ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Jul 10, 2020, 5:38 AM IST
ಮಳವಳ್ಳಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ತಾಪಂ ಮುಂದೆ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ತಾಪಂ ಮುಂಭಾಗದಲ್ಲಿ ಪ್ರತಿಭಟನಾಕಾರನ್ನು ಉದ್ದೇಶಿಸಿ ಸಿಐಟಿಯುನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಕೆ.ತಿಮ್ಮೇಗೌಡ ಮಾತನಾಡಿ, ಸರ್ಕಾರದಿಂದ ಎಲ್ಲಾ ಗ್ರಾಪಂ ಸಿಬ್ಬಂದಿಗೆ 2018 ಮಾರ್ಚ್ನಿಂದ ವೇತನ ನೀಡಲಾಗುತ್ತಿದೆ.
ಕನಿಷ್ಠ ವೇತನಕ್ಕೆ ಬೇಕಾಗಿರುವ 900 ಕೋಟಿ ರೂ.ಬೇಕು. ಆದರೆ, ಹಣಕಾಸು ಇಲಾಖೆಯಿಂದ 518 ಕೋಟಿ ಮಾತ್ರ ಮಂಜೂರಾಗಿದೆ. ವಾರ್ಷಿಕವಾಗಿ ಬಿಡುಗಡೆ ಮಾಡುತ್ತಿರುವ 518 ಕೋಟಿ ಅನುದಾನದಲ್ಲಿ ವರ್ಷದಲ್ಲಿ 8 ತಿಂಗಳು ಮಾತ್ರ ವೇತನ ಪಾವತಿಯಾಗುತ್ತಿದ್ದು, ಉಳಿದ ನಾಲ್ಕು ತಿಂಗಳ ವೇತನ 2018-19ನೇ ಸಾಲಿನಿಂದಲೂ 2020-21ವರೆಗೂ ಪ್ರತಿ ವರ್ಷ ನಾಲ್ಕು ತಿಂಗಳ ವೇತನ ಬಾಕಿಯಿದೆ.
ಬಾಕಿ ಹಣ ಬಿಡುಗಡೆಗೆ ನಿರಂತರವಾಗಿ ಹೋರಾಟದ ಮೂಲಕ ಸರ್ಕಾರ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಕರ ವಸೂಲಿಗಾರ ಮತ್ತು ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಶೇ.70ರಿಂದ ಶೇ.100 ಕೋಟಾ ಹೆಚ್ಚಿಸಬೇಕು. ಎಲ್ಲಾ ಸಿಬ್ಬಂದಿಗೆ ಪಿಂಚಣಿ ಮಂಜೂರು ಮಾಡಬೇಕು. ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು.
ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಉಳಿಸಿಕೊಳ್ಳಲು ಆದಾಯವನ್ನು 1.20 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಹೀಗೆ ವಿವಿಧ ಬೇಡಿಕೆಗಳ ಈಡೇರಿಕೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೌಕರರ ಸಂಘದ ಹಲಗೂರು ನಾಗರಾಜು, ಬಸವಲಿಂಗೇಗೌಡ, ರೇಣುಕಮ್ಮ, ನವೀನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ