ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಸುರೇಶ ಅಂಗಡಿ
Team Udayavani, Jul 11, 2020, 9:25 AM IST
ಬೆಳಗಾವಿ: ಕೋವಿಡ್ ನಿಂದಾಗಿ ಇಡೀ ದೇಶವೇ ಸಮಸ್ಯೆಯಲ್ಲಿ ಇದೆ. ಇಂತಹ ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸಿದ್ದರಾಮಯ್ಯ ಬಹಳ ಹಿರಿಯರು. ಟೀಕೆಗಾಗಿ ರಾಜಕಾರಣ ಮಾಡುವುದು ಸರಿಯಲ್ಲ. ಈಗ ಎಲ್ಲರೂ ಒಟ್ಟಾಗಿ ರಾಜ್ಯ ಮತ್ತು ದೇಶದ ಸ್ಥಿತಿಯನ್ನು ಸುಧಾರಿಸಲು ಸಹಕರಿಸಬೇಕು ಎಂದರು.
ರಾಜಕಾರಣದಲ್ಲಿ ವಿಪಕ್ಷ ನಾಯಕರಿಂದ ಟೀಕೆ ಬರುವುದು ಸಹಜ. ಆದರೆ ಸಿದ್ದರಾಮಯ್ಯ ಅವರು ಟೀಕಿಸಲೇ ಬೇಕು ಎಂದು ಟೀಕಿಸುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಸೇರಿ ಹಿರಿಯರಿಗೆಲ್ಲ ಗೌರವ ಕೊಡುತ್ತಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ