ಪ್ರವಾಸಿಗರಿಗೆ ನಿರ್ಬಂಧ: ಸಫಾರಿ ಬಂದ್‌


Team Udayavani, Jul 10, 2020, 5:47 AM IST

avasi-bandh

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ತಡೆಗಟ್ಟಲು ಶುಕ್ರವಾರದಿಂದ ಎಚ್‌.ಡಿ.ಕೋಟೆ ತಾಲೂಕಿಗೆ ಹೊರರಾಜ್ಯ/ವಿದೇಶ/ಹೊರಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌  ನಿರ್ಬಂಧ ವಿಧಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್‌-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಹಾಗೂ ಸಮುದಾಯದ ತುರ್ತು ಪರಿಸ್ಥಿತಿ ಎದುರಿಸಲು ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಧಿಕಾರಿಗಳು ಸರ್ಕಾರದ ಆದೇಶದಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಜು.10ರಿಂದ ಮುಂದಿನ ಆದೇಶದವರೆಗೆ ಕೋವಿಡ್‌-19 ಸೋಂಕು ಹರಡದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಎಚ್‌.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್‌, ರೆಸಾರ್ಟ್‌, ಲಾಡ್ಜ್, ಹೋಂ ಸ್ಟೇ, ವಸತಿ ಗೃಹಗಳಲ್ಲಿ ವಸತಿ ಸೌಕರ್ಯ ನೀಡದಂತೆ ಆದೇಶ ಹೊರಡಿಸಿದ್ದಾರೆ. ಹೊರ ಜಿಲ್ಲೆ, ರಾಜ್ಯ, ಹಾಗೂ ವಿದೇಶಗಳಿಂದ ಬರುವ  ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡುವಂತಿಲ್ಲ.

ಅಲ್ಲದೇ ಇನ್ನು ಮುಂದೆ ಹೊರಗಿನ ಪ್ರವಾಸಿಗರ ಆನ್‌ ಲೈನ್‌, ಆಫ್ಲೈನ್‌ ಬುಕ್ಕಿಂಗ್‌ ಸ್ವೀಕರಿಸುವಂತಿಲ್ಲ ಎಂದು ಸೂಚಿಸಿದ್ದಾರೆ. ಈಗಾಗಲೇ ಆಗಮಿಸಿ ವಸತಿ ಸೌಕರ್ಯ ಹೊಂದಿರುವ  ವಾಸಿಗರನ್ನು  ಬಲವಂತವಾಗಿ ವಾಪಸ್‌ ಕಳುಹಿಸದೇ ಅವರನ್ನು ಅವಧಿ ಪೂರ್ಣಗೊಳ್ಳುವವರೆಗೂ ಕಾಯ್ದಿರಿಸುವುದು ಹಾಗೂ ಈಗಾಗಲೇ ಮುಂಗಡ ಬುಕ್ಕಿಂಗ್‌ ಮಾಡಿ ಬಂದಿಲ್ಲದಿದ್ದರೆ ಬುಕ್ಕಿಂಗ್‌ ರದ್ದು ಪಡಿಸುವಂತೆ ತಿಳಿಸಿದ್ದಾರೆ.

ಈ ನಿರ್ಬಂಧಗಳು  ಎಚ್‌.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಅನ್ವಯವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆ ಸಮಾರಂಭಗಳು ರದ್ದು: ಕೋವಿಡ್‌-19 ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಭೆ, ಸಮಾರಂಭಗಳನ್ನು ಕೈ ಬಿಡಬೇಕು. ಜನದಟ್ಟಣೆ ಕಾರ್ಯಕ್ರಮಗಳು ಹಾಗೂ ಜನ ಸೇರುವುದನ್ನು ತಡೆಗಟ್ಟಲು ಭೂಮಿ  ಪೂಜೆ, ಉದ್ಘಾಟನೆ ಹಾಗೂ ಇತರೆ ಸಮಾರಂಭಗಳನ್ನು ಕೈ ಬಿಡುವಂತೆ ಹಾಗೂ ಅನಿವಾರ್ಯ ಪರಿಸ್ಥಿತಿ ಯಲ್ಲಿ ಸಾಂಕೇತಿಕವಾಗಿ 20 ಜನರು ಮೀರದ ಹಾಗೆ ಕಾರ್ಯಕ್ರಮ ವನ್ನು ನಡೆಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.