ಆಗಮಿಸುವವರಿಗೆ ಗುರುತು ಚೀಟಿ ಕಡ್ಡಾಯ ಮಾಡಲಾಗಿದೆ. ಇತರ ರಾಜ್ಯಗಳಿಗೆ ವಿವಾಹ ಸಂಬಂಧ ಸಮಾರಂಭಗಳಿಗೆ ತೆರಳುವವರಿಗೆ ನೂತನವಾಗಿ ಜು. 31ರ ವರೆಗೆ ಪಾಸ್‌ ನೀಡುವುದಿಲ್ಲ. ಈ ಸಂಬಂಧ ಈಗಾಗಲೇ ಪಾಸ್‌ ಇರುವ ಕುಟುಂಬದಲ್ಲಿ 5 ಮಂದಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ನಿರ್ಧರಿಸಲಾಗಿದೆ.

65 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ, 10 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳಿಗೆ ಸಾರ್ವಜನಿಕ ಸಂಚಾರಕ್ಕೆ ಅನುಮತಿ ಇಲ್ಲ. ಸಾರ್ವಜನಿಕ ಸಮಾರಂಭದಲ್ಲಿ 10ಕ್ಕಿಂತ ಹೆಚ್ಚು ಮಂದಿ ಭಾಗವಹಿಸಕೂಡದು. ಸುಭಿಕ್ಷ ಕೇರಳಂನಂತಹಾ ಕಾರ್ಯಕ್ರಮಗಳ ಉದ್ಘಾಟನ ಸಭೆಗಳನ್ನು ಜು. 31ರ ವರೆಗೆ ನಡೆಸಕೂಡದು. ಜನ ಗುಂಪು ಸೇರಬಾರದು. ಕ್ರೀಡಾ ಸ್ಪರ್ಧೆ ನಡೆಸಲು ಜು. 31ರ ವರೆಗೆ ಅನುಮತಿಯಿಲ್ಲ. ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಣ್ಮಕಜೆ ಪಂ. ಗಡಿ ಪ್ರದೇಶದಲ್ಲಿ ತಾತ್ಕಾಲಿಕ ಪಡಿತರ ಅಂಗಡಿಯನ್ನು ಆರಂಭಿಸಲು ಜಿಲ್ಲಾ ಸಪ್ಲೈ ಅಧಿಕಾರಿಗೆ ಆದೇಶ ನೀಡಲಾಗಿದೆ.

ಸಭೆಯಲ್ಲಿ ಹೆಚ್ಚುವರಿ ದಂಡಾಧಿಕಾರಿ ಎನ್‌. ದೇವಿದಾಸ್‌, ಉಪಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌, ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್‌, ವಲಯ ಕಂದಾಯಾಧಿಕಾರಿ ಆರ್‌. ಅಹಮ್ಮದ್‌ ಕಬೀರ್‌, ಡಿ.ವೈ.ಎಸ್‌.ಪಿ. ಸುನಿಲ್‌ ಕುಮಾರ್‌ ಸಹಿತ ಜಿಲ್ಲಾ ಕೋವಿಡ್ ಕೋರ್‌ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ ಕರೆಮಾಡಿ
ಕೋವಿಡ್‌ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಸಂಬಂಧ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಕೋವಿಡ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 04994 255001ಗೆ ಕರೆ ಮಾಡಬಹುದು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.