ಅಂತ್ಯಸಂಸ್ಕಾರದ ಬಳಿಕ ರಸ್ತೆಗೆಸೆದ ಪಿಪಿಇ ಕಿಟ್! ಶಿವಮೊಗ್ಗ ಪಾಲಿಕೆ ವಿರುದ್ಧ ಪ್ರತಿಭಟನೆ
Team Udayavani, Jul 11, 2020, 2:30 PM IST
ಶಿವಮೊಗ್ಗ ರೋಟರಿ ಶವಾಗಾರದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವೃದ್ಧನನ್ನು ಪಾಲಿಕೆ ಅಧಿಕಾರಿಗಳು ಚಿತಗಾರದಲ್ಲಿ ಅರ್ಧಂಬರ್ಧ ಸುಟ್ಟು ಬಂದಿದ್ದರು. ಶವವನ್ನು ನಾಯಿಗಳು ಎಳೆದಾಡುತ್ತಿರುವುದನ್ನು ಕಂಡ ಜನ ಗಲಾಟೆ ಆರಂಭಿಸಿದ ಮೇಲೆ ಮತ್ತೆ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳು ಶವವನ್ನು ಸಂಪೂರ್ಣವಾಗಿ ಸುಟ್ಟು ಬಂದಿದ್ದರು. ಆದರೆ ಈ ವೇಳೆ ಪಾಲಿಕೆ ಅಧಿಕಾರಿಗಳು ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದು, ಶವ ಸಂಸ್ಕಾರದ ವೇಳೆ ಧರಿಸಿದ್ದ ಪಿಪಿಇ ಕಿಟ್ ಗಳನ್ನು ರೋಟರಿ ಚಿತಾಗಾರದ ಎದುರಿನ ರಸ್ತೆ ಪಕ್ಕದಲ್ಲೇ ಬೀಸಾಡಿ ಹೋಗಿದ್ದಾರೆ. ಪಿಪಿಇ ಕಿಟ್ ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆದಿರುವ ಮಹಾನಗರ ಪಾಲಿಕೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎಚ್.ಸಿ.ಯೋಗೀಶ್ ನೇತೃತ್ವದಲ್ಲಿ ರಾಜೀವ್ ಗಾಂಧಿ ಬಡಾವಣೆ ಜನರು ಬಿ.ಎಚ್.ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ